ಹಿಂದೂ ಧರ್ಮ, ಸಂಸ್ಕೃತಿ, ಆಚರಣೆಗೆ ಅದರದೇ ಆದ ಮಹೋನ್ನತ ಸ್ಥಾನವಿದೆ. ನಮ್ಮ ಹಿರಿಯರು, ಋಷಿಮುನಿಗಳು ಹಿಂದೂ ಧರ್ಮಕ್ಕೆ ಸರ್ವ ಧರ್ಮಗಳ ಸಂಯೋಜನೆಯಲ್ಲಿ ಭದ್ರ ಬುನಾದಿಯನ್ನು ಹಾಕಿದ್ದಾರೆ. ಹಿಂದೂ ಧರ್ಮವನ್ನು ಯಾರೂ ಬೇಕಾದರು ಆಚರಿಸಬಹುದು. ಅದರಲ್ಲಿ ಸಿಗುವ ನೆಮ್ಮದಿ, ಸಾರ್ಥಕತೆಯನ್ನು ನೆಚ್ಚಿಕೊಂಡು ಅದೆಷ್ಟೋ ವಿದೇಶಿಗರು ಹಿಂದೂ ಧರ್ಮಕ್ಕೆ ಮನಸೋತಿದ್ದಿದೆ. ಅಲ್ಲದೆ ಹಿಂದೂ ಧರ್ಮಕ್ಕೆ ಮತಾಂತರಗೊಂಡದ್ದು ಇದೆ. ಇದೀಗ ರಷ್ಯಾದ 8 ವರ್ಷದ ಬಾಲಕ ಕಾಶಿ ಪೀಠದ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದಾನೆ. ಈ ಮೂಲಕ ಮಾಸ್ಕೋ ನಿವಾಸಿ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎಂಬ 8 ವರ್ಷದ ಬಾಲಕ ಈಗ ಗಣೇಶನಾಗಿ ಬದಲಾಗಿದ್ದಾನೆ.
ಈ ಹಿಂದೆ ಉತ್ತರ ಕನ್ನಡ ಗೋಕರ್ಣದಲ್ಲಿ ಸಾವಿರಾರು ಜನರು ಕಾಶಿ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದರು. ಈ ವೇಳೆ ರಷ್ಯಾದ ಮಹಿಳೆಯಾದ ಬಾಲಕನ ತಾಯಿ ಸಹ ವೀರಶೈವ ಧರ್ಮ ಸ್ವೀಕರಿಸಿದ್ದರು. ಬಳಿಕ ಪಾರ್ವತಿ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಅವರು ಚಾಚು ತಪ್ಪದೆ ವೀರಶೈವ ಧರ್ಮವನ್ನುಪಾಲಿಸುತ್ತಿದ್ದರು. ಅಲ್ಲದೇ ಇಷ್ಟಲಿಂಗ ಪೂಜೆಯನ್ನು ಸಹ ನಿತ್ಯವೂ ನಡೆಸುತ್ತಿದ್ದರು. ಇದರಿಂದ ಮಗ ಕೂಡ ಪ್ರಭಾವಿತನಾಗಿದ್ದು, ಅವರಂತೆ ಇಷ್ಟಲಿಂಗ ಧರಿಸಲು ಬಯಸಿದ್ದ. ಅವನ ಇಷ್ಟದಂತೆ ಪಾಲಕರು ಆತನಿಗೆ ಕಾಶಿ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳಿಂದ ಇಷ್ಟಲಿಂಗ ದೀಕ್ಷೆ ಕೊಡಿಸಿದ್ದಾರೆ. ಬಳಿಕ ಆತನಿಗೆ ಮರು ನಾಮಕರಣಮಾಡಿ ಶುಭ ಹಾರೈಸಿದ್ದಾರೆ.
– ಅಂತರ್ಜಾಲ ಮಾಹಿತಿ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…