ಇರಾನ್‌ ನಲ್ಲಿ ಜನಾಕ್ರೋಶ ಭುಗಿಲು | ಭಾರತೀಯರು ಸುರಕ್ಷಿತವಾಗಿ ವಾಪಾಸ್

January 19, 2026
7:23 AM

ಇರಾನ್ ನಲ್ಲಿ  ಆರ್ಥಿಕ ಕುಸಿತ, ತೀವ್ರ ಹಣದುಬ್ಬರ ಮತ್ತು ವ್ಯಾಪಕ ಭ್ರಷ್ಟಾಚಾರದ ವಿರುದ್ಧ ಜನಾಕ್ರೋಶ ಭುಗಿಲೆದ್ದಿದ್ದು, ಸರ್ಕಾರಿ ವಿರೋಧಿ ಪ್ರತಿಭಟನೆಗಳ ಮೇಲೆ ನಡೆದ ದಮನಕಾರಿ ಕ್ರಮದಿಂದ ಮೃತಪಟ್ಟವರ ಸಂಖ್ಯೆ 5000 ಕ್ಕೆ ಏರಿಕೆಯಾಗಿದೆ. ದೇಶದ ಹಲವು ಭಾಗಗಳಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಸರ್ಕಾರ ಇಂಟರ್ನೆಟ್ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.

ಡಿಸೆಂಬರ್ 28 ರಿಂದ ಆರಂಭವಾದ ಪ್ರತಿಭಟನೆಗಳು ದೇಶಾದ್ಯಂತ ವ್ಯಾಪಕ ಹಾನಿಗೆ ಕಾರಣವಾಗಿವೆ. ಪ್ರತಿಭಟನೆಗಳ ಹಿನ್ನಲೆಯಲ್ಲಿ 350 ಮಸೀದಿಗಳು, 400 ಆಸ್ಪತ್ರೆಗಳು ಹಾಗೂ ನೂರಾರು ತುರ್ತು ಸೇವಾ ವಾಹನಗಳು ಧ್ವಂಸಗೊಂಡಿವೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಅಸ್ಥಿರತೆ ಇರಾನಿನ ಸ್ಥಿತಿಗತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಈ ನಡುವೆ, ಇರಾನ್ ನಲ್ಲಿ ವಾಸವಾಗಿದ್ದ ಭಾರತೀಯ ಪ್ರಜೆಗಳ ಮೊದಲ ತಂಡ  ರಾಷ್ಟ್ರ ರಾಜಧಾನಿ ದೆಹಲಿಗೆ ಸುರಕ್ಷಿತವಾಗಿ ಆಗಮಿಸಿದೆ. ಇರಾನ್ನಲ್ಲಿನ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ವಾಪಾಸ್ ಬರುವಂತೆ ನೀಡಿದ ಸೂಚನೆಯ ಮೇರೆಗೆ ಭಾರತೀಯರು ತಾಯ್ನಾಡಿಗೆ ಮರಳಿದ್ದಾರೆ.

ಇರಾನ್ ಹಾಗೂ ಸುತ್ತಮುತ್ತಲಿನ ದೇಶಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದೆ. ಇರಾನ್ನಲ್ಲಿರುವ ಭಾರತೀಯರು ಅಲ್ಲಿನ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಹಾಗೂ ಸಾಧ್ಯವಾದಷ್ಟು ಬೇಗ ದೇಶವನ್ನು ತೊರೆಯುವಂತೆ ಈಗಾಗಲೇ ಸೂಚನೆ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror