Advertisement
ಸುದ್ದಿಗಳು

ಇರಾನ್‌ ನಲ್ಲಿ ಜನಾಕ್ರೋಶ ಭುಗಿಲು | ಭಾರತೀಯರು ಸುರಕ್ಷಿತವಾಗಿ ವಾಪಾಸ್

Share

ಇರಾನ್ ನಲ್ಲಿ  ಆರ್ಥಿಕ ಕುಸಿತ, ತೀವ್ರ ಹಣದುಬ್ಬರ ಮತ್ತು ವ್ಯಾಪಕ ಭ್ರಷ್ಟಾಚಾರದ ವಿರುದ್ಧ ಜನಾಕ್ರೋಶ ಭುಗಿಲೆದ್ದಿದ್ದು, ಸರ್ಕಾರಿ ವಿರೋಧಿ ಪ್ರತಿಭಟನೆಗಳ ಮೇಲೆ ನಡೆದ ದಮನಕಾರಿ ಕ್ರಮದಿಂದ ಮೃತಪಟ್ಟವರ ಸಂಖ್ಯೆ 5000 ಕ್ಕೆ ಏರಿಕೆಯಾಗಿದೆ. ದೇಶದ ಹಲವು ಭಾಗಗಳಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಸರ್ಕಾರ ಇಂಟರ್ನೆಟ್ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.

ಡಿಸೆಂಬರ್ 28 ರಿಂದ ಆರಂಭವಾದ ಪ್ರತಿಭಟನೆಗಳು ದೇಶಾದ್ಯಂತ ವ್ಯಾಪಕ ಹಾನಿಗೆ ಕಾರಣವಾಗಿವೆ. ಪ್ರತಿಭಟನೆಗಳ ಹಿನ್ನಲೆಯಲ್ಲಿ 350 ಮಸೀದಿಗಳು, 400 ಆಸ್ಪತ್ರೆಗಳು ಹಾಗೂ ನೂರಾರು ತುರ್ತು ಸೇವಾ ವಾಹನಗಳು ಧ್ವಂಸಗೊಂಡಿವೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಅಸ್ಥಿರತೆ ಇರಾನಿನ ಸ್ಥಿತಿಗತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಈ ನಡುವೆ, ಇರಾನ್ ನಲ್ಲಿ ವಾಸವಾಗಿದ್ದ ಭಾರತೀಯ ಪ್ರಜೆಗಳ ಮೊದಲ ತಂಡ  ರಾಷ್ಟ್ರ ರಾಜಧಾನಿ ದೆಹಲಿಗೆ ಸುರಕ್ಷಿತವಾಗಿ ಆಗಮಿಸಿದೆ. ಇರಾನ್ನಲ್ಲಿನ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ವಾಪಾಸ್ ಬರುವಂತೆ ನೀಡಿದ ಸೂಚನೆಯ ಮೇರೆಗೆ ಭಾರತೀಯರು ತಾಯ್ನಾಡಿಗೆ ಮರಳಿದ್ದಾರೆ.

ಇರಾನ್ ಹಾಗೂ ಸುತ್ತಮುತ್ತಲಿನ ದೇಶಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದೆ. ಇರಾನ್ನಲ್ಲಿರುವ ಭಾರತೀಯರು ಅಲ್ಲಿನ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಹಾಗೂ ಸಾಧ್ಯವಾದಷ್ಟು ಬೇಗ ದೇಶವನ್ನು ತೊರೆಯುವಂತೆ ಈಗಾಗಲೇ ಸೂಚನೆ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

7 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

10 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

15 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

22 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

22 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago