Advertisement
MIRROR FOCUS

ಇಸ್ರೇಲ್-ಪ್ಯಾಲೆಸ್ತೇನ್‌ ಸಂಘರ್ಷ | ದಾಳಿಗೆ 300 ಕ್ಕೂ ಹೆಚ್ಚು ಜನರು ಬಲಿ | ಆತಂಕದ ವಾತಾವರಣ |

Share

ಉಕ್ರೇನ್ ಹಾಗೂ ರಷ್ಯಾ ನಡುವಿನ ಕದನ ಒಂದೂವರೆ ವರ್ಷ ದಾಟಿದರೂ ಮುಗಿಯುವ ಸೂಚನೆ ಕಾಣಿಸುತ್ತಿಲ್ಲ. ಈ ನಡುವೆ ಇನ್ನೊಂದು ಸಂಘರ್ಷ ಆರಂಭವಾಗಿದೆ. ಇಸ್ರೇಲ್ ಹಾಗೂ ಪ್ಯಾಲೆಸ್ತೇನ್‌ ನಡುವೆ ಈಗ ಸಂಘರ್ಷ ಆರಂಭವಾಗಿದೆ.ಪ್ಯಾಲೆಸ್ತೇನ್‌  ಹಮಾಸ್‌ ಉಗ್ರಗಾಮಿಗಳು ಶನಿವಾರ ಗಾಜಾ ಪಟ್ಟಿಯಿಂದ ಇಸ್ರೇಲ್ ಕಡೆಗೆ 5,000 ಕ್ಕೂ ಹೆಚ್ಚು ರಾಕೆಟ್‌ ದಾಳಿ ಮಾಡಿದರು. ಇದಕ್ಕೆ ಇಸ್ರೇಲ್‌ ಪ್ರತೀಕಾರಕ್ಕೆ ಸಜ್ಜಾಗಿದೆ.ಉಗ್ರರ ದಾಳಿಗೆ 100ಕ್ಕೂ ಹೆಚ್ಚು ಇಸ್ರೇಲ್ ಪ್ರಜೆಗಳು ಸಾವು ಕಂಡಿದ್ದಾರೆ.740 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಅಲ್ಲದೇ ಇಸ್ರೇಲ್ ನಡೆಸಿದ ಪ್ರತಿ ದಾಳಿಯಲ್ಲಿ ಗಾಜಾ ಪಟ್ಟಿಯಲ್ಲಿನ ಕನಿಷ್ಠ 200 ಜನರ ಹತ್ಯೆಯಾಗಿದ್ದು, 1620 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ಇಸ್ರೇಲ್ ಗಡಿಗೆ ನುಗ್ಗಿ ಸೈನಿಕರನ್ನ ಹಮಾಸ್‌ ಉಗ್ರರು ಅಪಹರಿಸಿದ್ದಾರೆ. 35ಕ್ಕೂ ಹೆಚ್ಚು ಸೈನಿಕರನ್ನ ಹಮಾಸ್ ಉಗ್ರರು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಹಮಾಸ್ ಉಗ್ರರಿಂದ ಮಹಿಳಾ ಸೇನಾಧಿಕಾರಿ ಹತ್ಯೆ ಮಾಡಿದ್ದಲ್ಲದೆ, ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. ಹೀಗಾಗಿ ಇಸ್ರೇಲ್‌ ಸಿಟ್ಟಾಗಿದೆ.

ಸಂಘರ್ಷದಲ್ಲಿ ಸಾವಿನ ಸಂಖ್ಯೆ 300 ಕ್ಕಿಂತ ಹೆಚ್ಚುತ್ತಲೇ ಇರುವುದರಿಂದ ಇಸ್ರೇಲ್ ಗಾಜಾದ ಮೇಲೆ ಗಮನಾರ್ಹ ಪ್ರತೀಕಾರದ ದಾಳಿಗಳನ್ನು ಮಾಡಿದೆ. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು “ನಾವು ಯುದ್ಧದಲ್ಲಿದ್ದೇವೆ ಮತ್ತು ನಾವು ಗೆಲ್ಲುತ್ತೇವೆ” ಎಂದು ಎದುರಿಸಲಿ ಸಜ್ಜಾಗಿದ್ದು   ಹಮಾಸ್ ಉಗ್ರಗಾಮಿಗಳು ಶನಿವಾರ ಬೆಳಿಗ್ಗೆ ಗಾಜಾ ಪಟ್ಟಿಯ ಸಮೀಪವಿರುವ ಇಸ್ರೇಲಿ ಪಟ್ಟಣಗಳಿಗೆ ಸೈನ್ಯ ಕಳುಹಿಸಿದ್ದಾರೆ.

ಇದೀಗ ಇಸ್ರೇಲ್ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. ಇಸ್ರೇಲ್‌ನ ಪ್ರತೀಕಾರದಲ್ಲಿ 232 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 1,610 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ರಾತ್ರಿಯ ನಂತರ, ವಾಯುದಾಳಿಗಳು ತೀವ್ರಗೊಂಡವು, ಸ್ಫೋಟಗಳಲ್ಲಿ ಹಲವಾರು ವಸತಿ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು, ಇದರಲ್ಲಿ 14-ಅಂತಸ್ತಿನ ಗೋಪುರವು ಡಜನ್ ಗಟ್ಟಲೆ ಅಪಾರ್ಟ್‌ಮೆಂಟ್‌ಗಳು ಮತ್ತು ಮಧ್ಯ ಗಾಜಾ ನಗರದಲ್ಲಿ ಹಮಾಸ್ ಕಚೇರಿಗಳನ್ನು ಹೊಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

21 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago