Advertisement
MIRROR FOCUS

ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ರಾಕೆಟ್ ಬಳಕೆಗೆ ಇಸ್ರೋ ಒಪ್ಪಂದ | ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆ |

Share

ಭಾರತದ ಹೆಮ್ಮೆಯ ವಿಜ್ಞಾನ ಸಂಸ್ಥೆ ಇಸ್ರೋ ಚಂದ್ರಯಾನ-3(Chandrayana-3) ಕೈಗೊಂಡ ಮೇಲೆ ಒಂದಾದ ಮೇಲೊಂದರಂತೆ ತಮ್ಮ ಸಾಧನೆಯನ್ನು ಮಾಡುತ್ತಲೇ ಇದೆ. ಇದೀಗ ಭಾರತದ ಸಂಪರ್ಕ ಉಪಗ್ರಹ ಜಿಸ್ಯಾಟ್-20 ಉಪಗ್ರಹದ (GSAT-20 Satellite) ಉಡಾವಣೆಗಾಗಿ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ( Falcon-9) ರಾಕೆಟ್ ಬಳಕೆ ಮಾಡಿಕೊಳ್ಳಲು ಇಸ್ರೋ (ISRO) ಒಪ್ಪಂದ ಮಾಡಿಕೊಂಡಿದೆ.

ಸುಮಾರು 230ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಭೂ ಸ್ಥಿರ ಕಕ್ಷೆಗೆ ತಲುಪಿಸಿರುವ ಹೆಗ್ಗಳಿಕೆ ಫಾಲ್ಕನ್-9 ರಾಕೆಟ್‍ನದ್ದಾಗಿದೆ. ಸೂಕ್ತ ಸಮಯದಲ್ಲಿ ಬೇರೆ ರಾಕೆಟ್‍ಗಳು ಲಭ್ಯವಿಲ್ಲದೇ ಇರುವುದರಿಂದ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ರಾಕೆಟ್ ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.

ಇಸ್ರೋದಿಂದ ವಾಣಿಜ್ಯ ಉಡಾವಣೆಗಳನ್ನು ನಡೆಸುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಈ ಒಪ್ಪಂದ ಮಾಡಿಕೊಂಡಿದೆ. ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಏನಿದು ಜಿಸ್ಯಾಟ್-20 ಉಪಗ್ರಹ?: ಪ್ರಪಂಚದಾದ್ಯಂತ ಉಪಗ್ರಹ ಆಧಾರಿತ ಇಂಟರ್ನೆಟ್ ವ್ಯವಸ್ಥೆ ಜನಪ್ರಿಯವಾಗುತ್ತಿದೆ. ಈ ಹೊತ್ತಿನಲ್ಲಿ ಭಾರತದ ಎಲ್ಲಾ ಪ್ರದೇಶಗಳಿಗೂ ಇಂಟರ್‍ನೆಟ್ ಸೌಲಭ್ಯ ತಲುಪುವಂತೆ ಮಾಡಲು ಇಸ್ರೋ ತಯಾರಿಸಿದ ಸಂಪರ್ಕ ಉಪಗ್ರಹವೇ ಜಿಸ್ಯಾಟ್-20. ಇದು ಸೆಕೆಂಡಿಗೆ 48 ಜಿಬಿ ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಲಿದೆ.

India’s proud science organization ISRO continues to make achievements one after the other after undertaking Chandrayana-3. Now, ISRO has signed an agreement to use Falcon-9 rocket of SpaceX for the first time for the launch of India’s communication satellite GSAT-20 Satellite.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

8 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

18 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

19 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

23 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago