Advertisement
MIRROR FOCUS

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

Share

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್ ಸಂಘರ್ಷದ ಪರಿಣಾಮ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯ ಮೇಲೆ ಪರಿಣಾಮ ಬೀಳತೊಡಗಿದೆ. ವಿಶೇಷವಾಗಿ ಡಿಎಪಿ ಸೇರಿದಂತೆ ಹಲವು ರಾಸಾಯನಿಕ ಗೊಬ್ಬರಗಳ ಲಭ್ಯತೆ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ನೈಸರ್ಗಿಕ ಕೃಷಿ ಮತ್ತು ಗೋಮಯ ಆಧಾರಿತ ಜೈವಿಕ ಗೊಬ್ಬರಗಳ ಬಳಕೆ ಹೆಚ್ಚುತ್ತಿದೆ.

ಭಾರತದ ವಿವಿಧ ಭಾಗಗಳಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಮತ್ತು ರೈತರು ಗೋಮಯ, ಬೆಲ್ಲ ಹಾಗೂ ಇತರ ನೈಸರ್ಗಿಕ ಪದಾರ್ಥಗಳನ್ನು ಬಳಸಿ ಜೈವಿಕ ಗೊಬ್ಬರ ತಯಾರಿಸುತ್ತಿದ್ದಾರೆ. ಮುಂಗಾರು ಕೃಷಿ ಆರಂಭವಾಗುವ ಸಮಯದಲ್ಲಿ ರಾಸಾಯನಿಕ ಗೊಬ್ಬರಗಳ ಬೆಲೆ ಏರಿಕೆ ಮತ್ತು ಸರಬರಾಜಿನ ಅನಿಶ್ಚಿತತೆ ರೈತರನ್ನು ಪರ್ಯಾಯ ಮಾರ್ಗಗಳತ್ತ ಕೊಂಡೊಯ್ಯುತ್ತಿದೆ.

ತಜ್ಞರ ಪ್ರಕಾರ, ಪರ್ಷಿಯನ್ ಕೊಲ್ಲಿಯ ಪ್ರದೇಶವು ಜಾಗತಿಕ ಗೊಬ್ಬರ ವ್ಯಾಪಾರದಲ್ಲಿ ಪ್ರಮುಖ ಪಾತ್ರವಹಿಸಿದೆ. ಇರಾನ್ ಸಂಘರ್ಷದಿಂದಾಗಿ ಹೋರ್ಮುಜ್ ಜಲಸಂಧಿಯ ಮೂಲಕ ನಡೆಯುವ ಸರಕು ಸಾಗಾಟಕ್ಕೆ ಅಡ್ಡಿಪಡಿತ ಪರಿಣಾಮ ಗೊಬ್ಬರ ಮಾರುಕಟ್ಟೆಯ ಮೇಲೂ ಬಿದ್ದಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಗೊಬ್ಬರ ಬೆಲೆಗಳು ಏರಿಕೆಯಾಗಿದ್ದು, ಅನೇಕ ದೇಶಗಳ ರೈತರು ಸಾವಯವ ಪರ್ಯಾಯಗಳತ್ತ ಮುಖ ಮಾಡುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಭಾರತದಲ್ಲಿ ಕೇಂದ್ರ ಸರ್ಕಾರವೂ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುತ್ತಿದ್ದು, ರಾಸಾಯನಿಕ ಗೊಬ್ಬರ ಅವಲಂಬನೆಯನ್ನು ಕಡಿಮೆ ಮಾಡುವ ಪ್ರಯತ್ನಗಳನ್ನು ವೇಗಗೊಳಿಸಿದೆ. ಕೃಷಿ ತಜ್ಞರು ಈ ಪರಿಸ್ಥಿತಿಯನ್ನು ಸ್ಥಳೀಯ ಸಂಪನ್ಮೂಲ ಆಧಾರಿತ ಕೃಷಿ ಪದ್ಧತಿಗಳನ್ನು ಬಲಪಡಿಸುವ ಅವಕಾಶವೆಂದು ನೋಡುತ್ತಿದ್ದಾರೆ.

ನಮ್ಮ ರೈತರಿಗೆ ಸೂಚನೆ ಏನು…?

  • ಗೊಬ್ಬರ ಆಮದು ಅವಲಂಬನೆ ಕಡಿಮೆ ಮಾಡುವ ಅಗತ್ಯತೆ ಹೆಚ್ಚುತ್ತಿದೆ.
  • ಗೋಮಯ, ಕಾಂಪೋಸ್ಟ್ ಮತ್ತು ಜೈವಿಕ ಗೊಬ್ಬರಗಳಿಗೆ ಬೇಡಿಕೆ ಹೆಚ್ಚುವ ಸಾಧ್ಯತೆ.
  • ರಾಸಾಯನಿಕ ಗೊಬ್ಬರ ಬೆಲೆಗಳಲ್ಲಿ ಏರಿಳಿತ ಮುಂದುವರಿಯುವ ಸಾಧ್ಯತೆ.
  • ನೈಸರ್ಗಿಕ ಕೃಷಿ ಮತ್ತು ಸ್ಥಳೀಯ ಸಂಪನ್ಮೂಲ ಆಧಾರಿತ ಕೃಷಿ ಮಾದರಿಗಳಿಗೆ ಉತ್ತೇಜನ ದೊರೆಯಬಹುದು.

The ongoing Iran conflict has disrupted global fertilizer supply chains, raising concerns over the availability and price of chemical fertilizers such as DAP. As a result, Indian farmers and women’s groups are increasingly producing and using cow dung-based biofertilizers. Experts believe the crisis may accelerate the shift toward natural farming and reduce dependence on imported fertilizers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

2 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

7 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

15 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

16 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago