Opinion

#Deeksha | ಹಿಂದೂ ಸಂಪ್ರದಾಯಕ್ಕೆ ಮನಸೋತ ವಿದೇಶಿಯರು | ರಷ್ಯಾದ 8 ವರ್ಷದ ಬಾಲಕನಿಗೆ ಇಷ್ಟಲಿಂಗ ದೀಕ್ಷೆ | ಗಣೇಶನಾಗಿ ಬದಲಾದ ಆ್ಯಂಡ್ರೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಿಂದೂ ಧರ್ಮ, ಸಂಸ್ಕೃತಿ, ಆಚರಣೆಗೆ ಅದರದೇ ಆದ ಮಹೋನ್ನತ ಸ್ಥಾನವಿದೆ. ನಮ್ಮ ಹಿರಿಯರು, ಋಷಿಮುನಿಗಳು ಹಿಂದೂ ಧರ್ಮಕ್ಕೆ ಸರ್ವ ಧರ್ಮಗಳ ಸಂಯೋಜನೆಯಲ್ಲಿ ಭದ್ರ ಬುನಾದಿಯನ್ನು ಹಾಕಿದ್ದಾರೆ. ಹಿಂದೂ ಧರ್ಮವನ್ನು ಯಾರೂ ಬೇಕಾದರು ಆಚರಿಸಬಹುದು. ಅದರಲ್ಲಿ ಸಿಗುವ ನೆಮ್ಮದಿ, ಸಾರ್ಥಕತೆಯನ್ನು ನೆಚ್ಚಿಕೊಂಡು ಅದೆಷ್ಟೋ ವಿದೇಶಿಗರು ಹಿಂದೂ ಧರ್ಮಕ್ಕೆ ಮನಸೋತಿದ್ದಿದೆ. ಅಲ್ಲದೆ ಹಿಂದೂ ಧರ್ಮಕ್ಕೆ ಮತಾಂತರಗೊಂಡದ್ದು ಇದೆ. ಇದೀಗ ರಷ್ಯಾದ 8 ವರ್ಷದ ಬಾಲಕ ಕಾಶಿ ಪೀಠದ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದಾನೆ. ಈ ಮೂಲಕ ಮಾಸ್ಕೋ ನಿವಾಸಿ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎಂಬ 8 ವರ್ಷದ ಬಾಲಕ ಈಗ ಗಣೇಶನಾಗಿ ಬದಲಾಗಿದ್ದಾನೆ.

Advertisement
Advertisement

ಈ ಹಿಂದೆ ಉತ್ತರ ಕನ್ನಡ ಗೋಕರ್ಣದಲ್ಲಿ ಸಾವಿರಾರು ಜನರು ಕಾಶಿ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದರು. ಈ ವೇಳೆ ರಷ್ಯಾದ ಮಹಿಳೆಯಾದ ಬಾಲಕನ ತಾಯಿ ಸಹ ವೀರಶೈವ ಧರ್ಮ ಸ್ವೀಕರಿಸಿದ್ದರು. ಬಳಿಕ ಪಾರ್ವತಿ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಅವರು ಚಾಚು ತಪ್ಪದೆ ವೀರಶೈವ ಧರ್ಮವನ್ನುಪಾಲಿಸುತ್ತಿದ್ದರು. ಅಲ್ಲದೇ ಇಷ್ಟಲಿಂಗ ಪೂಜೆಯನ್ನು ಸಹ ನಿತ್ಯವೂ ನಡೆಸುತ್ತಿದ್ದರು. ಇದರಿಂದ ಮಗ ಕೂಡ ಪ್ರಭಾವಿತನಾಗಿದ್ದು, ಅವರಂತೆ ಇಷ್ಟಲಿಂಗ ಧರಿಸಲು ಬಯಸಿದ್ದ. ಅವನ ಇಷ್ಟದಂತೆ ಪಾಲಕರು ಆತನಿಗೆ ಕಾಶಿ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳಿಂದ ಇಷ್ಟಲಿಂಗ ದೀಕ್ಷೆ ಕೊಡಿಸಿದ್ದಾರೆ. ಬಳಿಕ ಆತನಿಗೆ ಮರು ನಾಮಕರಣಮಾಡಿ ಶುಭ ಹಾರೈಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

12 minutes ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

24 minutes ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

27 minutes ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

31 minutes ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

37 minutes ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

10 hours ago