Advertisement
MIRROR FOCUS

ಇಸ್ರೇಲ್-ಪ್ಯಾಲೆಸ್ತೇನ್‌ ಸಂಘರ್ಷ | ದಾಳಿಗೆ 300 ಕ್ಕೂ ಹೆಚ್ಚು ಜನರು ಬಲಿ | ಆತಂಕದ ವಾತಾವರಣ |

Share

ಉಕ್ರೇನ್ ಹಾಗೂ ರಷ್ಯಾ ನಡುವಿನ ಕದನ ಒಂದೂವರೆ ವರ್ಷ ದಾಟಿದರೂ ಮುಗಿಯುವ ಸೂಚನೆ ಕಾಣಿಸುತ್ತಿಲ್ಲ. ಈ ನಡುವೆ ಇನ್ನೊಂದು ಸಂಘರ್ಷ ಆರಂಭವಾಗಿದೆ. ಇಸ್ರೇಲ್ ಹಾಗೂ ಪ್ಯಾಲೆಸ್ತೇನ್‌ ನಡುವೆ ಈಗ ಸಂಘರ್ಷ ಆರಂಭವಾಗಿದೆ.ಪ್ಯಾಲೆಸ್ತೇನ್‌  ಹಮಾಸ್‌ ಉಗ್ರಗಾಮಿಗಳು ಶನಿವಾರ ಗಾಜಾ ಪಟ್ಟಿಯಿಂದ ಇಸ್ರೇಲ್ ಕಡೆಗೆ 5,000 ಕ್ಕೂ ಹೆಚ್ಚು ರಾಕೆಟ್‌ ದಾಳಿ ಮಾಡಿದರು. ಇದಕ್ಕೆ ಇಸ್ರೇಲ್‌ ಪ್ರತೀಕಾರಕ್ಕೆ ಸಜ್ಜಾಗಿದೆ.ಉಗ್ರರ ದಾಳಿಗೆ 100ಕ್ಕೂ ಹೆಚ್ಚು ಇಸ್ರೇಲ್ ಪ್ರಜೆಗಳು ಸಾವು ಕಂಡಿದ್ದಾರೆ.740 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಅಲ್ಲದೇ ಇಸ್ರೇಲ್ ನಡೆಸಿದ ಪ್ರತಿ ದಾಳಿಯಲ್ಲಿ ಗಾಜಾ ಪಟ್ಟಿಯಲ್ಲಿನ ಕನಿಷ್ಠ 200 ಜನರ ಹತ್ಯೆಯಾಗಿದ್ದು, 1620 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ಇಸ್ರೇಲ್ ಗಡಿಗೆ ನುಗ್ಗಿ ಸೈನಿಕರನ್ನ ಹಮಾಸ್‌ ಉಗ್ರರು ಅಪಹರಿಸಿದ್ದಾರೆ. 35ಕ್ಕೂ ಹೆಚ್ಚು ಸೈನಿಕರನ್ನ ಹಮಾಸ್ ಉಗ್ರರು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಹಮಾಸ್ ಉಗ್ರರಿಂದ ಮಹಿಳಾ ಸೇನಾಧಿಕಾರಿ ಹತ್ಯೆ ಮಾಡಿದ್ದಲ್ಲದೆ, ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಹೀಗಾಗಿ ಇಸ್ರೇಲ್‌ ಸಿಟ್ಟಾಗಿದೆ.

ಸಂಘರ್ಷದಲ್ಲಿ ಸಾವಿನ ಸಂಖ್ಯೆ 300 ಕ್ಕಿಂತ ಹೆಚ್ಚುತ್ತಲೇ ಇರುವುದರಿಂದ ಇಸ್ರೇಲ್ ಗಾಜಾದ ಮೇಲೆ ಗಮನಾರ್ಹ ಪ್ರತೀಕಾರದ ದಾಳಿಗಳನ್ನು ಮಾಡಿದೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು “ನಾವು ಯುದ್ಧದಲ್ಲಿದ್ದೇವೆ ಮತ್ತು ನಾವು ಗೆಲ್ಲುತ್ತೇವೆ” ಎಂದು ಎದುರಿಸಲಿ ಸಜ್ಜಾಗಿದ್ದು   ಹಮಾಸ್ ಉಗ್ರಗಾಮಿಗಳು ಶನಿವಾರ ಬೆಳಿಗ್ಗೆ ಗಾಜಾ ಪಟ್ಟಿಯ ಸಮೀಪವಿರುವ ಇಸ್ರೇಲಿ ಪಟ್ಟಣಗಳಿಗೆ ಸೈನ್ಯ ಕಳುಹಿಸಿದ್ದಾರೆ.

ಇದೀಗ ಇಸ್ರೇಲ್ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. ಇಸ್ರೇಲ್‌ನ ಪ್ರತೀಕಾರದಲ್ಲಿ 232 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 1,610 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ರಾತ್ರಿಯ ನಂತರ, ವಾಯುದಾಳಿಗಳು ತೀವ್ರಗೊಂಡವು, ಸ್ಫೋಟಗಳಲ್ಲಿ ಹಲವಾರು ವಸತಿ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು, ಇದರಲ್ಲಿ 14-ಅಂತಸ್ತಿನ ಗೋಪುರವು ಡಜನ್ ಗಟ್ಟಲೆ ಅಪಾರ್ಟ್‌ಮೆಂಟ್‌ಗಳು ಮತ್ತು ಮಧ್ಯ ಗಾಜಾ ನಗರದಲ್ಲಿ ಹಮಾಸ್ ಕಚೇರಿಗಳನ್ನು ಹೊಂದಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

48 minutes ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

1 hour ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

2 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

2 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

2 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

19 hours ago