MIRROR FOCUS

58 ಟನ್ ಕಳ್ಳಸಾಗಣೆಯ ಕಲ್ಲಂಗಡಿ‌ ಹಣ್ಣು ನಾಶಪಡಿಸಿದ ಇಸ್ರೇಲ್ | ಆಮದು ಗುಣಮಟ್ಟಕ್ಕೆ ಆದ್ಯತೆ ನೀಡುವ ಇಸ್ರೇಲ್ ಸರ್ಕಾರ |

Share
News Summary
ಕೃಷಿಯಲ್ಲಿ ಇಸ್ರೇಲ್‌ ನಂಬರ್‌ ವನ್‌ ದೇಶ. ಈ ದೇಶದಲ್ಲಿ ರೈತರ ಹಿತವನ್ನು ಸದಾ ಕಾಯುತ್ತದೆ. ಹೀಗಾಗಿ ಆಮದಾಗುವ ಎಲ್ಲಾ ಕೃಷಿ ವಸ್ತುಗಳೂ ಗುಣಮಟ್ಟ ಕಾಯ್ದುಕೊಳ್ಳಬೇಕು. ತನ್ನ ದೇಶದ ಕೃಷಿಕರ ರಕ್ಷಣೆಗೆ ಆದ್ಯತೆ ನೀಡುತ್ತದೆ. ಭಾರತವೂ ಇಂತಹದ್ದೇ ನಿಯಮಗಳನ್ನು ಏಕೆ ಮಾಡಬಾರದು ?

ಇಸ್ರೇಲ್ ಆಹಾರ ಆಮದುಗಳಿಗೆ ಕಟ್ಟುನಿಟ್ಟಾದ ಕ್ರಮಗಳನ್ನು ಅನುಸರಿಸುತ್ತಿದೆ. ಇದೀಗ ಕೆಲವು ದಿನಗಳ ಹಿಂದೆ ಕಳ್ಳಸಾಗಣೆಯ ಮೂಲಕ ಆಮದಾಗಿದ್ದ 58 ಟನ್  ಕಲ್ಲಂಗಡಿ ಹಣ್ಣನ್ನು ಇಸ್ರೇಲ್‌ ನಾಶಪಡಿಸಿದೆ. ಕೃಷಿ ಬೆಳವಣಿಗೆ ಹಾಗೂ ದೇಶದ ಕೃಷಿಕರ ಭದ್ರತೆ ಹಾಗೂ ದೇಶದ ಜನರ ಆರೋಗ್ಯ ಈ ಮೂರು ವಿಷಯಗಳ ಕಾರಣದಿಂದ ಅಲ್ಲಿನ ಸರ್ಕಾರ ಈ ಕ್ರಮ ಕೈಗೊಳ್ಳುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಆಹಾರ ಕಳ್ಳಸಾಗಣೆ ಗಂಭೀರ ಸಮಸ್ಯೆಯಾಗಿದೆ. ಹೀಗಾಗಿ ಗುಣಮಟ್ಟದ ಕೊರತೆ ಕಾಡುತ್ತದೆ, ಇದರಿಂದ ದೇಶದ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ಇಸ್ರೇಲ್‌  ಗಂಭೀರವಾಗಿ ಪರಿಗಣಿಸುತ್ತದೆ. ಈಚೆಗಿನ  ವರದಿಗಳ ಪ್ರಕಾರ ಅಕ್ರಮವಾದ ಆಮದಾದ  58 ಟನ್ ಕಲ್ಲಂಗಡಿಗಳನ್ನು ಇಸ್ರೇಲಿ ಅಧಿಕಾರಿಗಳು ವಶಪಡಿಸಿಕೊಂಡು  ನಾಶಪಡಿಸಿದ್ದಾರೆ.

ಜೋರ್ಡಾನ್ ಕಣಿವೆಯ ಗಡಿ ಮೂಲಕ ಅಕ್ರಮವಾಗಿ ಸಾಗಣೆಯಾದ ಹಣ್ಣನ್ನು ವಶಪಡಿಸಿಕೊಂಡಿದ್ದಾರೆ ಎಂದು ಜೆರುಸಲೆಮ್ ಪೋಸ್ಟ್ ವರದಿ ಮಾಡಿದೆ. ಜೋರ್ಡಾನ್ ಕಣಿವೆಯಲ್ಲಿ ಹಣ್ಣುಗಳನ್ನು ಬೆಳೆಯಲಾಗಿದೆ ಎಂದು ಹೇಳುವ ನಕಲಿ ಪ್ರಮಾಣಪತ್ರಗಳನ್ನು ತೋರಿಸಿ ಇಸ್ರೇಲ್‌ ಒಳಗೆ ಬರಲಾಗುತ್ತಿತ್ತು. ಆದರೆ ತಪಾಸಣೆ ವೇಳೆ ಅಕ್ರಮ ಪತ್ತೆಯಾಗಿದೆ ಹಾಗೂ ಎರಡು ಟ್ರಕ್‌ ವಶಕ್ಕೆ ಪಡೆಯಲಾಯಿತು ಎಂದು ಇಸ್ರೇಲ್‌ ಅಧಿಕಾರಿಗಳು ಹೇಳಿದ್ದಾರೆ.ಇಸ್ರೇಲ್‌ ಕಟ್ಟಿನಿಟ್ಟು ನಿಯಮ ಕಲ್ಲಂಗಡಿ ಹಣ್ಣು ಮಾತ್ರವಲ್ಲ ದೇಶಕ್ಕೆ ಪ್ರವೇಶಿಸುವ ಎಲ್ಲಾ ವಿದೇಶಿ ಹಣ್ಣುಗಳು ಮತ್ತು ತರಕಾರಿಗಳನ್ನು ಉನ್ನತ ಗುಣಮಟ್ಟದ ತಪಾಸಣೆ ನಡೆಸಲು ಕೃಷಿ ಸಚಿವಾಲಯ ಸೂಚಿಸುತ್ತದೆ. ಈ ವರ್ಷದ ಫೆಬ್ರವರಿಯಲ್ಲಿ, ಗಾಜಾದಲ್ಲಿ ಬೆಳೆದ 5 ಟನ್ ಟೊಮೆಟೊಗಳನ್ನು ಕಳ್ಳಸಾಗಣೆ ಮಾಡುವ ಪ್ರಯತ್ನವನ್ನು ಇಸ್ರೇಲಿ ಅಧಿಕಾರಿಗಳು ವಿಫಲಗೊಳಿಸಿದ್ದರು.

ಮಾರ್ಚ್ 2022 ರಲ್ಲಿ, ಇಸ್ರೇಲ್‌ನಲ್ಲಿ ಮಾರಾಟ ಮಾಡಲು ಉದ್ದೇಶಿಸಲಾದ 6,000 ಕ್ಕೂ ಹೆಚ್ಚು ಮೊಟ್ಟೆಗಳನ್ನು, 10 ಟನ್‌ಗಳಿಗಿಂತ ಹೆಚ್ಚು ಕಳ್ಳಸಾಗಣೆ ತರಕಾರಿಗಳನ್ನು ನಾಶಪಡಿಸಲಾಗಿತ್ತು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…

1 hour ago

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

24 hours ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

1 day ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

1 day ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

1 day ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

1 day ago