ಹಿಂದೂ ಧರ್ಮ, ಸಂಸ್ಕೃತಿ, ಆಚರಣೆಗೆ ಅದರದೇ ಆದ ಮಹೋನ್ನತ ಸ್ಥಾನವಿದೆ. ನಮ್ಮ ಹಿರಿಯರು, ಋಷಿಮುನಿಗಳು ಹಿಂದೂ ಧರ್ಮಕ್ಕೆ ಸರ್ವ ಧರ್ಮಗಳ ಸಂಯೋಜನೆಯಲ್ಲಿ ಭದ್ರ ಬುನಾದಿಯನ್ನು ಹಾಕಿದ್ದಾರೆ. ಹಿಂದೂ ಧರ್ಮವನ್ನು ಯಾರೂ ಬೇಕಾದರು ಆಚರಿಸಬಹುದು. ಅದರಲ್ಲಿ ಸಿಗುವ ನೆಮ್ಮದಿ, ಸಾರ್ಥಕತೆಯನ್ನು ನೆಚ್ಚಿಕೊಂಡು ಅದೆಷ್ಟೋ ವಿದೇಶಿಗರು ಹಿಂದೂ ಧರ್ಮಕ್ಕೆ ಮನಸೋತಿದ್ದಿದೆ. ಅಲ್ಲದೆ ಹಿಂದೂ ಧರ್ಮಕ್ಕೆ ಮತಾಂತರಗೊಂಡದ್ದು ಇದೆ. ಇದೀಗ ರಷ್ಯಾದ 8 ವರ್ಷದ ಬಾಲಕ ಕಾಶಿ ಪೀಠದ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದಾನೆ. ಈ ಮೂಲಕ ಮಾಸ್ಕೋ ನಿವಾಸಿ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎಂಬ 8 ವರ್ಷದ ಬಾಲಕ ಈಗ ಗಣೇಶನಾಗಿ ಬದಲಾಗಿದ್ದಾನೆ.
ಈ ಹಿಂದೆ ಉತ್ತರ ಕನ್ನಡ ಗೋಕರ್ಣದಲ್ಲಿ ಸಾವಿರಾರು ಜನರು ಕಾಶಿ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದರು. ಈ ವೇಳೆ ರಷ್ಯಾದ ಮಹಿಳೆಯಾದ ಬಾಲಕನ ತಾಯಿ ಸಹ ವೀರಶೈವ ಧರ್ಮ ಸ್ವೀಕರಿಸಿದ್ದರು. ಬಳಿಕ ಪಾರ್ವತಿ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಅವರು ಚಾಚು ತಪ್ಪದೆ ವೀರಶೈವ ಧರ್ಮವನ್ನುಪಾಲಿಸುತ್ತಿದ್ದರು. ಅಲ್ಲದೇ ಇಷ್ಟಲಿಂಗ ಪೂಜೆಯನ್ನು ಸಹ ನಿತ್ಯವೂ ನಡೆಸುತ್ತಿದ್ದರು. ಇದರಿಂದ ಮಗ ಕೂಡ ಪ್ರಭಾವಿತನಾಗಿದ್ದು, ಅವರಂತೆ ಇಷ್ಟಲಿಂಗ ಧರಿಸಲು ಬಯಸಿದ್ದ. ಅವನ ಇಷ್ಟದಂತೆ ಪಾಲಕರು ಆತನಿಗೆ ಕಾಶಿ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳಿಂದ ಇಷ್ಟಲಿಂಗ ದೀಕ್ಷೆ ಕೊಡಿಸಿದ್ದಾರೆ. ಬಳಿಕ ಆತನಿಗೆ ಮರು ನಾಮಕರಣಮಾಡಿ ಶುಭ ಹಾರೈಸಿದ್ದಾರೆ.
– ಅಂತರ್ಜಾಲ ಮಾಹಿತಿ
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…