Advertisement
ಸುದ್ದಿಗಳು

ಔಷಧಿಯ ಗುಣಗಳುಳ್ಳ ಇಪ್ಪೆ ಮರ | ಎಲೆ, ಹೂ, ಕಾಯಿ, ತೊಗಟೆ ಎಲ್ಲವೂ ಉಪಯೋಗ….! |

Share

ಔಷಧಿಯ ಗುಣಗಳುಳ್ಳ ಇಪ್ಪೆ ಮರ ಮಲೆನಾಡಿನ ಕಾಡು ಬೆಳೆಗಳಲ್ಲಿ ಒಂದು.ಮರದ ಬುಡದಲ್ಲಿ ಕುಳಿತರು ಸಾಕು ಮನಸ್ಸು ಶಾಂತವಾಗುತ್ತದೆ. ಇದರ ಎಲೆ ಹೂವು ಕಾಯಿ ತೊಗಟೆ ಇವು ಉತ್ತಮ ಔಷಧಿಯು ಹೌದು. ರುಚಿಯು ಹೌದು.

Advertisement
Advertisement
Advertisement
Advertisement

Advertisement

ಸಾಧಾರಣವಾಗಿ ಮೇ ಕೊನೆಯ ವಾರಗಳಲ್ಲಿ ಇದರ ಹಣ್ಣು ಬೀಜ ಸಿಕ್ಕುತ್ತದೆ. ಬೀಜವನ್ನು ಸಂಗ್ರಹಿಸಿ ಉಪ್ಪಾಗೆ, ಮುರುಗನ ಬೀಜ ದಿಂದ ಎಣ್ಣೆ ತೆಗೆದಂತೆ (ತುಪ್ಪ) ತೆಗೆಯಬೇಕು ಇದು ಎರಡು ವರ್ಷಕ್ಕೂ ಹಾಳಾಗುವುದಿಲ್ಲ.

1) ಇಪ್ಪೆ ತುಪ್ಪವನ್ನು ಬಿಸಿ ಮಾಡಿ ಹಚ್ಚುವುದರಿಂದ ಸಂಧಿವಾತ ಗುಣವಾಗುತ್ತದೆ.
2) ತಲೆಗೆ ಹಾಕುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆನೋವು ಗುಣವಾಗುತ್ತದೆ.
3) ಇಪ್ಪೇಚಕ್ಕೆ ಕಷಾಯ ಸಂಧಿವಾತಕ್ಕೆ ಒಳ್ಳೆಯ ಔಷಧಿ.
4) ತೊಗಟೆಯ ಪುಡಿಯಲ್ಲಿ ಹಲ್ಲು ಉಜ್ಜುವುದರಿಂದ ಹಲ್ಲಿನ ಸಮಸ್ಯೆಗಳು ದೂರವಾಗುತ್ತವೆ.
5) ತೊಗಟೆಯ ಪುಡಿಯನ್ನು ತೋನ್ನು ರೋಗದಲ್ಲಿ ಉಪಯೋಗಿಸುತ್ತೇನೆ.
6) ತೊಗಟೆಯ ಪುಡಿಯನ್ನು ಕ್ಯಾನ್ಸರ್ ರೋಗದಲ್ಲಿ ಬಳಸುತ್ತೇನೆ.
7) ತಿಪ್ಪೆಯ ಹೂವಿನಲ್ಲಿ ಮಾಡಿದ ಲೇಹ್ಯ ನಿದ್ದೆಗೆ ಮತ್ತು ಪುಷ್ಟಿಗೆ ತುಂಬಾ ಒಳ್ಳೆಯದು.
8) ಹೂವನ್ನು ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿ ಬೇಕಾದಾಗ ಶರಭತ್ ಮಾಡಿ ಕುಡಿಯಬಹುದು.
9) ಹೂವನ್ನು ನೀರು ಅಥವಾ ಹಾಲು ಹಾಕಿ ಕುದಿಸಿ ಕುಡಿಯುವುದರಿಂದ ಕರುಳಿನ ಹುಣ್ಣು ಗುಣವಾಗುತ್ತದೆ.
10) ಹಸಿ ಹೂವನ್ನು ತಿನ್ನುವುದರಿಂದ ಕೆಮ್ಮು ಗುಣವಾಗುತ್ತದೆ.
11) ಅರೆಬರೆ ವಣಗಿದ ಹಣ್ಣು ಯಾವ ಡ್ರೈಫ್ರೂಟಿಗೂ ಕಡಿಮೆ ಇಲ್ಲ. ಶಾಲಾ ದಿನಗಳಲ್ಲಿ ಮರದ ಕೆಳಗೆ ಹೆಕ್ಕಿ ತಿನ್ನುವುದೇ ಒಂದು ಸಂಭ್ರಮ. ಹೆಚ್ಚಾಗಿ ಮತ್ತು ಬರುವ ಸಾಧ್ಯತೆಯೂ ಇದೆ.
12) ಇದರ ಎಳೆಯ ಎಲೆಗಳನ್ನು ಎಣ್ಣೆಯಲ್ಲಿ ಕುದಿಸಿ ಕಿವಿಗೆ ಹಾಕುವುದರಿಂದ ಕಿವಿ ನೋವು ಗುಣವಾಗುತ್ತದೆ.
13) ಬೆಳೆದ ಮರದಿಂದ ಮಣೆ (ಕುಳಿತು ಕೊಳ್ಳಲು) ಮಾಡಿ ಕುಳಿತು ಜಪ ಮಾಡುವುದರಿಂದ ಬೇಗನೆ ಸಿದ್ದಿ ಆಗುವುದು ಎನ್ನುವ ನಂಬಿಕೆ.
14) ಮರದ ಕಡಗೋಲು ತಯಾರಿಸಿ ಮಜ್ಜಿಗೆ ಕಡೆಯುವುದರಿಂದ ವಾತರೋಗ ನಿವಾರಣೆ ಆಗುತ್ತದೆ. ದೇಹಕ್ಕೂ ತಂಪು.

Advertisement

ಖ್ಯಾತ ನಾಟಿ ವೈದ್ಯೆ ಸುಮನಾ ಮಳಗದ್ದೆಯವರು ಇಪ್ಪೆ ಮರದ ಉಪಯೋಗಗಳ ಬಗ್ಗೆ ಬಹಳ ಸೊಗಸಾಗಿ ಹೇಳಿದ್ದಾರೆ. ಅವರನ್ನು ಸಂಪರ್ಕಿಸೋದಾದ್ರೆ :  ಸುಮನಾ ಮಳಲಗದ್ದೆ 9980182883.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

3 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

3 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

3 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

3 hours ago

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…

3 hours ago

ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ

ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…

4 hours ago