ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ರಾಕೆಟ್ ಬಳಕೆಗೆ ಇಸ್ರೋ ಒಪ್ಪಂದ | ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆ |

January 4, 2024
1:07 PM

ಭಾರತದ ಹೆಮ್ಮೆಯ ವಿಜ್ಞಾನ ಸಂಸ್ಥೆ ಇಸ್ರೋ ಚಂದ್ರಯಾನ-3(Chandrayana-3) ಕೈಗೊಂಡ ಮೇಲೆ ಒಂದಾದ ಮೇಲೊಂದರಂತೆ ತಮ್ಮ ಸಾಧನೆಯನ್ನು ಮಾಡುತ್ತಲೇ ಇದೆ. ಇದೀಗ ಭಾರತದ ಸಂಪರ್ಕ ಉಪಗ್ರಹ ಜಿಸ್ಯಾಟ್-20 ಉಪಗ್ರಹದ (GSAT-20 Satellite) ಉಡಾವಣೆಗಾಗಿ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ( Falcon-9) ರಾಕೆಟ್ ಬಳಕೆ ಮಾಡಿಕೊಳ್ಳಲು ಇಸ್ರೋ (ISRO) ಒಪ್ಪಂದ ಮಾಡಿಕೊಂಡಿದೆ.

ಸುಮಾರು 230ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಭೂ ಸ್ಥಿರ ಕಕ್ಷೆಗೆ ತಲುಪಿಸಿರುವ ಹೆಗ್ಗಳಿಕೆ ಫಾಲ್ಕನ್-9 ರಾಕೆಟ್‍ನದ್ದಾಗಿದೆ. ಸೂಕ್ತ ಸಮಯದಲ್ಲಿ ಬೇರೆ ರಾಕೆಟ್‍ಗಳು ಲಭ್ಯವಿಲ್ಲದೇ ಇರುವುದರಿಂದ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ರಾಕೆಟ್ ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.

ಇಸ್ರೋದಿಂದ ವಾಣಿಜ್ಯ ಉಡಾವಣೆಗಳನ್ನು ನಡೆಸುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಈ ಒಪ್ಪಂದ ಮಾಡಿಕೊಂಡಿದೆ. ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಏನಿದು ಜಿಸ್ಯಾಟ್-20 ಉಪಗ್ರಹ?: ಪ್ರಪಂಚದಾದ್ಯಂತ ಉಪಗ್ರಹ ಆಧಾರಿತ ಇಂಟರ್ನೆಟ್ ವ್ಯವಸ್ಥೆ ಜನಪ್ರಿಯವಾಗುತ್ತಿದೆ. ಈ ಹೊತ್ತಿನಲ್ಲಿ ಭಾರತದ ಎಲ್ಲಾ ಪ್ರದೇಶಗಳಿಗೂ ಇಂಟರ್‍ನೆಟ್ ಸೌಲಭ್ಯ ತಲುಪುವಂತೆ ಮಾಡಲು ಇಸ್ರೋ ತಯಾರಿಸಿದ ಸಂಪರ್ಕ ಉಪಗ್ರಹವೇ ಜಿಸ್ಯಾಟ್-20. ಇದು ಸೆಕೆಂಡಿಗೆ 48 ಜಿಬಿ ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಲಿದೆ.

India’s proud science organization ISRO continues to make achievements one after the other after undertaking Chandrayana-3. Now, ISRO has signed an agreement to use Falcon-9 rocket of SpaceX for the first time for the launch of India’s communication satellite GSAT-20 Satellite.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ
June 9, 2026
11:58 PM
by: ಮಿರರ್‌ ಡೆಸ್ಕ್
ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!
June 9, 2026
11:32 PM
by: ದ ರೂರಲ್ ಮಿರರ್.ಕಾಂ
ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ
June 9, 2026
11:18 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ
June 9, 2026
10:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror