Opinion

#Deeksha | ಹಿಂದೂ ಸಂಪ್ರದಾಯಕ್ಕೆ ಮನಸೋತ ವಿದೇಶಿಯರು | ರಷ್ಯಾದ 8 ವರ್ಷದ ಬಾಲಕನಿಗೆ ಇಷ್ಟಲಿಂಗ ದೀಕ್ಷೆ | ಗಣೇಶನಾಗಿ ಬದಲಾದ ಆ್ಯಂಡ್ರೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಿಂದೂ ಧರ್ಮ, ಸಂಸ್ಕೃತಿ, ಆಚರಣೆಗೆ ಅದರದೇ ಆದ ಮಹೋನ್ನತ ಸ್ಥಾನವಿದೆ. ನಮ್ಮ ಹಿರಿಯರು, ಋಷಿಮುನಿಗಳು ಹಿಂದೂ ಧರ್ಮಕ್ಕೆ ಸರ್ವ ಧರ್ಮಗಳ ಸಂಯೋಜನೆಯಲ್ಲಿ ಭದ್ರ ಬುನಾದಿಯನ್ನು ಹಾಕಿದ್ದಾರೆ. ಹಿಂದೂ ಧರ್ಮವನ್ನು ಯಾರೂ ಬೇಕಾದರು ಆಚರಿಸಬಹುದು. ಅದರಲ್ಲಿ ಸಿಗುವ ನೆಮ್ಮದಿ, ಸಾರ್ಥಕತೆಯನ್ನು ನೆಚ್ಚಿಕೊಂಡು ಅದೆಷ್ಟೋ ವಿದೇಶಿಗರು ಹಿಂದೂ ಧರ್ಮಕ್ಕೆ ಮನಸೋತಿದ್ದಿದೆ. ಅಲ್ಲದೆ ಹಿಂದೂ ಧರ್ಮಕ್ಕೆ ಮತಾಂತರಗೊಂಡದ್ದು ಇದೆ. ಇದೀಗ ರಷ್ಯಾದ 8 ವರ್ಷದ ಬಾಲಕ ಕಾಶಿ ಪೀಠದ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದಾನೆ. ಈ ಮೂಲಕ ಮಾಸ್ಕೋ ನಿವಾಸಿ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎಂಬ 8 ವರ್ಷದ ಬಾಲಕ ಈಗ ಗಣೇಶನಾಗಿ ಬದಲಾಗಿದ್ದಾನೆ.

Advertisement

ಈ ಹಿಂದೆ ಉತ್ತರ ಕನ್ನಡ ಗೋಕರ್ಣದಲ್ಲಿ ಸಾವಿರಾರು ಜನರು ಕಾಶಿ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದರು. ಈ ವೇಳೆ ರಷ್ಯಾದ ಮಹಿಳೆಯಾದ ಬಾಲಕನ ತಾಯಿ ಸಹ ವೀರಶೈವ ಧರ್ಮ ಸ್ವೀಕರಿಸಿದ್ದರು. ಬಳಿಕ ಪಾರ್ವತಿ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಅವರು ಚಾಚು ತಪ್ಪದೆ ವೀರಶೈವ ಧರ್ಮವನ್ನುಪಾಲಿಸುತ್ತಿದ್ದರು. ಅಲ್ಲದೇ ಇಷ್ಟಲಿಂಗ ಪೂಜೆಯನ್ನು ಸಹ ನಿತ್ಯವೂ ನಡೆಸುತ್ತಿದ್ದರು. ಇದರಿಂದ ಮಗ ಕೂಡ ಪ್ರಭಾವಿತನಾಗಿದ್ದು, ಅವರಂತೆ ಇಷ್ಟಲಿಂಗ ಧರಿಸಲು ಬಯಸಿದ್ದ. ಅವನ ಇಷ್ಟದಂತೆ ಪಾಲಕರು ಆತನಿಗೆ ಕಾಶಿ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳಿಂದ ಇಷ್ಟಲಿಂಗ ದೀಕ್ಷೆ ಕೊಡಿಸಿದ್ದಾರೆ. ಬಳಿಕ ಆತನಿಗೆ ಮರು ನಾಮಕರಣಮಾಡಿ ಶುಭ ಹಾರೈಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

2 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

4 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

4 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

15 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

15 hours ago