Advertisement
ಸುದ್ದಿಗಳು

‌ಇಸ್ರೇಲ್-ಹಮಾಸ್‌ ಸಂಘರ್ಷ | ಗಾಜಾದಲ್ಲಿರುವ ಭಾರತೀಯರು ಸ್ಥಳಾಂತರಕ್ಕೆ ಪ್ರಯತ್ನ |

Share

ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಹಮಾಸ್ ಹಿಡಿತದಲ್ಲಿರುವ ಗಾಜಾದಲ್ಲಿನ ಭಾರತೀಯರ ರಕ್ಷಣೆಗೆ ಸತತ ಪ್ರಯತ್ನ ಮುಂದುವರಿದಿದೆ.

Advertisement
Advertisement

ಇಸ್ರೇಲ್-ಹಮಾಸ್ ಸಂಘರ್ಷವು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈಗಾಗಲೇ ಎರಡೂ ಕಡೆಗಳಲ್ಲಿ ಕನಿಷ್ಠ 1,600 ಜೀವಗಳು ಬಲಿಯಾಗಿದೆ. ಇದರಲ್ಲಿ ಗಾಜಾ ಭಾಗದಲ್ಲಿ 788 ಮಂದಿ ಸಾವನ್ನಪ್ಪಿದ್ದಾರೆ ಮತ್ತು 4,100 ಮಂದಿ ಗಾಯಗೊಂಡಿದ್ದಾರೆ.

Advertisement

ಈ ನಡುವೆ ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ನಡುವೆ ಜೀವ ಭಯದಿಂದ, ಮಂಗಳವಾರ ತನ್ನ ಕುಟುಂಬದೊಂದಿಗೆ ಗಾಜಾದಲ್ಲಿ ವಾಸಿಸುತ್ತಿರುವ ಭಾರತೀಯ ಮಹಿಳೆಯು ಯುದ್ಧ ಪೀಡಿತ ಹಮಾಸ್ ಆಳ್ವಿಕೆಯಲ್ಲಿರುವ ಪ್ರದೇಶದಿಂದ ತಕ್ಷಣ ಸ್ಥಳಾಂತರಿಸುವಂತೆ ಕೋರಿದ್ದರು. ನಾವು ಇಲ್ಲಿ ಘೋರವಾದ ಯುದ್ಧವನ್ನು ಎದುರಿಸುತ್ತಿದ್ದೇವೆ. ಕೆಲವೇ ಸೆಕೆಂಡುಗಳಲ್ಲಿ ಬಾಂಬ್ ಸ್ಫೋಟದಲ್ಲಿ ಎಲ್ಲವೂ ನಾಶವಾಗುತ್ತಿದೆ ಎಂದು ಗಾಜಾದಲ್ಲಿ ನೆಲೆಸಿರುವ ಜಮ್ಮು ಮತ್ತು ಕಾಶ್ಮೀರದ ಭಾರತೀಯರಾದ ಲುಬ್ನಾ ನಜೀರ್ ಶಾಬೂ ಅವರು ದೂರವಾಣಿಯಲ್ಲಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದರು.

Advertisement

ಹಮಾಸ್ ದಾಳಿಯ ನಂತರ ಕನಿಷ್ಠ ಒಂಬತ್ತು ಅಮೆರಿಕನ್ನರು ಮೃತಪಟ್ಟಿದ್ದಾರೆ ಹಾಗೂ 25 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಪೆರುವಿನ ವಿದೇಶಾಂಗ ಸಚಿವಾಲಯ ಮಂಗಳವಾರ ಬೆಳಿಗ್ಗೆ ಪೆರುವಿಯನ್ ಪ್ರಜೆ  ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಘೋಷಿಸಿದೆ. ಬ್ರೆಜಿಲಿಯನ್ ಅಧಿಕಾರಿಗಳು ಬ್ರೆಜಿಲ್ ಪ್ರಜೆ ಮೃತಪಟ್ಟಿರುವ ಬಗ್ಗೆ ಹೇಳಿದೆ. ಹಮಾಸ್ ದಾಳಿ ಮಾಡಿದಾಗ ಅವರು ಶನಿವಾರ ನೋವಾ ಸಂಗೀತ ಉತ್ಸವದಲ್ಲಿ ಭಾಗವಹಿಸಿದ್ದರು ಎಂದು ಹೇಳಿದೆ. ಅರ್ಜೆಂಟೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಸಂಜೆಯ  ಪ್ರಕಾರ ಏಳು ಅರ್ಜೆಂಟೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು ಹದಿನೈದು ಮಂದಿ ಕಾಣೆಯಾಗಿದ್ದಾರೆ. ಕೊಲಂಬಿಯಾದ ವಿದೇಶಾಂಗ ಸಚಿವಾಲಯ ಸೋಮವಾರ ಸಂಜೆ ತನ್ನ ಇಬ್ಬರು ಪ್ರಜೆಗಳು ಕಾಣೆಯಾಗಿದೆ ಎಂದು ವರದಿ ಮಾಡಿದೆ.

ಇಸ್ರೇಲ್ ಗಾಜಾವನ್ನು ಹೊಡೆದುರುಳಿಸುತ್ತಿದ್ದಂತೆ, ಜನರು ಇದೀಗ ಸುರಕ್ಷತೆಗಾಗಿ ಹರಸಾಹಸ ಪಡುತ್ತಿದ್ದಾರೆ. ಆಯಾ ದೇಶದ ರಾಯಭಾರಿ ಕಚೇರಿ ಹಾಗೂ ವಿವಿಧ ಮಾಧ್ಯಮಗಳ ಮೂಲಕ ರಕ್ಷಣೆಗೆ ಕೇಳುತ್ತಿದ್ದಾರೆ. ಇಸ್ರೇಲಿ ಯುದ್ಧವಿಮಾನಗಳು ಮಂಗಳವಾರ ನೆರೆಹೊರೆಯಿಂದ ಗಾಜಾ ಪಟ್ಟಿಯನ್ನು ಹೊಡೆದವು, ಕಟ್ಟಡಗಳನ್ನು ನಾಶ ಮಾಡಿತು. ಇದೀಗ ಗಾಜಾಕ್ಕೆ ನೆರವು ಪಡೆಯಲು ಮಾನವೀಯ ಕಾರಿಡಾರ್‌ಗಳನ್ನು ರಚಿಸುವಂತೆ ಸಹಾಯ ಸಂಸ್ಥೆಗಳು ಮನವಿ ಮಾಡಿದವು. ಗಾಯಾಳುಗಳಿಂದ ತುಂಬಿರುವ ಆಸ್ಪತ್ರೆಗಳಿಗೆ ಸಲಕರಣೆಗಳ ಸರಬರಾಜಿಗೆ ಬಾಕಿ ಇದೆ.ಇಸ್ರೇಲ್ ಗಾಜಾಕ್ಕೆ ಆಹಾರ, ಇಂಧನ ಮತ್ತು ಔಷಧಿಗಳ ಎಲ್ಲಾ ಪ್ರವೇಶವನ್ನು ನಿಲ್ಲಿಸಿದೆ ಮತ್ತು ಗಡಿ ದಾಟುವಿಕೆಯ ಬಳಿ ವೈಮಾನಿಕ ದಾಳಿಯ ನಂತರ ಈಜಿಪ್ಟ್‌ನಿಂದ ಉಳಿದಿರುವ ಏಕೈಕ ಪ್ರವೇಶವನ್ನು ಮಂಗಳವಾರ ಸ್ಥಗಿತಗೊಳಿಸಿದೆ.

Advertisement

ಶನಿವಾರ ಹಮಾಸ್ ಉಗ್ರರು ಗಾಜಾ ಪಟ್ಟಿಯಿಂದ ಇಸ್ರೇಲ್ ಕಡೆಗೆ 5,000 ಕ್ಕೂ ಹೆಚ್ಚು ರಾಕೆಟ್‌ಗಳನ್ನು ಹಾರಿಸಿದರು, ಕನಿಷ್ಠ 1,700 ಜನರು ಇದರಿಂದಾಗಿ ಮೃತಪಟ್ಟರು.ನಂತರ ಭಾರೀ ಹೋರಾಟ ನಡೆಯಿತು. ಇಸ್ರೇಲ್ ಗಾಜಾವನ್ನು ಸಂಪೂರ್ಣ ವಶಪಡಿಸಿಕೊಳ್ಳುವುದಾಗಿ ಘೋಷಿಸಿದೆ. ಈ ಎಲ್ಲದರ ನಡುವೆ ಈಗ, ಹಮಾಸ್ ಗುಂಪು ಇಸ್ರೇಲ್‌ನೊಂದಿಗೆ ಕದನ ವಿರಾಮ ಮಾತುಕತೆಗೆ ಸಿದ್ಧವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾಗಿ ವರದಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

6 hours ago

ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ…

7 hours ago

ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ.…

8 hours ago

ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

15 hours ago

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ…

1 day ago