Advertisement
ಸುದ್ದಿಗಳು

ಔಷಧಿಯ ಗುಣಗಳುಳ್ಳ ಇಪ್ಪೆ ಮರ | ಎಲೆ, ಹೂ, ಕಾಯಿ, ತೊಗಟೆ ಎಲ್ಲವೂ ಉಪಯೋಗ….! |

Share

ಔಷಧಿಯ ಗುಣಗಳುಳ್ಳ ಇಪ್ಪೆ ಮರ ಮಲೆನಾಡಿನ ಕಾಡು ಬೆಳೆಗಳಲ್ಲಿ ಒಂದು.ಮರದ ಬುಡದಲ್ಲಿ ಕುಳಿತರು ಸಾಕು ಮನಸ್ಸು ಶಾಂತವಾಗುತ್ತದೆ. ಇದರ ಎಲೆ ಹೂವು ಕಾಯಿ ತೊಗಟೆ ಇವು ಉತ್ತಮ ಔಷಧಿಯು ಹೌದು. ರುಚಿಯು ಹೌದು.

ಸಾಧಾರಣವಾಗಿ ಮೇ ಕೊನೆಯ ವಾರಗಳಲ್ಲಿ ಇದರ ಹಣ್ಣು ಬೀಜ ಸಿಕ್ಕುತ್ತದೆ. ಬೀಜವನ್ನು ಸಂಗ್ರಹಿಸಿ ಉಪ್ಪಾಗೆ, ಮುರುಗನ ಬೀಜ ದಿಂದ ಎಣ್ಣೆ ತೆಗೆದಂತೆ (ತುಪ್ಪ) ತೆಗೆಯಬೇಕು ಇದು ಎರಡು ವರ್ಷಕ್ಕೂ ಹಾಳಾಗುವುದಿಲ್ಲ.

1) ಇಪ್ಪೆ ತುಪ್ಪವನ್ನು ಬಿಸಿ ಮಾಡಿ ಹಚ್ಚುವುದರಿಂದ ಸಂಧಿವಾತ ಗುಣವಾಗುತ್ತದೆ.
2) ತಲೆಗೆ ಹಾಕುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆನೋವು ಗುಣವಾಗುತ್ತದೆ.
3) ಇಪ್ಪೇಚಕ್ಕೆ ಕಷಾಯ ಸಂಧಿವಾತಕ್ಕೆ ಒಳ್ಳೆಯ ಔಷಧಿ.
4) ತೊಗಟೆಯ ಪುಡಿಯಲ್ಲಿ ಹಲ್ಲು ಉಜ್ಜುವುದರಿಂದ ಹಲ್ಲಿನ ಸಮಸ್ಯೆಗಳು ದೂರವಾಗುತ್ತವೆ.
5) ತೊಗಟೆಯ ಪುಡಿಯನ್ನು ತೋನ್ನು ರೋಗದಲ್ಲಿ ಉಪಯೋಗಿಸುತ್ತೇನೆ.
6) ತೊಗಟೆಯ ಪುಡಿಯನ್ನು ಕ್ಯಾನ್ಸರ್ ರೋಗದಲ್ಲಿ ಬಳಸುತ್ತೇನೆ.
7) ತಿಪ್ಪೆಯ ಹೂವಿನಲ್ಲಿ ಮಾಡಿದ ಲೇಹ್ಯ ನಿದ್ದೆಗೆ ಮತ್ತು ಪುಷ್ಟಿಗೆ ತುಂಬಾ ಒಳ್ಳೆಯದು.
8) ಹೂವನ್ನು ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿ ಬೇಕಾದಾಗ ಶರಭತ್ ಮಾಡಿ ಕುಡಿಯಬಹುದು.
9) ಹೂವನ್ನು ನೀರು ಅಥವಾ ಹಾಲು ಹಾಕಿ ಕುದಿಸಿ ಕುಡಿಯುವುದರಿಂದ ಕರುಳಿನ ಹುಣ್ಣು ಗುಣವಾಗುತ್ತದೆ.
10) ಹಸಿ ಹೂವನ್ನು ತಿನ್ನುವುದರಿಂದ ಕೆಮ್ಮು ಗುಣವಾಗುತ್ತದೆ.
11) ಅರೆಬರೆ ವಣಗಿದ ಹಣ್ಣು ಯಾವ ಡ್ರೈಫ್ರೂಟಿಗೂ ಕಡಿಮೆ ಇಲ್ಲ. ಶಾಲಾ ದಿನಗಳಲ್ಲಿ ಮರದ ಕೆಳಗೆ ಹೆಕ್ಕಿ ತಿನ್ನುವುದೇ ಒಂದು ಸಂಭ್ರಮ. ಹೆಚ್ಚಾಗಿ ಮತ್ತು ಬರುವ ಸಾಧ್ಯತೆಯೂ ಇದೆ.
12) ಇದರ ಎಳೆಯ ಎಲೆಗಳನ್ನು ಎಣ್ಣೆಯಲ್ಲಿ ಕುದಿಸಿ ಕಿವಿಗೆ ಹಾಕುವುದರಿಂದ ಕಿವಿ ನೋವು ಗುಣವಾಗುತ್ತದೆ.
13) ಬೆಳೆದ ಮರದಿಂದ ಮಣೆ (ಕುಳಿತು ಕೊಳ್ಳಲು) ಮಾಡಿ ಕುಳಿತು ಜಪ ಮಾಡುವುದರಿಂದ ಬೇಗನೆ ಸಿದ್ದಿ ಆಗುವುದು ಎನ್ನುವ ನಂಬಿಕೆ.
14) ಮರದ ಕಡಗೋಲು ತಯಾರಿಸಿ ಮಜ್ಜಿಗೆ ಕಡೆಯುವುದರಿಂದ ವಾತರೋಗ ನಿವಾರಣೆ ಆಗುತ್ತದೆ. ದೇಹಕ್ಕೂ ತಂಪು.

ಖ್ಯಾತ ನಾಟಿ ವೈದ್ಯೆ ಸುಮನಾ ಮಳಗದ್ದೆಯವರು ಇಪ್ಪೆ ಮರದ ಉಪಯೋಗಗಳ ಬಗ್ಗೆ ಬಹಳ ಸೊಗಸಾಗಿ ಹೇಳಿದ್ದಾರೆ. ಅವರನ್ನು ಸಂಪರ್ಕಿಸೋದಾದ್ರೆ :  ಸುಮನಾ ಮಳಲಗದ್ದೆ 9980182883.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago