MIRROR FOCUS

ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ರಾಕೆಟ್ ಬಳಕೆಗೆ ಇಸ್ರೋ ಒಪ್ಪಂದ | ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆ |

Share

ಭಾರತದ ಹೆಮ್ಮೆಯ ವಿಜ್ಞಾನ ಸಂಸ್ಥೆ ಇಸ್ರೋ ಚಂದ್ರಯಾನ-3(Chandrayana-3) ಕೈಗೊಂಡ ಮೇಲೆ ಒಂದಾದ ಮೇಲೊಂದರಂತೆ ತಮ್ಮ ಸಾಧನೆಯನ್ನು ಮಾಡುತ್ತಲೇ ಇದೆ. ಇದೀಗ ಭಾರತದ ಸಂಪರ್ಕ ಉಪಗ್ರಹ ಜಿಸ್ಯಾಟ್-20 ಉಪಗ್ರಹದ (GSAT-20 Satellite) ಉಡಾವಣೆಗಾಗಿ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ( Falcon-9) ರಾಕೆಟ್ ಬಳಕೆ ಮಾಡಿಕೊಳ್ಳಲು ಇಸ್ರೋ (ISRO) ಒಪ್ಪಂದ ಮಾಡಿಕೊಂಡಿದೆ.

Advertisement

ಸುಮಾರು 230ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಭೂ ಸ್ಥಿರ ಕಕ್ಷೆಗೆ ತಲುಪಿಸಿರುವ ಹೆಗ್ಗಳಿಕೆ ಫಾಲ್ಕನ್-9 ರಾಕೆಟ್‍ನದ್ದಾಗಿದೆ. ಸೂಕ್ತ ಸಮಯದಲ್ಲಿ ಬೇರೆ ರಾಕೆಟ್‍ಗಳು ಲಭ್ಯವಿಲ್ಲದೇ ಇರುವುದರಿಂದ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ರಾಕೆಟ್ ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.

ಇಸ್ರೋದಿಂದ ವಾಣಿಜ್ಯ ಉಡಾವಣೆಗಳನ್ನು ನಡೆಸುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಈ ಒಪ್ಪಂದ ಮಾಡಿಕೊಂಡಿದೆ. ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಏನಿದು ಜಿಸ್ಯಾಟ್-20 ಉಪಗ್ರಹ?: ಪ್ರಪಂಚದಾದ್ಯಂತ ಉಪಗ್ರಹ ಆಧಾರಿತ ಇಂಟರ್ನೆಟ್ ವ್ಯವಸ್ಥೆ ಜನಪ್ರಿಯವಾಗುತ್ತಿದೆ. ಈ ಹೊತ್ತಿನಲ್ಲಿ ಭಾರತದ ಎಲ್ಲಾ ಪ್ರದೇಶಗಳಿಗೂ ಇಂಟರ್‍ನೆಟ್ ಸೌಲಭ್ಯ ತಲುಪುವಂತೆ ಮಾಡಲು ಇಸ್ರೋ ತಯಾರಿಸಿದ ಸಂಪರ್ಕ ಉಪಗ್ರಹವೇ ಜಿಸ್ಯಾಟ್-20. ಇದು ಸೆಕೆಂಡಿಗೆ 48 ಜಿಬಿ ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಲಿದೆ.

India’s proud science organization ISRO continues to make achievements one after the other after undertaking Chandrayana-3. Now, ISRO has signed an agreement to use Falcon-9 rocket of SpaceX for the first time for the launch of India’s communication satellite GSAT-20 Satellite.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-04-2025 | ಕೆಲವೆಡೆ ಇಂದೂ ಮಳೆ ನಿರೀಕ್ಷೆ | ಎ.9 ರಿಂದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ |

ಇಂದು ಕೆಲವು ಕಡೆ ಮಳೆ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಎಪ್ರಿಲ್ 9ರಿಂದ…

42 minutes ago

ಜೇನು ಹುಳಗಳ ಸಂಖ್ಯೆ ಗಣನೀಯ ಇಳಿಕೆ | ಜೇನು ಕುಟುಂಬ ಉಳಿಸುವ ಅಭಿಯಾನ |

ವಿಶ್ವದ ಪ್ರಮುಖವಾದ 107 ಬೆಳೆಗಳಲ್ಲಿ ಸುಮಾರು 70% ಗೆ ಬೆಳೆಗಳು ಜೇನುನೊಣಗಳಂತಹ ಪರಿಸರ…

2 hours ago

ಹುಲಿಸಂರಕ್ಷಿತ ಪ್ರದೇಶಲ್ಲಿ ರಾತ್ರಿ ಸಂಚಾರ ನಿಷೇಧ | ನಿಷೇಧ ತೆರವುಗೊಳಿಸದಂತೆ ಒತ್ತಾಯಿಸಿ ಪ್ರತಿಭಟನೆ

ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ  ತೆರವುಗೊಳಿಸಬಾರದು ಎಂದು…

8 hours ago

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ನಿರ್ಧಾರ | ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ…

8 hours ago

ದೇಶದ ಜಿಡಿಪಿ 4.5ಲಕ್ಷ ಕೋಟಿ ರೂಪಾಯಿ ಏರಿಕೆ ಸಾಧ್ಯತೆ | ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ

ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5…

8 hours ago

ಬೆಂಗಳೂರಿನಲ್ಲಿ ಗುಡುಗು ಸಹಿತ ಹಗುರ ಮಳೆಯ ಸಾಧ್ಯತೆ | ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು…

8 hours ago