Advertisement
ಅನುಕ್ರಮ

ಕೃಷಿ ಬೆಳೆಗೆ, ತೋಟಕ್ಕೆ ನೀರುಣಿಸುವ ಯಜ್ಞ…..|

Share

ದಟ್ಟ ಬೇಸಿಗೆ. ಸೂರ್ಯ ಸದಾ ಬಿಸಿಲು ಕಾರುತ್ತಲೇ ಇರುವ, ಸ್ವಲ್ಪವೂ ಕರುಣೆ ತೋರದೆ. ಕಿಟ್ಟಣ್ಣ ತೋಟಕ್ಕೆ ಹೋದವ ಉಸ್ಸಪ್ಪಾ ಎನ್ನುತ್ತಾ ಬಂದು ಚಾವಡಿಯಲ್ಲಿ ಮಲಗಿದ.

ಬೇಸಿಗೆಯೆಂದರೆ ತೋಟಕ್ಕೆ ನೀರು ಹಾಕುವ ಗೌಜಿ. ಒಂದೇ ಸರ್ತಿ ಇಡೀ ತೋಟಕ್ಕೆ ನೀರುಣಿಸಲು ಸಾಧ್ಯವಿಲ್ಲ. ಬೋರುವೆಲ್ ನೀರಾದ್ದರಿಂದ ಒಮ್ಮೆಗೆ ಇನ್ನೂರು ಗಿಡಕ್ಕಷ್ಟೇ ಹಾಕಲು ಸಾಧ್ಯ. ಮೂರು ನಾಕು ಶಿಪ್ಟ್ ಲ್ಲಿ ನೀರು ಹಾಕ ಬೇಕಾಗುತ್ತದೆ. ಹಗಲೇ ಎಲ್ಲಾ ಶಿಪ್ಟ್ ಲ್ಲಿ ನೀರು ಹಾಕಲು ಸಾಧ್ಯವಿಲ್ಲ. ‌ ನೀರು ಇದ್ದರೂ ಕೆಲವೊಮ್ಮೆ ವಿದ್ಯುತ್ ಕೈ ಕೊಡುತ್ತದೆ. ನಿರಂತರವಾಗಿ ನೀರು ಹಾಕಿದರೆ ಬೋರುವೆಲ್ ನಲ್ಲಿ ನೀರು ಕಮ್ಮಿಯಾಗುತ್ತದೆ. ಬೋರುವೆಲ್ಲ್ ಗಾಳಿ ಎಳೆಯುತ್ತದೆ. ಹಾಗಾಗಿ ಗ್ಯಾಪ್ ಕೊಟ್ಟು ಪಂಪ್ ಸ್ಟಾರ್ಟ್ ಮಾಡ ಬೇಕಾಗುತ್ತದೆ. ಹಗಲಾದರೋ ತಲಾ ಎರಡು ಗಂಟೆಯಂತೆ ಮೂರು ಶಿಪ್ಟ್ ಹಾಕಿದರೆ ನೈಟ್ ಶಿಪ್ಟ್ ಲ್ಲಿ ಎರಡು ಬ್ಯಾಚ್‌ ಹಾಕ ಬಹುದಷ್ಟೇ.

ನೀರು ಹಾಕುವುದೆಂದರೆ ಕೃಷಿಕರಿಗೆ ಒಂದು ಯಜ್ಞ ವೇ ಸರಿ. ವರುಷವಿಡೀ ಮಕ್ಕಳಂತೆ ಸಲಹಿದ ತೋಟಕ್ಕೆ ಸಮಯಕ್ಕೆ ಸರಿ ನೀರುಣಿಸದಿದ್ದರೆ ಮಾಡಿದ ಪ್ರಯತ್ನವೆಲ್ಲ ನೀರಲ್ಲಿ ಮಾಡಿದ ಹೋಮ. ಹಗಲಿನಲ್ಲಿ ನೀರು ಹಾಕುವುದಾದರೆ ಸುಲಭ. ಎಲ್ಲೆಲ್ಲಿ ನೀರು ಬಿಡ ಬೇಕು, ಗೇಟ್ ವಾಲ್ ಎಲ್ಲಿ ಕಟ್ಟ ಬೇಕು ? ಎಲ್ಲಿ ಬಿಡ ಬೇಕು ಎಂಬುದು ಸಲೀಸು. ಹಗಲು ಬೆಳಕಿನಲ್ಲಾದರೆ ಸರಿಯಾಗಿ ಕಾಣುತ್ತದಲ್ಲವೇ? ಆದರೆ ನೈಟ್ ಶಿಪ್ಟ್ ಇದೆಯಲ್ಲಾ ಅದು ಕಬ್ಬಿಣದ ಕಡಲೆ. ಮಾತ್ರವಲ್ಲ ತೋಟದ ಆಗು ಹೋಗುಗಳೆಲ್ಲವೂ ಕರತಲಾಮಲಕವಾಗಿದ್ದರೂ ಕೂಡ ರಾತ್ರಿಯ ಪ್ರಪಂಚವೇ ಬೇರೆ.

ರಾತ್ರೆಯಲ್ಲಿನ ನಿಗೂಢ ಚಟುವಟಿಕೆಗಳು ಮನುಷ್ಯರಿಗೆ ಮಾತ್ರ ಸೀಮಿತವಾದುದಲ್ಲ. ಪ್ರಾಣಿಗಳಲ್ಲೂ ಇದೆ. ಕೆಲವು ಪ್ರಾಣಿಗಳಂತೂ ರಾತ್ರಿಯ ವೇಳೆಯಲ್ಲೇ ಚಟುವಟಿಕೆಯಲ್ಲಿರುವ ಪ್ರಾಣೆಗಳಿವೆ. ನಮ್ಮ ಊರ ಕಡೆಯಂತೂ ಕಾಡು ಹಂದಿಗಳು, ಒಂಟಿ ಆನೆಗಳು , ಕಡವೆಗಳು, ಮುಳ್ಳು ಹಂದಿಗಳು, ಹಾವುಗಳು ಓಹ್ ಒಂದಾ ಎರಡಾ ಹಲವು ಹಾನಿಗಳು. ಅವುಗಳಲ್ಲಿ ಹಂದಿ , ಒಂಟಿ ಆನೆಗಳಂತೂ ಬಹಳ ಅಪಾಯಕಾರಿ. ಅವುಗಳು ನಿಶ್ಯಬ್ದವಾಗಿದ್ದರೆ ಕತ್ತಲಲ್ಲಿ ಕಾಣಿಸುವುದೂ ಇಲ್ಲ. ಹತ್ತಿರ ಬಂದಾಗಲೇ ಗೋಚರವಾಗುವುದು. ಒಂಟಿಯಾಗಿ ತಿರುಗುವ ಆನೆ, ಹಂದಿ , ಕಡವೆಗಳೆಲ್ಲಾ ಬಹಳ ಅಪಾಯಕಾರಿಗಳು.

ನಮ್ಮೂರಿನ ಕಿಟ್ಟಣ್ಣನ ಯೌವನದಲ್ಲಿ ಆದ ಘಟನೆಯ ಗುರುತು ಅವನ ಕೈಯಲ್ಲಿ ಇಂದಿಗೂ ನೋಡ ಬಹುದು. ಕಾಲೇಜು ಮುಗಿಸಿ ಮನೆಯಲ್ಲಿ ಕೃಷಿ ಕಾರ್ಯಗಳಲ್ಲಿ ಉತ್ಸಾಹದಿಂದ ತೊಡಗಿಸಿ ಕೊಂಡ ಸಂದರ್ಭ. ಅಡಿಕೆ ತೋಟಕ್ಕೆ ಆ ದಿನವಷ್ಟೇ ಗೊಬ್ಬರ ಹಾಕಿದ್ದು. ಮಳೆ ಬರುವ ಒಂದಿನಿತು ಸೂಚನೆಯೂ ಇರಲಿಲ್ಲ‌ . ಆ ದಿನ ನೀರು ಗಿಡಗಳಿಗೆ ಉಣಿಸದಿದ್ದರೆ ಅಷ್ಟು ಖರ್ಚು ಮಾಡಿ ಹಾಕಿದ ಗೊಬ್ಬರ ವೇಸ್ಟ್ ಆದಂತೆಯೇ ಸರಿ. ಸಾವಿರಾರು ರೂಪಾಯಿ ನಷ್ಟವಾಗುವುದರಲ್ಲಿ ಎರಡು ಮಾತಿಲ್ಲ. ಹಾಗಾಗಿ ರಾತ್ರೆಯಾದರೂ ಸರಿ ನೀರು ಹಾಕುವುದೇ ಎಂದು ಒಂದು ಶಿಪ್ಟ್ ನೀರು ಹಾಕಿ ಮನೆಗೆ ಬಂದು ಊಟ ಮಾಡಿ ಕಂಪ್ಯೂಟರ್ ಆನ್ ಮಾಡಿ ಅಂದಿನ ಆಗು ಹೋಗುಗಳನ್ನು ನೋಡಿ ಕೊಂಡು ಹೊತ್ತು ಕಳೆಯ ತೊಡಗಿದ್ದ. ರಾತ್ರೆ ಹನ್ನೆರಡು ಗಂಟೆಗೆ ಇನ್ನೊಂದು ಶಿಪ್ಟ್ ಹಾಕಿ ಮಲಗುವುದೆಂದು ಅವನ ಯೋಜನೆಯಾಗಿತ್ತು.

ಹಾಗೆ ಹನ್ನೆರಡಾಗುತ್ತಲೇ ಹೆಡ್ ಲೈಟು, ಕೈಯಲ್ಲಿ ಇನ್ನೊಂದು ಲೈಟು ಹಿಡಿದು ತೋಟದತ್ತ ತೆರಳಿದ. ಬಾಯಲ್ಲಿ ಅಜ್ಜಿ ಹೇಳಿ ಕೊಟ್ಟ ರಾಮನಾಮ. ಇನ್ನೇನೂ ಪಂಪ್ ಶೆಡ್ ಹತ್ತಿರ ತಲುಪಿದ ಅನ್ನುವಾಗ ಯಾರೋ ಸರಿದಂತಾಯಿತು. ಏನು ಎತ್ತ ಎಂದು ನೋಡ ಬೇಕಾದರೆ ಇವನ ಕೈ ಸವರಿ ಕೊಂಡು ಏನೋ ಓಡಿದಂತಾಯಿತು. ಅದು ಸವರಿದ್ದೋ ಅಥವಾ ಉಗುರಲ್ಲಿ ಆಕ್ರಮಣ ಮಾಡಲು ಯತ್ನಿಸಿದ್ದೋ ಗೊತ್ತಾಗಲಿಲ್ಲ. ಎದ್ದೆನೋ ಬಿದ್ದೆನೋ ಎಂದು ಓಡೋಡಿ ಮನೆ ಸೇರಿದ. ಅವನ ನೈಟ್ ಶಿಪ್ಟ್ ಬ್ರಾಂತೆಲ್ಲಾ ಅಂದಿಗೇ ಬಿಟ್ಡಿತು. ತನ್ನನ್ನು ಅಜ್ಜಿ ಹೇಳಿ ಕೊಟ್ಟ ರಾಮನಾಮವೇ ಅಂದು ಬಚಾವ್ ಮಾಡಿದ್ದು ಎಂಬ ಧೃಢವಾದ ನಂಬಿಕೆ ಕಿಟ್ಟಣ್ಣಂದು. ಈ ಬದುಕಿನ ಹಗ್ಗ ಜಗ್ಗಾಟದಲ್ಲಿ ಭಗವಂತನ ಕೃಪೆ ಇದ್ದರೆ ಮಾತ್ರ ಗೆಲುವು …..

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

20 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

22 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

22 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago