Advertisement
MIRROR FOCUS

ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ರಾಕೆಟ್ ಬಳಕೆಗೆ ಇಸ್ರೋ ಒಪ್ಪಂದ | ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆ |

Share

ಭಾರತದ ಹೆಮ್ಮೆಯ ವಿಜ್ಞಾನ ಸಂಸ್ಥೆ ಇಸ್ರೋ ಚಂದ್ರಯಾನ-3(Chandrayana-3) ಕೈಗೊಂಡ ಮೇಲೆ ಒಂದಾದ ಮೇಲೊಂದರಂತೆ ತಮ್ಮ ಸಾಧನೆಯನ್ನು ಮಾಡುತ್ತಲೇ ಇದೆ. ಇದೀಗ ಭಾರತದ ಸಂಪರ್ಕ ಉಪಗ್ರಹ ಜಿಸ್ಯಾಟ್-20 ಉಪಗ್ರಹದ (GSAT-20 Satellite) ಉಡಾವಣೆಗಾಗಿ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ( Falcon-9) ರಾಕೆಟ್ ಬಳಕೆ ಮಾಡಿಕೊಳ್ಳಲು ಇಸ್ರೋ (ISRO) ಒಪ್ಪಂದ ಮಾಡಿಕೊಂಡಿದೆ.

ಸುಮಾರು 230ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಭೂ ಸ್ಥಿರ ಕಕ್ಷೆಗೆ ತಲುಪಿಸಿರುವ ಹೆಗ್ಗಳಿಕೆ ಫಾಲ್ಕನ್-9 ರಾಕೆಟ್‍ನದ್ದಾಗಿದೆ. ಸೂಕ್ತ ಸಮಯದಲ್ಲಿ ಬೇರೆ ರಾಕೆಟ್‍ಗಳು ಲಭ್ಯವಿಲ್ಲದೇ ಇರುವುದರಿಂದ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ರಾಕೆಟ್ ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.

ಇಸ್ರೋದಿಂದ ವಾಣಿಜ್ಯ ಉಡಾವಣೆಗಳನ್ನು ನಡೆಸುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಈ ಒಪ್ಪಂದ ಮಾಡಿಕೊಂಡಿದೆ. ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಏನಿದು ಜಿಸ್ಯಾಟ್-20 ಉಪಗ್ರಹ?: ಪ್ರಪಂಚದಾದ್ಯಂತ ಉಪಗ್ರಹ ಆಧಾರಿತ ಇಂಟರ್ನೆಟ್ ವ್ಯವಸ್ಥೆ ಜನಪ್ರಿಯವಾಗುತ್ತಿದೆ. ಈ ಹೊತ್ತಿನಲ್ಲಿ ಭಾರತದ ಎಲ್ಲಾ ಪ್ರದೇಶಗಳಿಗೂ ಇಂಟರ್‍ನೆಟ್ ಸೌಲಭ್ಯ ತಲುಪುವಂತೆ ಮಾಡಲು ಇಸ್ರೋ ತಯಾರಿಸಿದ ಸಂಪರ್ಕ ಉಪಗ್ರಹವೇ ಜಿಸ್ಯಾಟ್-20. ಇದು ಸೆಕೆಂಡಿಗೆ 48 ಜಿಬಿ ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಲಿದೆ.

India’s proud science organization ISRO continues to make achievements one after the other after undertaking Chandrayana-3. Now, ISRO has signed an agreement to use Falcon-9 rocket of SpaceX for the first time for the launch of India’s communication satellite GSAT-20 Satellite.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

8 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

17 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago