ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

December 16, 2025
1:47 PM

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿ, ಮಧ್ಯಾಹ್ನ ನಂತರ ನಂತರ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಕಡಿಮೆಯಾದರೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 16 ಹಾಗೂ 17 ರಂದು ಚಳಿ ಕಡಿಮೆಯಾಗಿ ಮೋಡದ ವಾತಾವರಣ ಇರಲಿದ್ದು, ನಂತರ ಸ್ವಚ್ಛ ವಾತಾವರಣದೊಂದಿಗೆ ಚಳಿಯ ಪ್ರಮಾಣವೂ ಏರಿಕೆಯಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಚಳಿ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಡಿಸೆಂಬರ್ 18 ರಿಂದ ಸ್ವಚ್ಛ ವಾತಾವರಣದೊಂದಿಗೆ ಒಣ ಹವೆ , ಚಳಿ ಹೆಚ್ಚಾಗಬಹುದು. ಇವತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸುತ್ತಮುತ್ತ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸ್ವಚ್ಛ ಹಾಗೂ ಒಣ ಹವೆಯೊಂದಿಗೆ ಸ್ವಲ್ಪ ಚಳಿ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಡಿಸೆಂಬರ್ 18ರಿಂದ ಚಳಿ ಹೆಚ್ಚಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಚಳಿ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಈಗಿನಂತೆ ಡಿಸೆಂಬರ್ 17 ರ ತನಕ ಮೋಡದ ವಾತಾವರಣ ಇರಲಿದ್ದು, 18 ರಿಂದ ಸ್ವಚ್ಛ ವಾತಾವರಣದೊಂದಿಗೆ ಚಳಿಯ ಪ್ರಮಾಣವೂ ಅಧಿಕವಾಗುವ ಸೂಚನೆಗಳಿವೆ.

Advertisement

ಉತ್ತರ ಭಾರತದ ಅಸ್ವಾಭಾವಿಕ ತಿರುವಿಕೆಯ ವ್ಯಾಪ್ತಿ ಹೆಚ್ಚಾಗಿ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಬೀಸುತ್ತಿರುವುದರಿಂದ ಹಾಗೂ ಅರಬ್ಬಿ ಸಮುದ್ರದ ಕೇರಳ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಈ ಮೋಡದ ವಾತಾವರಣ ಉಂಟಾಗಿದೆ. ಈ ಉತ್ತರ ಭಾರತದ ಈ ಬೃಹತ್ ತಿರುಗುವಿಕೆಯು ಪಶ್ಚಿಮಕ್ಕಿಂತ ಚಲಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 18 ರಿಂದ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸಲು ಆರಂಭವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಮತ್ತೆ ಚಳಿಯ ಪ್ರಮಾಣವೂ ಹೆಚ್ಚುಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಧಾರಣೆ ಏರಿಕೆ | ಒಮ್ಮೆಲೇ ಬೇಡಿಕೆ ಹೆಚ್ಚಳದಿಂದ ಮಾರುಕಟ್ಟೆಯಲ್ಲಿ ಅಸ್ಥಿರತೆ – ಭವಿಷ್ಯದಲ್ಲಿ ಗುಣಮಟ್ಟದ ಅಡಿಕೆಗೆ ಬೇಡಿಕೆ ನಿರೀಕ್ಷೆ
January 8, 2026
7:16 AM
by: ದ ರೂರಲ್ ಮಿರರ್.ಕಾಂ
ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?
January 7, 2026
11:10 PM
by: ದ ರೂರಲ್ ಮಿರರ್.ಕಾಂ
‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?
January 7, 2026
10:43 PM
by: ದ ರೂರಲ್ ಮಿರರ್.ಕಾಂ
2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ
January 7, 2026
10:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror