58 ಟನ್ ಕಳ್ಳಸಾಗಣೆಯ ಕಲ್ಲಂಗಡಿ‌ ಹಣ್ಣು ನಾಶಪಡಿಸಿದ ಇಸ್ರೇಲ್ | ಆಮದು ಗುಣಮಟ್ಟಕ್ಕೆ ಆದ್ಯತೆ ನೀಡುವ ಇಸ್ರೇಲ್ ಸರ್ಕಾರ |

June 6, 2022
9:11 PM
News Summary
ಕೃಷಿಯಲ್ಲಿ ಇಸ್ರೇಲ್‌ ನಂಬರ್‌ ವನ್‌ ದೇಶ. ಈ ದೇಶದಲ್ಲಿ ರೈತರ ಹಿತವನ್ನು ಸದಾ ಕಾಯುತ್ತದೆ. ಹೀಗಾಗಿ ಆಮದಾಗುವ ಎಲ್ಲಾ ಕೃಷಿ ವಸ್ತುಗಳೂ ಗುಣಮಟ್ಟ ಕಾಯ್ದುಕೊಳ್ಳಬೇಕು. ತನ್ನ ದೇಶದ ಕೃಷಿಕರ ರಕ್ಷಣೆಗೆ ಆದ್ಯತೆ ನೀಡುತ್ತದೆ. ಭಾರತವೂ ಇಂತಹದ್ದೇ ನಿಯಮಗಳನ್ನು ಏಕೆ ಮಾಡಬಾರದು ?

ಇಸ್ರೇಲ್ ಆಹಾರ ಆಮದುಗಳಿಗೆ ಕಟ್ಟುನಿಟ್ಟಾದ ಕ್ರಮಗಳನ್ನು ಅನುಸರಿಸುತ್ತಿದೆ. ಇದೀಗ ಕೆಲವು ದಿನಗಳ ಹಿಂದೆ ಕಳ್ಳಸಾಗಣೆಯ ಮೂಲಕ ಆಮದಾಗಿದ್ದ 58 ಟನ್  ಕಲ್ಲಂಗಡಿ ಹಣ್ಣನ್ನು ಇಸ್ರೇಲ್‌ ನಾಶಪಡಿಸಿದೆ. ಕೃಷಿ ಬೆಳವಣಿಗೆ ಹಾಗೂ ದೇಶದ ಕೃಷಿಕರ ಭದ್ರತೆ ಹಾಗೂ ದೇಶದ ಜನರ ಆರೋಗ್ಯ ಈ ಮೂರು ವಿಷಯಗಳ ಕಾರಣದಿಂದ ಅಲ್ಲಿನ ಸರ್ಕಾರ ಈ ಕ್ರಮ ಕೈಗೊಳ್ಳುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

Advertisement

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಆಹಾರ ಕಳ್ಳಸಾಗಣೆ ಗಂಭೀರ ಸಮಸ್ಯೆಯಾಗಿದೆ. ಹೀಗಾಗಿ ಗುಣಮಟ್ಟದ ಕೊರತೆ ಕಾಡುತ್ತದೆ, ಇದರಿಂದ ದೇಶದ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ಇಸ್ರೇಲ್‌  ಗಂಭೀರವಾಗಿ ಪರಿಗಣಿಸುತ್ತದೆ. ಈಚೆಗಿನ  ವರದಿಗಳ ಪ್ರಕಾರ ಅಕ್ರಮವಾದ ಆಮದಾದ  58 ಟನ್ ಕಲ್ಲಂಗಡಿಗಳನ್ನು ಇಸ್ರೇಲಿ ಅಧಿಕಾರಿಗಳು ವಶಪಡಿಸಿಕೊಂಡು  ನಾಶಪಡಿಸಿದ್ದಾರೆ.

ಜೋರ್ಡಾನ್ ಕಣಿವೆಯ ಗಡಿ ಮೂಲಕ ಅಕ್ರಮವಾಗಿ ಸಾಗಣೆಯಾದ ಹಣ್ಣನ್ನು ವಶಪಡಿಸಿಕೊಂಡಿದ್ದಾರೆ ಎಂದು ಜೆರುಸಲೆಮ್ ಪೋಸ್ಟ್ ವರದಿ ಮಾಡಿದೆ. ಜೋರ್ಡಾನ್ ಕಣಿವೆಯಲ್ಲಿ ಹಣ್ಣುಗಳನ್ನು ಬೆಳೆಯಲಾಗಿದೆ ಎಂದು ಹೇಳುವ ನಕಲಿ ಪ್ರಮಾಣಪತ್ರಗಳನ್ನು ತೋರಿಸಿ ಇಸ್ರೇಲ್‌ ಒಳಗೆ ಬರಲಾಗುತ್ತಿತ್ತು. ಆದರೆ ತಪಾಸಣೆ ವೇಳೆ ಅಕ್ರಮ ಪತ್ತೆಯಾಗಿದೆ ಹಾಗೂ ಎರಡು ಟ್ರಕ್‌ ವಶಕ್ಕೆ ಪಡೆಯಲಾಯಿತು ಎಂದು ಇಸ್ರೇಲ್‌ ಅಧಿಕಾರಿಗಳು ಹೇಳಿದ್ದಾರೆ.ಇಸ್ರೇಲ್‌ ಕಟ್ಟಿನಿಟ್ಟು ನಿಯಮ ಕಲ್ಲಂಗಡಿ ಹಣ್ಣು ಮಾತ್ರವಲ್ಲ ದೇಶಕ್ಕೆ ಪ್ರವೇಶಿಸುವ ಎಲ್ಲಾ ವಿದೇಶಿ ಹಣ್ಣುಗಳು ಮತ್ತು ತರಕಾರಿಗಳನ್ನು ಉನ್ನತ ಗುಣಮಟ್ಟದ ತಪಾಸಣೆ ನಡೆಸಲು ಕೃಷಿ ಸಚಿವಾಲಯ ಸೂಚಿಸುತ್ತದೆ. ಈ ವರ್ಷದ ಫೆಬ್ರವರಿಯಲ್ಲಿ, ಗಾಜಾದಲ್ಲಿ ಬೆಳೆದ 5 ಟನ್ ಟೊಮೆಟೊಗಳನ್ನು ಕಳ್ಳಸಾಗಣೆ ಮಾಡುವ ಪ್ರಯತ್ನವನ್ನು ಇಸ್ರೇಲಿ ಅಧಿಕಾರಿಗಳು ವಿಫಲಗೊಳಿಸಿದ್ದರು.

ಮಾರ್ಚ್ 2022 ರಲ್ಲಿ, ಇಸ್ರೇಲ್‌ನಲ್ಲಿ ಮಾರಾಟ ಮಾಡಲು ಉದ್ದೇಶಿಸಲಾದ 6,000 ಕ್ಕೂ ಹೆಚ್ಚು ಮೊಟ್ಟೆಗಳನ್ನು, 10 ಟನ್‌ಗಳಿಗಿಂತ ಹೆಚ್ಚು ಕಳ್ಳಸಾಗಣೆ ತರಕಾರಿಗಳನ್ನು ನಾಶಪಡಿಸಲಾಗಿತ್ತು.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror