Advertisement
MIRROR FOCUS

ರಾಜ್ಯದ ನದಿಗಳ ನೀರು ಶುದ್ದವಾಗಿದೆ..? | ಯಾವೆಲ್ಲಾ ನದಿಗಳ ನೀರು ಕಲುಷಿತವಾಗಿದೆ..? | ಹಸಿರು ನ್ಯಾಯಮಂಡಳಿಗೆ ಪ್ರಮಾಣಪತ್ರ ಸಲ್ಲಿಕೆ

Share

ಮನುಷ್ಯನಿಗೆ ಬದುಕಲು ನೀರು(Water) ಅತಿ ಮುಖ್ಯ. ವಿಶ್ವದಾದ್ಯಂತ ನೀರಿನ ಬವಣೆ(Water scarcity) ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಕುಡಿಯುವ ನೀರಿನ(Drinking water) ಸಮಸ್ಯೆ ತಾರಕಕ್ಕೇರುತ್ತಿದೆ. ನೀರು ಇದ್ದರು ಅದು ಎಷ್ಟು ಶುದ್ದವಾಗಿದೆ. ಕುಡಿಯಲು ಯೋಗ್ಯವಾಗಿದೆಯೇ..? ಅನ್ನುವ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ. ಇದೀಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(Karnataka State Pollution Control Board) ಪ್ರಕಾರ, ರಾಜ್ಯದ 10 ಪ್ರಮುಖ ನದಿಗಳು ಕಲುಷಿತಗೊಂಡಿವೆ. ನಗರ ಮತ್ತು ಪಟ್ಟಣ ಪ್ರದೇಶಗಳ ಒಳಚರಂಡಿ ನೀರು ಹಾಗೂ ಆಯಾ ಜಲಾನಯನ ಪ್ರದೇಶಗಳಲ್ಲಿನ ಕೈಗಾರಿಕೆಗಳ ತ್ಯಾಜ್ಯಗಳು(Industrial waste) ನೇರವಾಗಿ ನದಿಗಳಿಗೆ(River) ಸೇರುತ್ತಿರುವುದರಿಂದ ನದಿಗಳು ಕಲುಷಿತಗೊಂಡಿವೆ ಎಂದು ಮಾಹಿತಿ ನೀಡಿದೆ.

ನದಿಗಳ ಮಾಲಿನ್ಯ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್‌ಜಿಟಿ) ರಾಜ್ಯದ ನದಿಗಳ ಮಾಲಿನ್ಯದ ಪ್ರಮಾಣದ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಮಾಣಪತ್ರ ಸಲ್ಲಿಕೆ ಮಾಡಿದೆ. ಅದರ ಪ್ರಕಾರ ರಾಜ್ಯದ 10 ಪ್ರಮುಖ ನದಿಗಳು ಕಲುಷಿತಗೊಂಡಿವೆ ಎನ್ನುವ ಅಧಿಕೃತ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲೇ ದಕ್ಷಿಣ ಪಿನಾಕಿನಿ ಹೆಚ್ಚು ಮಲೀನ: ಸಿಪಿಸಿಬಿ (ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ) ವರದಿ ಪ್ರಕಾರ, ಬೆಂಗಳೂರಿನ ನಂದಿ ಬೆಟ್ಟದಲ್ಲಿ ಹುಟ್ಟಿ ಬಂಗಾಳ ಕೊಲ್ಲಿ ಸೇರುವ ದಕ್ಷಿಣ ಪಿನಾಕಿನಿ ನದಿ ರಾಜ್ಯದ ಅತೀ ಕಲುಷಿತವಾಗಿದೆ. ಶುದ್ಧ ನೀರಿನಲ್ಲಿ ಪ್ರತಿ ಲೀಟರ್‌ ನೀರಿನಲ್ಲಿ 1 ಎಂಜಿ ಬಯೋಕೆಮಿಕಲ್‌ ಆಕ್ಸಿಜನ್‌ ಡಿಮ್ಯಾಂಡ್‌ (ಬಿಒಡಿ) ಪ್ರಮಾಣ ಇರಬೇಕು. ಆದರೆ, ಪಿನಾಕಿನಿ ನೀರಿನಲ್ಲಿ 111.0 ರಷ್ಟಿತ್ತು. ಅಘನಾಶಿನಿಯಲ್ಲಿ 3.3, ಅರ್ಕಾವತಿ 39.0, ಭದ್ರಾ 7, ಭೀಮಾ 4, ಕಾವೇರಿ 6, ಗಂಗಾವಳಿ 3.4, ಕಬಿನಿ 3.8, ಕಾಗಿಣ 3.1, ಕೃಷ್ಣ 4.7, ಲಕ್ಷ್ಮಣತೀರ್ಥ 5.6, ನೇತ್ರಾವತಿ 6.0, ಶರಾವತಿ 3.3, ಶಿಂಶಾ 9.5, ತುಂಗಾ 6.0, ತುಂಗಾಭದ್ರಾ 6.2ರಷ್ಟಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಒಟ್ಟಾರೆ ರಾಜ್ಯದ 16 ನದಿಗಳು ಕಲುಷಿತಗೊಂಡಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು 2022ರಲ್ಲಿ ಜಲಶಕ್ತಿ ಸಚಿವಾಲಯಕ್ಕೆ ವರದಿ ಸಲ್ಲಿಸಿತ್ತು. ಆದರೆ, ಶರಾವತಿ, ಗಂಗಾವಳಿ, ಅಘನಾಶಿನಿ, ಕೃಷ್ಣಾ, ಕಾಗಿನ ಹಾಗೂ ನೇತ್ರಾವತಿ ನದಿಗಳಲ್ಲಿ ಕರಗಿದ ಆಮ್ಲಜನಕದ (ಬಿಒಡಿ) ಪ್ರಮಾಣ 3 ಮಿಲಿಗ್ರಾಂ/ಲೀಟರ್‌ ದಾಟಿಲ್ಲ. ಹೀಗಾಗಿ, ಈ ನದಿಗಳನ್ನು ಕಲುಷಿತ ನದಿಗಳ ಪಟ್ಟಿಯಿಂದ ಕೈಬಿಡಬೇಕು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪತ್ರ ಬರೆಯಲಾಗಿದೆ. ಹಾಗಾಗಿ ಈ ನದಿಗಳನ್ನು ಬಿಟ್ಟು 10 ನದಿಗಳ ಹೆಸರನ್ನು ಪ್ರಸ್ತಾಪಿಸಿ ಮಲಿನಗೊಂಡ ನದಿಗಳ ಕುರಿತ ಪ್ರಮಾಣಪತ್ರವನ್ನು ರಾಷ್ಟ್ರೀಯ ಹಸಿರು ಪೀಠಕ್ಕೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಲ್ಲಿಕೆ ಮಾಡಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಪ್ರಕಾರ ರಾಜ್ಯದ ಆರು ನದಿಗಳು ಸೇಫ್ ಆಗಿದ್ದು, ಮಾಲಿನ್ಯ ಮಟ್ಟದ ಮಿತಿಯ ಒಳಗಡೆ ಇದೆ. ಅಘನಾಶಿನಿಯಲ್ಲಿ 3.3, ಗಂಗಾವಳಿ 3.4, ಕಾಗಿಣ 3.1, ಕೃಷ್ಣಾ 4.7, ನೇತ್ರಾವತಿ 6.0, ಶರಾವತಿ 3.3 ಬಿಒಡಿ ಪ್ರಮಾಣ ಇದ್ದದ್ದು ಈಗ ಕರಗಿದ ಆಮ್ಲಜನಕದ (ಬಿಒಡಿ) ಪ್ರಮಾಣ 3 ಮಿಲಿಗ್ರಾಂ/ಲೀಟರ್‌ ದಾಟಿಲ್ಲ ಎಂದು ತಿಳಿಸಿದೆ. ಹಾಗಾಗಿ ಈ ನದಿಗಳ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯ ಪ್ರಕಾರ ಮಲಿನತೆಯ ಮಿತಿಯ ಒಳಗಡೆ ಇದೆ ಎಂದು ಪರಿಗಣಿಸಬಹುದಾಗಿದೆ.

 Source : ಈಟಿವಿ ಭಾರತ್

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

7 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

14 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago