Advertisement
ಸುದ್ದಿಗಳು

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

Share

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿ, ಮಧ್ಯಾಹ್ನ ನಂತರ ನಂತರ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಕಡಿಮೆಯಾದರೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 16 ಹಾಗೂ 17 ರಂದು ಚಳಿ ಕಡಿಮೆಯಾಗಿ ಮೋಡದ ವಾತಾವರಣ ಇರಲಿದ್ದು, ನಂತರ ಸ್ವಚ್ಛ ವಾತಾವರಣದೊಂದಿಗೆ ಚಳಿಯ ಪ್ರಮಾಣವೂ ಏರಿಕೆಯಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಚಳಿ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಡಿಸೆಂಬರ್ 18 ರಿಂದ ಸ್ವಚ್ಛ ವಾತಾವರಣದೊಂದಿಗೆ ಒಣ ಹವೆ , ಚಳಿ ಹೆಚ್ಚಾಗಬಹುದು. ಇವತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸುತ್ತಮುತ್ತ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸ್ವಚ್ಛ ಹಾಗೂ ಒಣ ಹವೆಯೊಂದಿಗೆ ಸ್ವಲ್ಪ ಚಳಿ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಡಿಸೆಂಬರ್ 18ರಿಂದ ಚಳಿ ಹೆಚ್ಚಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಚಳಿ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಈಗಿನಂತೆ ಡಿಸೆಂಬರ್ 17 ರ ತನಕ ಮೋಡದ ವಾತಾವರಣ ಇರಲಿದ್ದು, 18 ರಿಂದ ಸ್ವಚ್ಛ ವಾತಾವರಣದೊಂದಿಗೆ ಚಳಿಯ ಪ್ರಮಾಣವೂ ಅಧಿಕವಾಗುವ ಸೂಚನೆಗಳಿವೆ.

ಉತ್ತರ ಭಾರತದ ಅಸ್ವಾಭಾವಿಕ ತಿರುವಿಕೆಯ ವ್ಯಾಪ್ತಿ ಹೆಚ್ಚಾಗಿ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಬೀಸುತ್ತಿರುವುದರಿಂದ ಹಾಗೂ ಅರಬ್ಬಿ ಸಮುದ್ರದ ಕೇರಳ ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಈ ಮೋಡದ ವಾತಾವರಣ ಉಂಟಾಗಿದೆ. ಈ ಉತ್ತರ ಭಾರತದ ಈ ಬೃಹತ್ ತಿರುಗುವಿಕೆಯು ಪಶ್ಚಿಮಕ್ಕಿಂತ ಚಲಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 18 ರಿಂದ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸಲು ಆರಂಭವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಮತ್ತೆ ಚಳಿಯ ಪ್ರಮಾಣವೂ ಹೆಚ್ಚುಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

5 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

22 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago