ಕೃಷಿ ಬೆಳೆಗೆ, ತೋಟಕ್ಕೆ ನೀರುಣಿಸುವ ಯಜ್ಞ…..|

December 19, 2023
7:50 PM
ಬೇಸಗೆಯಲ್ಲಿ ಕೃಷಿಗೆ ನೀರಾವರಿ ಹಾಗೂ ಅದರ ಸುತ್ತಲಿನ ಸಂಗತಿಯನ್ನು ಅಶ್ವಿನಿಮೂರ್ತಿ ಅವರು ಬರೆದಿದ್ದಾರೆ.

ದಟ್ಟ ಬೇಸಿಗೆ. ಸೂರ್ಯ ಸದಾ ಬಿಸಿಲು ಕಾರುತ್ತಲೇ ಇರುವ, ಸ್ವಲ್ಪವೂ ಕರುಣೆ ತೋರದೆ. ಕಿಟ್ಟಣ್ಣ ತೋಟಕ್ಕೆ ಹೋದವ ಉಸ್ಸಪ್ಪಾ ಎನ್ನುತ್ತಾ ಬಂದು ಚಾವಡಿಯಲ್ಲಿ ಮಲಗಿದ.

Advertisement

ಬೇಸಿಗೆಯೆಂದರೆ ತೋಟಕ್ಕೆ ನೀರು ಹಾಕುವ ಗೌಜಿ. ಒಂದೇ ಸರ್ತಿ ಇಡೀ ತೋಟಕ್ಕೆ ನೀರುಣಿಸಲು ಸಾಧ್ಯವಿಲ್ಲ. ಬೋರುವೆಲ್ ನೀರಾದ್ದರಿಂದ ಒಮ್ಮೆಗೆ ಇನ್ನೂರು ಗಿಡಕ್ಕಷ್ಟೇ ಹಾಕಲು ಸಾಧ್ಯ. ಮೂರು ನಾಕು ಶಿಪ್ಟ್ ಲ್ಲಿ ನೀರು ಹಾಕ ಬೇಕಾಗುತ್ತದೆ. ಹಗಲೇ ಎಲ್ಲಾ ಶಿಪ್ಟ್ ಲ್ಲಿ ನೀರು ಹಾಕಲು ಸಾಧ್ಯವಿಲ್ಲ. ‌ ನೀರು ಇದ್ದರೂ ಕೆಲವೊಮ್ಮೆ ವಿದ್ಯುತ್ ಕೈ ಕೊಡುತ್ತದೆ. ನಿರಂತರವಾಗಿ ನೀರು ಹಾಕಿದರೆ ಬೋರುವೆಲ್ ನಲ್ಲಿ ನೀರು ಕಮ್ಮಿಯಾಗುತ್ತದೆ. ಬೋರುವೆಲ್ಲ್ ಗಾಳಿ ಎಳೆಯುತ್ತದೆ. ಹಾಗಾಗಿ ಗ್ಯಾಪ್ ಕೊಟ್ಟು ಪಂಪ್ ಸ್ಟಾರ್ಟ್ ಮಾಡ ಬೇಕಾಗುತ್ತದೆ. ಹಗಲಾದರೋ ತಲಾ ಎರಡು ಗಂಟೆಯಂತೆ ಮೂರು ಶಿಪ್ಟ್ ಹಾಕಿದರೆ ನೈಟ್ ಶಿಪ್ಟ್ ಲ್ಲಿ ಎರಡು ಬ್ಯಾಚ್‌ ಹಾಕ ಬಹುದಷ್ಟೇ.

ನೀರು ಹಾಕುವುದೆಂದರೆ ಕೃಷಿಕರಿಗೆ ಒಂದು ಯಜ್ಞ ವೇ ಸರಿ. ವರುಷವಿಡೀ ಮಕ್ಕಳಂತೆ ಸಲಹಿದ ತೋಟಕ್ಕೆ ಸಮಯಕ್ಕೆ ಸರಿ ನೀರುಣಿಸದಿದ್ದರೆ ಮಾಡಿದ ಪ್ರಯತ್ನವೆಲ್ಲ ನೀರಲ್ಲಿ ಮಾಡಿದ ಹೋಮ. ಹಗಲಿನಲ್ಲಿ ನೀರು ಹಾಕುವುದಾದರೆ ಸುಲಭ. ಎಲ್ಲೆಲ್ಲಿ ನೀರು ಬಿಡ ಬೇಕು, ಗೇಟ್ ವಾಲ್ ಎಲ್ಲಿ ಕಟ್ಟ ಬೇಕು ? ಎಲ್ಲಿ ಬಿಡ ಬೇಕು ಎಂಬುದು ಸಲೀಸು. ಹಗಲು ಬೆಳಕಿನಲ್ಲಾದರೆ ಸರಿಯಾಗಿ ಕಾಣುತ್ತದಲ್ಲವೇ? ಆದರೆ ನೈಟ್ ಶಿಪ್ಟ್ ಇದೆಯಲ್ಲಾ ಅದು ಕಬ್ಬಿಣದ ಕಡಲೆ. ಮಾತ್ರವಲ್ಲ ತೋಟದ ಆಗು ಹೋಗುಗಳೆಲ್ಲವೂ ಕರತಲಾಮಲಕವಾಗಿದ್ದರೂ ಕೂಡ ರಾತ್ರಿಯ ಪ್ರಪಂಚವೇ ಬೇರೆ.

ರಾತ್ರೆಯಲ್ಲಿನ ನಿಗೂಢ ಚಟುವಟಿಕೆಗಳು ಮನುಷ್ಯರಿಗೆ ಮಾತ್ರ ಸೀಮಿತವಾದುದಲ್ಲ. ಪ್ರಾಣಿಗಳಲ್ಲೂ ಇದೆ. ಕೆಲವು ಪ್ರಾಣಿಗಳಂತೂ ರಾತ್ರಿಯ ವೇಳೆಯಲ್ಲೇ ಚಟುವಟಿಕೆಯಲ್ಲಿರುವ ಪ್ರಾಣೆಗಳಿವೆ. ನಮ್ಮ ಊರ ಕಡೆಯಂತೂ ಕಾಡು ಹಂದಿಗಳು, ಒಂಟಿ ಆನೆಗಳು , ಕಡವೆಗಳು, ಮುಳ್ಳು ಹಂದಿಗಳು, ಹಾವುಗಳು ಓಹ್ ಒಂದಾ ಎರಡಾ ಹಲವು ಹಾನಿಗಳು. ಅವುಗಳಲ್ಲಿ ಹಂದಿ , ಒಂಟಿ ಆನೆಗಳಂತೂ ಬಹಳ ಅಪಾಯಕಾರಿ. ಅವುಗಳು ನಿಶ್ಯಬ್ದವಾಗಿದ್ದರೆ ಕತ್ತಲಲ್ಲಿ ಕಾಣಿಸುವುದೂ ಇಲ್ಲ. ಹತ್ತಿರ ಬಂದಾಗಲೇ ಗೋಚರವಾಗುವುದು. ಒಂಟಿಯಾಗಿ ತಿರುಗುವ ಆನೆ, ಹಂದಿ , ಕಡವೆಗಳೆಲ್ಲಾ ಬಹಳ ಅಪಾಯಕಾರಿಗಳು.

ನಮ್ಮೂರಿನ ಕಿಟ್ಟಣ್ಣನ ಯೌವನದಲ್ಲಿ ಆದ ಘಟನೆಯ ಗುರುತು ಅವನ ಕೈಯಲ್ಲಿ ಇಂದಿಗೂ ನೋಡ ಬಹುದು. ಕಾಲೇಜು ಮುಗಿಸಿ ಮನೆಯಲ್ಲಿ ಕೃಷಿ ಕಾರ್ಯಗಳಲ್ಲಿ ಉತ್ಸಾಹದಿಂದ ತೊಡಗಿಸಿ ಕೊಂಡ ಸಂದರ್ಭ. ಅಡಿಕೆ ತೋಟಕ್ಕೆ ಆ ದಿನವಷ್ಟೇ ಗೊಬ್ಬರ ಹಾಕಿದ್ದು. ಮಳೆ ಬರುವ ಒಂದಿನಿತು ಸೂಚನೆಯೂ ಇರಲಿಲ್ಲ‌ . ಆ ದಿನ ನೀರು ಗಿಡಗಳಿಗೆ ಉಣಿಸದಿದ್ದರೆ ಅಷ್ಟು ಖರ್ಚು ಮಾಡಿ ಹಾಕಿದ ಗೊಬ್ಬರ ವೇಸ್ಟ್ ಆದಂತೆಯೇ ಸರಿ. ಸಾವಿರಾರು ರೂಪಾಯಿ ನಷ್ಟವಾಗುವುದರಲ್ಲಿ ಎರಡು ಮಾತಿಲ್ಲ. ಹಾಗಾಗಿ ರಾತ್ರೆಯಾದರೂ ಸರಿ ನೀರು ಹಾಕುವುದೇ ಎಂದು ಒಂದು ಶಿಪ್ಟ್ ನೀರು ಹಾಕಿ ಮನೆಗೆ ಬಂದು ಊಟ ಮಾಡಿ ಕಂಪ್ಯೂಟರ್ ಆನ್ ಮಾಡಿ ಅಂದಿನ ಆಗು ಹೋಗುಗಳನ್ನು ನೋಡಿ ಕೊಂಡು ಹೊತ್ತು ಕಳೆಯ ತೊಡಗಿದ್ದ. ರಾತ್ರೆ ಹನ್ನೆರಡು ಗಂಟೆಗೆ ಇನ್ನೊಂದು ಶಿಪ್ಟ್ ಹಾಕಿ ಮಲಗುವುದೆಂದು ಅವನ ಯೋಜನೆಯಾಗಿತ್ತು.

ಹಾಗೆ ಹನ್ನೆರಡಾಗುತ್ತಲೇ ಹೆಡ್ ಲೈಟು, ಕೈಯಲ್ಲಿ ಇನ್ನೊಂದು ಲೈಟು ಹಿಡಿದು ತೋಟದತ್ತ ತೆರಳಿದ. ಬಾಯಲ್ಲಿ ಅಜ್ಜಿ ಹೇಳಿ ಕೊಟ್ಟ ರಾಮನಾಮ. ಇನ್ನೇನೂ ಪಂಪ್ ಶೆಡ್ ಹತ್ತಿರ ತಲುಪಿದ ಅನ್ನುವಾಗ ಯಾರೋ ಸರಿದಂತಾಯಿತು. ಏನು ಎತ್ತ ಎಂದು ನೋಡ ಬೇಕಾದರೆ ಇವನ ಕೈ ಸವರಿ ಕೊಂಡು ಏನೋ ಓಡಿದಂತಾಯಿತು. ಅದು ಸವರಿದ್ದೋ ಅಥವಾ ಉಗುರಲ್ಲಿ ಆಕ್ರಮಣ ಮಾಡಲು ಯತ್ನಿಸಿದ್ದೋ ಗೊತ್ತಾಗಲಿಲ್ಲ. ಎದ್ದೆನೋ ಬಿದ್ದೆನೋ ಎಂದು ಓಡೋಡಿ ಮನೆ ಸೇರಿದ. ಅವನ ನೈಟ್ ಶಿಪ್ಟ್ ಬ್ರಾಂತೆಲ್ಲಾ ಅಂದಿಗೇ ಬಿಟ್ಡಿತು. ತನ್ನನ್ನು ಅಜ್ಜಿ ಹೇಳಿ ಕೊಟ್ಟ ರಾಮನಾಮವೇ ಅಂದು ಬಚಾವ್ ಮಾಡಿದ್ದು ಎಂಬ ಧೃಢವಾದ ನಂಬಿಕೆ ಕಿಟ್ಟಣ್ಣಂದು. ಈ ಬದುಕಿನ ಹಗ್ಗ ಜಗ್ಗಾಟದಲ್ಲಿ ಭಗವಂತನ ಕೃಪೆ ಇದ್ದರೆ ಮಾತ್ರ ಗೆಲುವು …..

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ | ಅಂಚೆ ಇಲಾಖೆಯಿಂದ 6 ವರ್ಷಗಳಿಂದ ಯಶಸ್ವಿ | ದೆಹಲಿಯವರೆಗೂ ಮಾವಿನಹಣ್ಣು ರವಾನೆ |
April 23, 2025
11:24 AM
by: ದ ರೂರಲ್ ಮಿರರ್.ಕಾಂ
ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!
April 23, 2025
8:13 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಗುಜ್ಜೆ ಮೊಸರು ಗೊಜ್ಜು
April 23, 2025
8:00 AM
by: ದಿವ್ಯ ಮಹೇಶ್
ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ
April 22, 2025
9:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group