Advertisement
ರಾಷ್ಟ್ರೀಯ

2022 ರ ಮೊದಲ ಉಪಗ್ರಹ ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

Share

ಭಾರತೀಯ  ಬಾಹ್ಯಾಕಾಶ ಸಂಸ್ಥೆ ತನ್ನ 2022ರ  ಬಾಹ್ಯಾಕಾಶ ಕಾರ್ಯಾಚರಣೆಗಳನ್ನು ಸೋಮವಾರ ಆರಂಭಿಸಿದೆ. ಸೋಮವಾರ ಮುಂಜಾನೆ  5.59 ಗಂಟೆಗೆ ಭಾರತೀಯ ರಾಕೆಟ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್-ಸಿ52 (ಪಿಎಸ್‌ಎಲ್‌ವಿ-ಸಿ52) ಮೊದಲ ಉಡಾವಣಾ ಪ್ಯಾಡ್‌ನಿಂದ ಸಂಚರಿಸಿತು. ಭೂ ವೀಕ್ಷಣಾ ಉಪಗ್ರಹ-೦4 (ಇಒಎಸ್-೦4) ಸೇರಿದಂತೆ ಮೂರು ಉಪಗ್ರಹಗಳನ್ನು ಆರ್‌ಐಎಸ್‌ಎಟಿ-1ಎ ಎಂದು ಹೆಸರಿಸಲಾಗಿತ್ತು. 

ಯಶಸ್ವಿ ಕಾರ್ಯಾಚರಣೆಗಾಗಿ ತಂಡವನ್ನು ಅಭಿನಂದಿಸಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್. ಸೋಮನಾಥ್ ಅವರು ‘ಮಿಷನ್ ಯಶಸ್ವಿಯಾಗಿ ಸಾಧಿಸಲಾಗಿದೆ. ಪ್ರಾಥಮಿಕ ಉಪಗ್ರಹ  ಸಹ- ಪ್ರಯಾಣಿಕ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಯಿತು’ ಎಂದು ಹೇಳಿದರು.

ಸುಮಾರು 17 ನಿಮಿಷ 34 ಸೆಕೆಂಡ್‌ಗಳ ಪ್ರಯಣದ ಬಳಿಕ ಎಒಎಸ್-04, ಐಎನ್‌ಎಸ್‌ಪಿಆರ್‌ಇಸ್ಪಾಟ್-1 ಮತ್ತು ಐಎನ್‌ಎಸ್-2ಟಿಡಿ ಸ್ಪಾಟ್ ಉಪಗ್ರಹಗಳನ್ನು 529 ಕಿ,ಮೀ ಗಳಷ್ಟು ದೂರದ ಸನ್ ಸಿಂಕ್ರೋನಸ್ ಸೌರಕಕ್ಷೆಗೆ ಸಫಲವಾಗಿ ಸೇರ್ಪಡೆಗೊಳಿಸಲಾಯಿತು. ಬಳಿಕ ಇಒಎಸ್-04 ಎರಡು ಸೌರ ಸಾಧನಗಳು ಸ್ವಯಂಚಾಲಿತವಾಗಿ ನಿಯೋಜನೆಗೊಂಡವು. ಮುಂದಿನ ದಿನಗಳಲ್ಲಿ ಉಪಗ್ರಹದ ಅಂತಿಮ ಕಾರ್ಯಾಚರಣೆ ಬಳಿಕ ಅದು ದತ್ತಾಂಶ ಒದಗಿಸಲು ಆರಂಭಿಸುತ್ತದೆ ಎಂದು ಇಸ್ರೋ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

23 minutes ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

30 minutes ago

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

2 hours ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

7 hours ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

15 hours ago

ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ

ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…

15 hours ago