ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ರಾಕೆಟ್ ಬಳಕೆಗೆ ಇಸ್ರೋ ಒಪ್ಪಂದ | ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆ |

January 4, 2024
1:07 PM

ಭಾರತದ ಹೆಮ್ಮೆಯ ವಿಜ್ಞಾನ ಸಂಸ್ಥೆ ಇಸ್ರೋ ಚಂದ್ರಯಾನ-3(Chandrayana-3) ಕೈಗೊಂಡ ಮೇಲೆ ಒಂದಾದ ಮೇಲೊಂದರಂತೆ ತಮ್ಮ ಸಾಧನೆಯನ್ನು ಮಾಡುತ್ತಲೇ ಇದೆ. ಇದೀಗ ಭಾರತದ ಸಂಪರ್ಕ ಉಪಗ್ರಹ ಜಿಸ್ಯಾಟ್-20 ಉಪಗ್ರಹದ (GSAT-20 Satellite) ಉಡಾವಣೆಗಾಗಿ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ( Falcon-9) ರಾಕೆಟ್ ಬಳಕೆ ಮಾಡಿಕೊಳ್ಳಲು ಇಸ್ರೋ (ISRO) ಒಪ್ಪಂದ ಮಾಡಿಕೊಂಡಿದೆ.

ಸುಮಾರು 230ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಭೂ ಸ್ಥಿರ ಕಕ್ಷೆಗೆ ತಲುಪಿಸಿರುವ ಹೆಗ್ಗಳಿಕೆ ಫಾಲ್ಕನ್-9 ರಾಕೆಟ್‍ನದ್ದಾಗಿದೆ. ಸೂಕ್ತ ಸಮಯದಲ್ಲಿ ಬೇರೆ ರಾಕೆಟ್‍ಗಳು ಲಭ್ಯವಿಲ್ಲದೇ ಇರುವುದರಿಂದ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ರಾಕೆಟ್ ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.

Advertisement

ಇಸ್ರೋದಿಂದ ವಾಣಿಜ್ಯ ಉಡಾವಣೆಗಳನ್ನು ನಡೆಸುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಈ ಒಪ್ಪಂದ ಮಾಡಿಕೊಂಡಿದೆ. ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಏನಿದು ಜಿಸ್ಯಾಟ್-20 ಉಪಗ್ರಹ?: ಪ್ರಪಂಚದಾದ್ಯಂತ ಉಪಗ್ರಹ ಆಧಾರಿತ ಇಂಟರ್ನೆಟ್ ವ್ಯವಸ್ಥೆ ಜನಪ್ರಿಯವಾಗುತ್ತಿದೆ. ಈ ಹೊತ್ತಿನಲ್ಲಿ ಭಾರತದ ಎಲ್ಲಾ ಪ್ರದೇಶಗಳಿಗೂ ಇಂಟರ್‍ನೆಟ್ ಸೌಲಭ್ಯ ತಲುಪುವಂತೆ ಮಾಡಲು ಇಸ್ರೋ ತಯಾರಿಸಿದ ಸಂಪರ್ಕ ಉಪಗ್ರಹವೇ ಜಿಸ್ಯಾಟ್-20. ಇದು ಸೆಕೆಂಡಿಗೆ 48 ಜಿಬಿ ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಲಿದೆ.

Advertisement

India’s proud science organization ISRO continues to make achievements one after the other after undertaking Chandrayana-3. Now, ISRO has signed an agreement to use Falcon-9 rocket of SpaceX for the first time for the launch of India’s communication satellite GSAT-20 Satellite.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror