#IsrealPalestineconflict | ಯುದ್ಧ ಮುಂದುವರೆಸುವ ಪ್ರತಿಜ್ಞೆ ಮಾಡಿದ ಇಸ್ರೇಲ್‌ ಪ್ರಧಾನಿ | ಹಮಾಸ್‍ ಮೇಲೆ ಬೃಹತ್ ದಾಳಿಗೆ ಮುಂದಾದ ಇಸ್ರೇಲ್ |

October 14, 2023
1:56 PM
ಇಸ್ರೇಲ್- ಪ್ಯಾಲೇಸ್ಟೈನ್ ನಡುವಿನ ಯುದ್ಧ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಇಸ್ರೇಲ್ ಸೇನೆಯು ಬೃಹತ್ ದಾಳಿಯ ಮುನ್ಸೂಚನೆಯೊಂದನ್ನು ನೀಡಿದೆ. ಗಾಝಾ ಗಡಿಯಲ್ಲಿ ನೆಲದ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ ನಡೆಸುತ್ತಿದ್ದು, ಮೂರು ಲಕ್ಷಕ್ಕೂ ಅಧಿಕ ಸೈನಿಕರ ನಿಯೋಜನೆ ಮಾಡಲಾಗಿದೆ.

ಇಸ್ರೇಲ್- ಪ್ಯಾಲೇಸ್ಟೈನ್  ನಡುವಿನ ಯುದ್ಧ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಇಸ್ರೇಲ್ ಸೇನೆಯು ಬೃಹತ್ ದಾಳಿಯ ಮುನ್ಸೂಚನೆಯೊಂದನ್ನು ನೀಡಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು #BenjaminNetanyahu ಅವರು, ಇಸ್ರೇಲ್ ಸೇನೆ ಸಿಂಹಗಳಂತೆ ಹೋರಾಡಲಿದೆ. ನಮ್ಮ ಶತ್ರುಗಳು ನಡೆಸಿದ ದೌರ್ಜನ್ಯವನ್ನು ನಾವು ಎಂದಿಗೂ ಮರೆಯುವುದಿಲ್ಲ. ನಾವು ಎಂದಿಗೂ ಹಮಾಸ್ ಕ್ಷಮಿಸುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಅನೇಕ ದಶಕಗಳಲ್ಲಿ ಯಹೂದಿ ಜನರಿಗೆ ಮಾಡಿದ ಈ ದೌರ್ಜನ್ಯಗಳನ್ನು ಜಗತ್ತಿಗೆ ಅಥವಾ ಯಾರಿಗಾದರೂ ಮರೆಯಲು ನಾವು ಎಂದಿಗೂ ಬಿಡುವುದಿಲ್ಲ. ನಾವು ನಮ್ಮ ಶತ್ರುಗಳನ್ನು ಅಭೂತಪೂರ್ವ ಬಲದಿಂದ ಹೊಡೆಯುತ್ತಿದ್ದೇವೆ ಎಂದು ಹೇಳುವ ಮೂಲಕ ದಾಳಿಯ ಇಸ್ರೇಲ್ ಪ್ರಧಾನಿಯವರು ದಾಳಿಯ ಮುನ್ಸೂಚನೆ ನೀಡಿದ್ದಾರೆ.

ಕಳೆದ ಎಂಟು ದಿನಗಳಲ್ಲಿ ಹಮಾಸ್‍ನ #Hamas 1,300 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಪ್ಯಾಲೇಸ್ಟೈನ್‍ನ ಗಾಝಾ ಮತ್ತು ವೆಸ್ಟ್ ಬ್ಯಾಂಕ್‍ನಲ್ಲಿ 1,900 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಗಾಝಾ ಗಡಿಯಲ್ಲಿ ನೆಲದ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ ನಡೆಸುತ್ತಿದ್ದು, ಮೂರು ಲಕ್ಷಕ್ಕೂ ಅಧಿಕ ಸೈನಿಕರ ನಿಯೋಜನೆ ಮಾಡಲಾಗಿದೆ. ಇಸ್ರೇಲ್ ಸೇನೆಯು ಉತ್ತರ ಗಾಜಾದಲ್ಲಿದಾಳಿಗೆ ತಯಾರಿ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಗಾಝಾದಿಂದ ದಕ್ಷಿಣಕ್ಕೆ ತೆರಳಲು ನಿವಾಸಿಗಳಿಗೆ ಸೂಚನೆ ನೀಡಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror