MIRROR FOCUS

ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ರಾಕೆಟ್ ಬಳಕೆಗೆ ಇಸ್ರೋ ಒಪ್ಪಂದ | ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ ಹೆಮ್ಮೆಯ ವಿಜ್ಞಾನ ಸಂಸ್ಥೆ ಇಸ್ರೋ ಚಂದ್ರಯಾನ-3(Chandrayana-3) ಕೈಗೊಂಡ ಮೇಲೆ ಒಂದಾದ ಮೇಲೊಂದರಂತೆ ತಮ್ಮ ಸಾಧನೆಯನ್ನು ಮಾಡುತ್ತಲೇ ಇದೆ. ಇದೀಗ ಭಾರತದ ಸಂಪರ್ಕ ಉಪಗ್ರಹ ಜಿಸ್ಯಾಟ್-20 ಉಪಗ್ರಹದ (GSAT-20 Satellite) ಉಡಾವಣೆಗಾಗಿ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ( Falcon-9) ರಾಕೆಟ್ ಬಳಕೆ ಮಾಡಿಕೊಳ್ಳಲು ಇಸ್ರೋ (ISRO) ಒಪ್ಪಂದ ಮಾಡಿಕೊಂಡಿದೆ.

Advertisement
Advertisement

ಸುಮಾರು 230ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಭೂ ಸ್ಥಿರ ಕಕ್ಷೆಗೆ ತಲುಪಿಸಿರುವ ಹೆಗ್ಗಳಿಕೆ ಫಾಲ್ಕನ್-9 ರಾಕೆಟ್‍ನದ್ದಾಗಿದೆ. ಸೂಕ್ತ ಸಮಯದಲ್ಲಿ ಬೇರೆ ರಾಕೆಟ್‍ಗಳು ಲಭ್ಯವಿಲ್ಲದೇ ಇರುವುದರಿಂದ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ರಾಕೆಟ್ ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.

ಇಸ್ರೋದಿಂದ ವಾಣಿಜ್ಯ ಉಡಾವಣೆಗಳನ್ನು ನಡೆಸುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಈ ಒಪ್ಪಂದ ಮಾಡಿಕೊಂಡಿದೆ. ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಏನಿದು ಜಿಸ್ಯಾಟ್-20 ಉಪಗ್ರಹ?: ಪ್ರಪಂಚದಾದ್ಯಂತ ಉಪಗ್ರಹ ಆಧಾರಿತ ಇಂಟರ್ನೆಟ್ ವ್ಯವಸ್ಥೆ ಜನಪ್ರಿಯವಾಗುತ್ತಿದೆ. ಈ ಹೊತ್ತಿನಲ್ಲಿ ಭಾರತದ ಎಲ್ಲಾ ಪ್ರದೇಶಗಳಿಗೂ ಇಂಟರ್‍ನೆಟ್ ಸೌಲಭ್ಯ ತಲುಪುವಂತೆ ಮಾಡಲು ಇಸ್ರೋ ತಯಾರಿಸಿದ ಸಂಪರ್ಕ ಉಪಗ್ರಹವೇ ಜಿಸ್ಯಾಟ್-20. ಇದು ಸೆಕೆಂಡಿಗೆ 48 ಜಿಬಿ ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಲಿದೆ.

India’s proud science organization ISRO continues to make achievements one after the other after undertaking Chandrayana-3. Now, ISRO has signed an agreement to use Falcon-9 rocket of SpaceX for the first time for the launch of India’s communication satellite GSAT-20 Satellite.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

6 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

6 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

7 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

15 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

16 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

16 hours ago