ಈ ಬಿಪಿಎಲ್ ಕಾರ್ಡ್ದಾರರಿಗೆ ಒಂದಲ್ಲ ಒಂದು ಸುದ್ದಿಗಳನ್ನು ಸರ್ಕಾರ ನೀಡುತ್ತಲೇ ಇರುತ್ತದೆ. ಹೆಚ್ಚಿನ ಬಾರಿ ಸಿಹಿ ಸುದ್ದಿ ನೀಡಿದ್ರೆ ಈ ಬಾರಿ ಕಹಿ ಸುದ್ದಿಯನ್ನು ನೀಡಿದೆ. ಇದೀಗ ಸರ್ಕಾರ ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಚಿಂತನೆ ಮಾಡ್ತಿದ್ದು, ಸ್ವಂತ ಕಾರು ಇರುವವರಿಗೆ ಉಚಿತ ಅಕ್ಕಿ ಬೇಕಾ ಅಂತ ಸಚಿವರು ಪ್ರಶ್ನೆ ಕೇಳಿ ಅನುಮಾನ ಹುಟ್ಟು ಹಾಕಿದ್ದಾರೆ.
ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಸ್ ಸರ್ಕಾರ ಮತ್ತೊಂದು ವಿವಾದ ಸೃಷ್ಟಿ ಮಾಡಿದೆ. ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ನಲ್ಲಿ ಉಚಿತ ಅಕ್ಕಿ ಬೇಕಾ ಎಂಬ ಪ್ರಶ್ನೆ ಹುಟ್ಟು ಹಾಕಿದ್ದಾರೆ. ಈ ಮೂಲಕ ಸ್ವಂತ ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ಸುಳಿವನ್ನ ಆಹಾರ ಸಚಿವ ಮುನಿಯಪ್ಪ ಕೊಟ್ಟಿದ್ದಾರೆ.
ಕಾರು ಇರುವವರ ಕಾರ್ಡ್ ರದ್ದು ಮಾಡುವಂತೆ ಹಿಂದಿನ ಸರ್ಕಾರ ಕಳೆದ ವರ್ಷ ಆದೇಶ ಹೊರಡಿಸಿತ್ತು. ವಿವಾದ ಆದ ಬಳಿಕ ಅ ಆದೇಶಕ್ಕೆ ತಡೆ ಕೊಟ್ಟಿತ್ತು. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಯೆಲ್ಲೋ ಬೋರ್ಡ್ ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಅವರು ಜೀವನಕ್ಕಾಗಿ ಅದನ್ನ ಬಳಕೆ ಮಾಡುತ್ತಾರೆ. ಆದರೆ ಸ್ವಂತ ಕಾರು, ವೈಟ್ ಬೋರ್ಡ್ ಇರೋರಿಗೆ ಉಚಿತ ಅಕ್ಕಿ ಅವಶ್ಯಕತೆ ಇದೆಯಾ ಅಂತ ಚರ್ಚೆ ಮಾಡಬೇಕು ಅಂದರು.
ಈ ಮೂಲಕ ವೈಟ್ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡೋ ಸುಳಿವು ಕೊಟ್ಟರು. ಅಷ್ಟೇ ಅಲ್ಲ ಮುಂದಿನ ದಿನಗಳಲ್ಲಿ ಅನಗತ್ಯವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ಕುರಿತು ತನಿಖೆ ಮಾಡೋದಾಗಿ ತಿಳಿಸಿದರು. ಹಿಂದಿನ ಬಿಜೆಪಿ ಸರ್ಕಾ ಇದ್ದಾಗ ಇದೇ ನಿಯಮ ಜಾರಿಗೆ ತರಲು ಹೊರಟಾಗ ಕಾಂಗ್ರೆಸ್ ವಿರೋಧ ಮಾಡಿತ್ತು. ಈಗ ಕಾಂಗ್ರೆಸ್ ಸರ್ಕಾರ ಈ ನಿಯಮ ಜಾರಿಗೆ ಮುಂದಾಗಿದೆ….!
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…