Advertisement
Opinion

ಬಿಪಿಎಲ್ ಕಾರ್ಡ್‌ದಾರರೇ ಕಾರು ಇದೆಯಾ..? ಹಾಗಾದ್ರೆ ನಿಮ್ಮ BPL Card ಉಳಿಯೋದು ಡೌಟು | ಚಿಂತನೆ ನಡೆಯುತ್ತಿದೆ.. ! |

Share

ಈ ಬಿಪಿಎಲ್‌ ಕಾರ್ಡ್‌ದಾರರಿಗೆ ಒಂದಲ್ಲ ಒಂದು ಸುದ್ದಿಗಳನ್ನು ಸರ್ಕಾರ ನೀಡುತ್ತಲೇ ಇರುತ್ತದೆ. ಹೆಚ್ಚಿನ ಬಾರಿ ಸಿಹಿ ಸುದ್ದಿ ನೀಡಿದ್ರೆ ಈ ಬಾರಿ ಕಹಿ ಸುದ್ದಿಯನ್ನು ನೀಡಿದೆ. ಇದೀಗ ಸರ್ಕಾರ ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಚಿಂತನೆ ಮಾಡ್ತಿದ್ದು, ಸ್ವಂತ ಕಾರು ಇರುವವರಿಗೆ ಉಚಿತ ಅಕ್ಕಿ ಬೇಕಾ ಅಂತ ಸಚಿವರು ಪ್ರಶ್ನೆ ಕೇಳಿ ಅನುಮಾನ ಹುಟ್ಟು ಹಾಕಿದ್ದಾರೆ.

ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಸ್ ಸರ್ಕಾರ ಮತ್ತೊಂದು ವಿವಾದ ಸೃಷ್ಟಿ ಮಾಡಿದೆ. ಕಾರು ಇರುವವರಿಗೆ ಬಿಪಿಎಲ್ ಕಾರ್ಡ್‍ನಲ್ಲಿ ಉಚಿತ ಅಕ್ಕಿ ಬೇಕಾ ಎಂಬ ಪ್ರಶ್ನೆ ಹುಟ್ಟು ಹಾಕಿದ್ದಾರೆ. ಈ ಮೂಲಕ ಸ್ವಂತ ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ಸುಳಿವನ್ನ ಆಹಾರ ಸಚಿವ ಮುನಿಯಪ್ಪ ಕೊಟ್ಟಿದ್ದಾರೆ.

ಕಾರು ಇರುವವರ ಕಾರ್ಡ್ ರದ್ದು ಮಾಡುವಂತೆ ಹಿಂದಿನ ಸರ್ಕಾರ ಕಳೆದ ವರ್ಷ ಆದೇಶ ಹೊರಡಿಸಿತ್ತು. ವಿವಾದ ಆದ ಬಳಿಕ ಅ ಆದೇಶಕ್ಕೆ ತಡೆ ಕೊಟ್ಟಿತ್ತು. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಯೆಲ್ಲೋ ಬೋರ್ಡ್ ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಅವರು ಜೀವನಕ್ಕಾಗಿ ಅದನ್ನ ಬಳಕೆ ಮಾಡುತ್ತಾರೆ. ಆದರೆ ಸ್ವಂತ ಕಾರು, ವೈಟ್ ಬೋರ್ಡ್ ಇರೋರಿಗೆ ಉಚಿತ ಅಕ್ಕಿ ಅವಶ್ಯಕತೆ ಇದೆಯಾ ಅಂತ ಚರ್ಚೆ ಮಾಡಬೇಕು ಅಂದರು.

ಈ ಮೂಲಕ ವೈಟ್ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡೋ ಸುಳಿವು ಕೊಟ್ಟರು. ಅಷ್ಟೇ ಅಲ್ಲ ಮುಂದಿನ ದಿನಗಳಲ್ಲಿ ಅನಗತ್ಯವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ಕುರಿತು ತನಿಖೆ ಮಾಡೋದಾಗಿ ತಿಳಿಸಿದರು. ಹಿಂದಿನ ಬಿಜೆಪಿ ಸರ್ಕಾ ಇದ್ದಾಗ ಇದೇ ನಿಯಮ ಜಾರಿಗೆ ತರಲು ಹೊರಟಾಗ ಕಾಂಗ್ರೆಸ್ ವಿರೋಧ ಮಾಡಿತ್ತು. ಈಗ ಕಾಂಗ್ರೆಸ್ ಸರ್ಕಾರ ಈ ನಿಯಮ ಜಾರಿಗೆ ಮುಂದಾಗಿದೆ….!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

14 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

17 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

17 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

21 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

21 hours ago