ಆಧಾರು ಕಾರ್ಡು(Aadhaar Card) ನವೀಕರಣ(Renewal) ಮಾಡಿಸಿ…. ನಿಮ್ಮ ಆಧಾರಿಗೆ ಹತ್ತು ವರ್ಷ ತುಂಬಿದೆಯಾ…? ತುಂಬಿದರೆ ತಕ್ಷಣ ಸಮೀಪದ ಗ್ರಾಮ ಒನ್ ಗೆ ಹೋಗಿ ರಿನೀವಲ್ ಮಾಡಿಸಿಕೊಂಡು ‘ಆಧಾರ ಪುನೀತವಾಗಿ” ನಮ್ಮ ಜೀವನ.. ನಮ್ಮ ಗ್ರಾಮೀಣ ಕೃಷಿ ಬದುಕು.. ಈ ಆಧಾರು, ಫ್ರೂಫ್(Proof) , ಬಿಪಿಎಲ್(BPL), ಬೆಳೆ ವಿಮೆ(crop insurance), ಅಕ್ರಮಸಕ್ರಮ ಅರ್ಜಿ, ಎಲೆಚುಕ್ಕಿ ಶಿಲೀಂಧ್ರ, ಗೃಹಲಕ್ಷ್ಮಿ , ಕಿಸಾನ್ ಸಮ್ಮಾನ್( leaf fungus, Grilahakshmi, Kisan Samman).. ಆ ಲಿಂಕ್ ಈ ಲಿಂಕ್ ಮಾಡಿಸುವುದರೊಳಗೇ ಪಾವನವಾಗುತ್ತದೆ.
ಬೆಳಿಗ್ಗೆ ಹುಲ್ಲು ಬೀಜ ಕೇಳಿ ಪಶುವೈದ್ಯ ಇಲಾಖೆಯ ಸಿಬ್ಬಂದಿ ಗೆ ಕರೆ ಮಾಡಿದ್ದೆ.. ಅವರು ಉಚಿತ ಮೇವಿನ ಬೀಜ ಕ್ಕೆ ಆಧಾರು, ಫ್ರೂಟ್ ಐಡಿ , ಆ ಜರಾಕ್ಸು, ಈ ಓಟಿಪಿ ಕೇಳಿದರು. ನಾನು ಈ ಅಡಕೆ ಕೊಯ್ಲು ಸಮಯದಲ್ಲಿ ಇದನ್ನೆಲ್ಲ ಮಾಡುತ್ತಾ ಕೂರಲು ಪುರುಸೋತ್ತು ಇಲ್ಲ ಬೀಜ ಬೇಡ ಬಿಡಿ ಎಂದು ಕೈಬಿಟ್ಟೆ.. ಊರು ಮನೆ ಪಂಚಾಯತಿ, ಆರೋಗ್ಯ ಕೇಂದ್ರಗಳು, ಪಶುವೈದ್ಯ ಇಲಾಖೆ ಇವರಿಗೆಲ್ಲ ಯಾಕ್ರೀ, ಹಿಡುದು ಮುಟ್ಟಿದ್ದಕ್ಕೆಲ್ಲಾ ಆದಾರು, ಫ್ರೂಫ್ ಮತ್ತೊಂದು…? ಯಾರಿಗೆ ಇದನ್ನೇ ಮಾಡ್ತಾ ಕೂರಕ್ಕೆ ಆಗುತ್ತದೆ…?
ನಮ್ಮ ಆಧಾರಿಗೆ ವಯಸ್ಸು ಎಷ್ಟು ಆಗಿದೆ ಎಂದು ನೋಡಿಕೊಂಡು ಅದನ್ನು ರಿನಿವಲ್ ಮಾಡಿಸಬೇಕು.. ಅದಕ್ಕೆ ಮತ್ತೆ ನೂರೆಂಟು ತೊಡಕು.. ಸರ್ವರೂ ಬ್ಯಿಸಿ… ಒಟ್ಟಿನಲ್ಲಿ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ನಲ್ಲೇ ಹಾಸಿಗೆ ಹಾಕಿಕೊಂಡು ಒಂದು ಸ್ಟೌವ್ ಪಾತ್ರೆ ಪಡಗ ಇಟ್ಟುಕೊಂಡು ಅಲ್ಲೇ ವಾಸ್ತವ್ಯ ಹೂಡಿ ಒಂದಾದ ಮೇಲೆ ಒಂದು ಲಿಂಕ್ ಮಾಡಿಸುತ್ತಾ ಕಾಲ ದೂಡಬೇಕು ಅಷ್ಟೇ.. ಅಂದಹಾಗೆ ಇದಾದ ಮೇಲೆ ರೇಷನ್ ಕಾರ್ಡ್ ಗೆ ವಯಸ್ಸಾಗುತ್ತದೆ.. ನಂತರ ಓಟರ್ ಐಡಿಗೂ ದಶಮಾನೋತ್ಸವ ಮುಗಿತದೆ…!!
ಅನಂತರ ಮೇಲೆ ಪಾನ್ ಕಾರ್ಡ್ ಗೆ ವಯಸ್ಸು ಆಗುತ್ತದೆ.. ಮತ್ತೆ ಹೊಸ ಆದಾರ್ ಗೆ ಮತ್ತೆ ಹಳೆ ಆರ್ ಟಿ ಸಿ ಲಿಂಕು.. ಇದು ಗ್ರಾಮ ಒನ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆ ಸಾಕುವ ಯೋಜನೆ ಯಾ….?, ಯಾಕೆ ಸರ್ಕಾರ ವೇ ಜನರಿಗೆ ತೊಂದರೆ ಕೊಡದೇ ರಿನಿವಲ್ ಮಾಡಿಕೊಡಬಾರದು….?, ಜನರನ್ನು ಮತ್ತಷ್ಟು ಗೊಂದಲ ಅವ್ಯವಸ್ಥೆ ಚಿಂತೆಗೆ ಯಾಕೆ ದೂಡಬೇಕು…?
ಬಲ್ಲವರು ಪೇಳಿ…..
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…