Advertisement
ಸುದ್ದಿಗಳು

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

Share

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿ, ಮಧ್ಯಾಹ್ನ ನಂತರ ನಂತರ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಕಡಿಮೆಯಾದರೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 16 ಹಾಗೂ 17 ರಂದು ಚಳಿ ಕಡಿಮೆಯಾಗಿ ಮೋಡದ ವಾತಾವರಣ ಇರಲಿದ್ದು, ನಂತರ ಸ್ವಚ್ಛ ವಾತಾವರಣದೊಂದಿಗೆ ಚಳಿಯ ಪ್ರಮಾಣವೂ ಏರಿಕೆಯಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಚಳಿ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಡಿಸೆಂಬರ್ 18 ರಿಂದ ಸ್ವಚ್ಛ ವಾತಾವರಣದೊಂದಿಗೆ ಒಣ ಹವೆ , ಚಳಿ ಹೆಚ್ಚಾಗಬಹುದು. ಇವತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸುತ್ತಮುತ್ತ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸ್ವಚ್ಛ ಹಾಗೂ ಒಣ ಹವೆಯೊಂದಿಗೆ ಸ್ವಲ್ಪ ಚಳಿ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಡಿಸೆಂಬರ್ 18ರಿಂದ ಚಳಿ ಹೆಚ್ಚಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಚಳಿ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಈಗಿನಂತೆ ಡಿಸೆಂಬರ್ 17 ರ ತನಕ ಮೋಡದ ವಾತಾವರಣ ಇರಲಿದ್ದು, 18 ರಿಂದ ಸ್ವಚ್ಛ ವಾತಾವರಣದೊಂದಿಗೆ ಚಳಿಯ ಪ್ರಮಾಣವೂ ಅಧಿಕವಾಗುವ ಸೂಚನೆಗಳಿವೆ.

ಉತ್ತರ ಭಾರತದ ಅಸ್ವಾಭಾವಿಕ ತಿರುವಿಕೆಯ ವ್ಯಾಪ್ತಿ ಹೆಚ್ಚಾಗಿ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಬೀಸುತ್ತಿರುವುದರಿಂದ ಹಾಗೂ ಅರಬ್ಬಿ ಸಮುದ್ರದ ಕೇರಳ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಈ ಮೋಡದ ವಾತಾವರಣ ಉಂಟಾಗಿದೆ. ಈ ಉತ್ತರ ಭಾರತದ ಈ ಬೃಹತ್ ತಿರುಗುವಿಕೆಯು ಪಶ್ಚಿಮಕ್ಕಿಂತ ಚಲಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 18 ರಿಂದ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸಲು ಆರಂಭವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಮತ್ತೆ ಚಳಿಯ ಪ್ರಮಾಣವೂ ಹೆಚ್ಚುಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

5 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

27 minutes ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

16 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago