Opinion

ಬಿಪಿಎಲ್ ಕಾರ್ಡ್‌ದಾರರೇ ಕಾರು ಇದೆಯಾ..? ಹಾಗಾದ್ರೆ ನಿಮ್ಮ BPL Card ಉಳಿಯೋದು ಡೌಟು | ಚಿಂತನೆ ನಡೆಯುತ್ತಿದೆ.. ! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಿಪಿಎಲ್‌ ಕಾರ್ಡ್‌ದಾರರಿಗೆ ಒಂದಲ್ಲ ಒಂದು ಸುದ್ದಿಗಳನ್ನು ಸರ್ಕಾರ ನೀಡುತ್ತಲೇ ಇರುತ್ತದೆ. ಹೆಚ್ಚಿನ ಬಾರಿ ಸಿಹಿ ಸುದ್ದಿ ನೀಡಿದ್ರೆ ಈ ಬಾರಿ ಕಹಿ ಸುದ್ದಿಯನ್ನು ನೀಡಿದೆ. ಇದೀಗ ಸರ್ಕಾರ ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಚಿಂತನೆ ಮಾಡ್ತಿದ್ದು, ಸ್ವಂತ ಕಾರು ಇರುವವರಿಗೆ ಉಚಿತ ಅಕ್ಕಿ ಬೇಕಾ ಅಂತ ಸಚಿವರು ಪ್ರಶ್ನೆ ಕೇಳಿ ಅನುಮಾನ ಹುಟ್ಟು ಹಾಕಿದ್ದಾರೆ.

Advertisement

ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಸ್ ಸರ್ಕಾರ ಮತ್ತೊಂದು ವಿವಾದ ಸೃಷ್ಟಿ ಮಾಡಿದೆ. ಕಾರು ಇರುವವರಿಗೆ ಬಿಪಿಎಲ್ ಕಾರ್ಡ್‍ನಲ್ಲಿ ಉಚಿತ ಅಕ್ಕಿ ಬೇಕಾ ಎಂಬ ಪ್ರಶ್ನೆ ಹುಟ್ಟು ಹಾಕಿದ್ದಾರೆ. ಈ ಮೂಲಕ ಸ್ವಂತ ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ಸುಳಿವನ್ನ ಆಹಾರ ಸಚಿವ ಮುನಿಯಪ್ಪ ಕೊಟ್ಟಿದ್ದಾರೆ.

ಕಾರು ಇರುವವರ ಕಾರ್ಡ್ ರದ್ದು ಮಾಡುವಂತೆ ಹಿಂದಿನ ಸರ್ಕಾರ ಕಳೆದ ವರ್ಷ ಆದೇಶ ಹೊರಡಿಸಿತ್ತು. ವಿವಾದ ಆದ ಬಳಿಕ ಅ ಆದೇಶಕ್ಕೆ ತಡೆ ಕೊಟ್ಟಿತ್ತು. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಯೆಲ್ಲೋ ಬೋರ್ಡ್ ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಅವರು ಜೀವನಕ್ಕಾಗಿ ಅದನ್ನ ಬಳಕೆ ಮಾಡುತ್ತಾರೆ. ಆದರೆ ಸ್ವಂತ ಕಾರು, ವೈಟ್ ಬೋರ್ಡ್ ಇರೋರಿಗೆ ಉಚಿತ ಅಕ್ಕಿ ಅವಶ್ಯಕತೆ ಇದೆಯಾ ಅಂತ ಚರ್ಚೆ ಮಾಡಬೇಕು ಅಂದರು.

ಈ ಮೂಲಕ ವೈಟ್ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡೋ ಸುಳಿವು ಕೊಟ್ಟರು. ಅಷ್ಟೇ ಅಲ್ಲ ಮುಂದಿನ ದಿನಗಳಲ್ಲಿ ಅನಗತ್ಯವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ಕುರಿತು ತನಿಖೆ ಮಾಡೋದಾಗಿ ತಿಳಿಸಿದರು. ಹಿಂದಿನ ಬಿಜೆಪಿ ಸರ್ಕಾ ಇದ್ದಾಗ ಇದೇ ನಿಯಮ ಜಾರಿಗೆ ತರಲು ಹೊರಟಾಗ ಕಾಂಗ್ರೆಸ್ ವಿರೋಧ ಮಾಡಿತ್ತು. ಈಗ ಕಾಂಗ್ರೆಸ್ ಸರ್ಕಾರ ಈ ನಿಯಮ ಜಾರಿಗೆ ಮುಂದಾಗಿದೆ….!

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

8 hours ago

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…

8 hours ago

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

15 hours ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

19 hours ago

ಹೊಸರುಚಿ | ಹಲಸಿನ ಬೀಜದ ಚಟ್ನಿ ಪುಡಿ

ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…

19 hours ago

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

1 day ago