ಆಧಾರು ಕಾರ್ಡು(Aadhaar Card) ನವೀಕರಣ(Renewal) ಮಾಡಿಸಿ…. ನಿಮ್ಮ ಆಧಾರಿಗೆ ಹತ್ತು ವರ್ಷ ತುಂಬಿದೆಯಾ…? ತುಂಬಿದರೆ ತಕ್ಷಣ ಸಮೀಪದ ಗ್ರಾಮ ಒನ್ ಗೆ ಹೋಗಿ ರಿನೀವಲ್ ಮಾಡಿಸಿಕೊಂಡು ‘ಆಧಾರ ಪುನೀತವಾಗಿ” ನಮ್ಮ ಜೀವನ.. ನಮ್ಮ ಗ್ರಾಮೀಣ ಕೃಷಿ ಬದುಕು.. ಈ ಆಧಾರು, ಫ್ರೂಫ್(Proof) , ಬಿಪಿಎಲ್(BPL), ಬೆಳೆ ವಿಮೆ(crop insurance), ಅಕ್ರಮಸಕ್ರಮ ಅರ್ಜಿ, ಎಲೆಚುಕ್ಕಿ ಶಿಲೀಂಧ್ರ, ಗೃಹಲಕ್ಷ್ಮಿ , ಕಿಸಾನ್ ಸಮ್ಮಾನ್( leaf fungus, Grilahakshmi, Kisan Samman).. ಆ ಲಿಂಕ್ ಈ ಲಿಂಕ್ ಮಾಡಿಸುವುದರೊಳಗೇ ಪಾವನವಾಗುತ್ತದೆ.
ಬೆಳಿಗ್ಗೆ ಹುಲ್ಲು ಬೀಜ ಕೇಳಿ ಪಶುವೈದ್ಯ ಇಲಾಖೆಯ ಸಿಬ್ಬಂದಿ ಗೆ ಕರೆ ಮಾಡಿದ್ದೆ.. ಅವರು ಉಚಿತ ಮೇವಿನ ಬೀಜ ಕ್ಕೆ ಆಧಾರು, ಫ್ರೂಟ್ ಐಡಿ , ಆ ಜರಾಕ್ಸು, ಈ ಓಟಿಪಿ ಕೇಳಿದರು. ನಾನು ಈ ಅಡಕೆ ಕೊಯ್ಲು ಸಮಯದಲ್ಲಿ ಇದನ್ನೆಲ್ಲ ಮಾಡುತ್ತಾ ಕೂರಲು ಪುರುಸೋತ್ತು ಇಲ್ಲ ಬೀಜ ಬೇಡ ಬಿಡಿ ಎಂದು ಕೈಬಿಟ್ಟೆ.. ಊರು ಮನೆ ಪಂಚಾಯತಿ, ಆರೋಗ್ಯ ಕೇಂದ್ರಗಳು, ಪಶುವೈದ್ಯ ಇಲಾಖೆ ಇವರಿಗೆಲ್ಲ ಯಾಕ್ರೀ, ಹಿಡುದು ಮುಟ್ಟಿದ್ದಕ್ಕೆಲ್ಲಾ ಆದಾರು, ಫ್ರೂಫ್ ಮತ್ತೊಂದು…? ಯಾರಿಗೆ ಇದನ್ನೇ ಮಾಡ್ತಾ ಕೂರಕ್ಕೆ ಆಗುತ್ತದೆ…?
ನಮ್ಮ ಆಧಾರಿಗೆ ವಯಸ್ಸು ಎಷ್ಟು ಆಗಿದೆ ಎಂದು ನೋಡಿಕೊಂಡು ಅದನ್ನು ರಿನಿವಲ್ ಮಾಡಿಸಬೇಕು.. ಅದಕ್ಕೆ ಮತ್ತೆ ನೂರೆಂಟು ತೊಡಕು.. ಸರ್ವರೂ ಬ್ಯಿಸಿ… ಒಟ್ಟಿನಲ್ಲಿ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ನಲ್ಲೇ ಹಾಸಿಗೆ ಹಾಕಿಕೊಂಡು ಒಂದು ಸ್ಟೌವ್ ಪಾತ್ರೆ ಪಡಗ ಇಟ್ಟುಕೊಂಡು ಅಲ್ಲೇ ವಾಸ್ತವ್ಯ ಹೂಡಿ ಒಂದಾದ ಮೇಲೆ ಒಂದು ಲಿಂಕ್ ಮಾಡಿಸುತ್ತಾ ಕಾಲ ದೂಡಬೇಕು ಅಷ್ಟೇ.. ಅಂದಹಾಗೆ ಇದಾದ ಮೇಲೆ ರೇಷನ್ ಕಾರ್ಡ್ ಗೆ ವಯಸ್ಸಾಗುತ್ತದೆ.. ನಂತರ ಓಟರ್ ಐಡಿಗೂ ದಶಮಾನೋತ್ಸವ ಮುಗಿತದೆ…!!
ಅನಂತರ ಮೇಲೆ ಪಾನ್ ಕಾರ್ಡ್ ಗೆ ವಯಸ್ಸು ಆಗುತ್ತದೆ.. ಮತ್ತೆ ಹೊಸ ಆದಾರ್ ಗೆ ಮತ್ತೆ ಹಳೆ ಆರ್ ಟಿ ಸಿ ಲಿಂಕು.. ಇದು ಗ್ರಾಮ ಒನ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆ ಸಾಕುವ ಯೋಜನೆ ಯಾ….?, ಯಾಕೆ ಸರ್ಕಾರ ವೇ ಜನರಿಗೆ ತೊಂದರೆ ಕೊಡದೇ ರಿನಿವಲ್ ಮಾಡಿಕೊಡಬಾರದು….?, ಜನರನ್ನು ಮತ್ತಷ್ಟು ಗೊಂದಲ ಅವ್ಯವಸ್ಥೆ ಚಿಂತೆಗೆ ಯಾಕೆ ದೂಡಬೇಕು…?
ಬಲ್ಲವರು ಪೇಳಿ…..
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…