Advertisement
ಸುದ್ದಿಗಳು

ಔಷಧಿಯ ಗುಣಗಳುಳ್ಳ ಇಪ್ಪೆ ಮರ | ಎಲೆ, ಹೂ, ಕಾಯಿ, ತೊಗಟೆ ಎಲ್ಲವೂ ಉಪಯೋಗ….! |

Share

ಔಷಧಿಯ ಗುಣಗಳುಳ್ಳ ಇಪ್ಪೆ ಮರ ಮಲೆನಾಡಿನ ಕಾಡು ಬೆಳೆಗಳಲ್ಲಿ ಒಂದು.ಮರದ ಬುಡದಲ್ಲಿ ಕುಳಿತರು ಸಾಕು ಮನಸ್ಸು ಶಾಂತವಾಗುತ್ತದೆ. ಇದರ ಎಲೆ ಹೂವು ಕಾಯಿ ತೊಗಟೆ ಇವು ಉತ್ತಮ ಔಷಧಿಯು ಹೌದು. ರುಚಿಯು ಹೌದು.

ಸಾಧಾರಣವಾಗಿ ಮೇ ಕೊನೆಯ ವಾರಗಳಲ್ಲಿ ಇದರ ಹಣ್ಣು ಬೀಜ ಸಿಕ್ಕುತ್ತದೆ. ಬೀಜವನ್ನು ಸಂಗ್ರಹಿಸಿ ಉಪ್ಪಾಗೆ, ಮುರುಗನ ಬೀಜ ದಿಂದ ಎಣ್ಣೆ ತೆಗೆದಂತೆ (ತುಪ್ಪ) ತೆಗೆಯಬೇಕು ಇದು ಎರಡು ವರ್ಷಕ್ಕೂ ಹಾಳಾಗುವುದಿಲ್ಲ.

1) ಇಪ್ಪೆ ತುಪ್ಪವನ್ನು ಬಿಸಿ ಮಾಡಿ ಹಚ್ಚುವುದರಿಂದ ಸಂಧಿವಾತ ಗುಣವಾಗುತ್ತದೆ.
2) ತಲೆಗೆ ಹಾಕುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆನೋವು ಗುಣವಾಗುತ್ತದೆ.
3) ಇಪ್ಪೇಚಕ್ಕೆ ಕಷಾಯ ಸಂಧಿವಾತಕ್ಕೆ ಒಳ್ಳೆಯ ಔಷಧಿ.
4) ತೊಗಟೆಯ ಪುಡಿಯಲ್ಲಿ ಹಲ್ಲು ಉಜ್ಜುವುದರಿಂದ ಹಲ್ಲಿನ ಸಮಸ್ಯೆಗಳು ದೂರವಾಗುತ್ತವೆ.
5) ತೊಗಟೆಯ ಪುಡಿಯನ್ನು ತೋನ್ನು ರೋಗದಲ್ಲಿ ಉಪಯೋಗಿಸುತ್ತೇನೆ.
6) ತೊಗಟೆಯ ಪುಡಿಯನ್ನು ಕ್ಯಾನ್ಸರ್ ರೋಗದಲ್ಲಿ ಬಳಸುತ್ತೇನೆ.
7) ತಿಪ್ಪೆಯ ಹೂವಿನಲ್ಲಿ ಮಾಡಿದ ಲೇಹ್ಯ ನಿದ್ದೆಗೆ ಮತ್ತು ಪುಷ್ಟಿಗೆ ತುಂಬಾ ಒಳ್ಳೆಯದು.
8) ಹೂವನ್ನು ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿ ಬೇಕಾದಾಗ ಶರಭತ್ ಮಾಡಿ ಕುಡಿಯಬಹುದು.
9) ಹೂವನ್ನು ನೀರು ಅಥವಾ ಹಾಲು ಹಾಕಿ ಕುದಿಸಿ ಕುಡಿಯುವುದರಿಂದ ಕರುಳಿನ ಹುಣ್ಣು ಗುಣವಾಗುತ್ತದೆ.
10) ಹಸಿ ಹೂವನ್ನು ತಿನ್ನುವುದರಿಂದ ಕೆಮ್ಮು ಗುಣವಾಗುತ್ತದೆ.
11) ಅರೆಬರೆ ವಣಗಿದ ಹಣ್ಣು ಯಾವ ಡ್ರೈಫ್ರೂಟಿಗೂ ಕಡಿಮೆ ಇಲ್ಲ. ಶಾಲಾ ದಿನಗಳಲ್ಲಿ ಮರದ ಕೆಳಗೆ ಹೆಕ್ಕಿ ತಿನ್ನುವುದೇ ಒಂದು ಸಂಭ್ರಮ. ಹೆಚ್ಚಾಗಿ ಮತ್ತು ಬರುವ ಸಾಧ್ಯತೆಯೂ ಇದೆ.
12) ಇದರ ಎಳೆಯ ಎಲೆಗಳನ್ನು ಎಣ್ಣೆಯಲ್ಲಿ ಕುದಿಸಿ ಕಿವಿಗೆ ಹಾಕುವುದರಿಂದ ಕಿವಿ ನೋವು ಗುಣವಾಗುತ್ತದೆ.
13) ಬೆಳೆದ ಮರದಿಂದ ಮಣೆ (ಕುಳಿತು ಕೊಳ್ಳಲು) ಮಾಡಿ ಕುಳಿತು ಜಪ ಮಾಡುವುದರಿಂದ ಬೇಗನೆ ಸಿದ್ದಿ ಆಗುವುದು ಎನ್ನುವ ನಂಬಿಕೆ.
14) ಮರದ ಕಡಗೋಲು ತಯಾರಿಸಿ ಮಜ್ಜಿಗೆ ಕಡೆಯುವುದರಿಂದ ವಾತರೋಗ ನಿವಾರಣೆ ಆಗುತ್ತದೆ. ದೇಹಕ್ಕೂ ತಂಪು.

ಖ್ಯಾತ ನಾಟಿ ವೈದ್ಯೆ ಸುಮನಾ ಮಳಗದ್ದೆಯವರು ಇಪ್ಪೆ ಮರದ ಉಪಯೋಗಗಳ ಬಗ್ಗೆ ಬಹಳ ಸೊಗಸಾಗಿ ಹೇಳಿದ್ದಾರೆ. ಅವರನ್ನು ಸಂಪರ್ಕಿಸೋದಾದ್ರೆ :  ಸುಮನಾ ಮಳಲಗದ್ದೆ 9980182883.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

11 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

19 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago