#AdityaL1 | ಇಸ್ರೋ ಮತ್ತೊಂದು ಸಾಧನೆಗೆ ಸಜ್ಜು | ಭಾರತದ ಮೊದಲ ಸೌರ ಮಿಷನ್ ಆದಿತ್ಯ ಎಲ್1 ಉಡಾವಣೆಗೆ ಕ್ಷಣಗಣನೆ

September 1, 2023
12:10 PM
ಆದಿತ್ಯ ಎಲ್​1 ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಲಿದೆ. ಇಸ್ರೋ ಪ್ರಕಾರ ಭಾರತದ ಮೊದಲ ಸೌರ ಮಿಷನ್ ಸೆಪ್ಟೆಂಬರ್ 2 ರಂದು ಬೆಳಗ್ಗೆ 11.50ಕ್ಕೆ ಉಡಾವಣೆಯಾಗಲಿದೆ

ಇಸ್ರೋ ಕೆಲ ದಿನಗಳ ಹಿಂದೆಯಷ್ಟೇ ಒಂದು ಮೈಲಿಗಲ್ಲನ್ನು ದಾಟಿತ್ತು. ಇದೀಗ ಚಂದ್ರಯಾನ ಯಶಸ್ಸು ಗಳಿಸಿರುವ ಭಾರತವು  ಮೂನ್ ಮಿಷನ್ ​ ಎನ್ನುವ ಮತ್ತೊಂದು ಯಶಸ್ಸಿನತ್ತ ಹೆಜ್ಜೆ ಹಾಕಿದೆ. ದೇಶದ ಮೊದಲ ಸೌರ ಮಿಷನ್ #SolarMission ಆದಿತ್ಯ ಎಲ್​1 ಅನ್ನು ಸೆಪ್ಟೆಂಬರ್ 2ರಂದು ಉಡಾವಣೆ ಮಾಡಲಾಗುತ್ತದೆ.

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಇತಿಹಾಸ ಸೃಷ್ಟಿಸುವ ಸನಿಹದಲ್ಲಿದೆ. ಆದಿತ್ಯ ಎಲ್​1 ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಲಿದೆ. ಇಸ್ರೋ ಪ್ರಕಾರ ಭಾರತದ ಮೊದಲ ಸೌರ ಮಿಷನ್ ಸೆಪ್ಟೆಂಬರ್ 2 ರಂದು ಬೆಳಗ್ಗೆ 11.50ಕ್ಕೆ ಉಡಾವಣೆಯಾಗಲಿದೆ, ಇಸ್ರೋ ಈ ಉಡಾವಣೆಯನ್ನು ನೇರ ಪ್ರಸಾರ ಮಾಡಲಿದೆ.

ಚಂದ್ರಯಾನ 3 ಮಿಷನ್​ನಂತೆ, ಆದಿತ್ಯ ಎಲ್​1 ಮಿಷನ್​ನ ನೇರ ಪ್ರಸಾರವನ್ನು ಆನ್​ಲೈನ್​ನಲ್ಲಿಯೂ ನೋಡಬಹುದು. ಇದರ ನೇರ ಪ್ರಸಾರವನ್ನು ಇಸ್ರೋದ ಅಧಿಕೃತ ಯೂಟ್ಯೂಬ್ ಚಾನೆಲ್, ವೆಬ್​ಸೈಟ್​ ಮತ್ತು ಫೇಸ್​ಬುಕ್ ಪುಟದಲ್ಲಿ ವೀಕ್ಷಿಸಬಹುದು. ಇದು ಭಾರತದ ಮೊದಲ ಸೌರ ಮಿಷನ್ ಆಗಿದ್ದು, ಈ ಕಾರ್ಯಾಚರಣೆಯಲ್ಲಿ ಸೂರ್ಯನ ಹೊರ ಪದರವನ್ನು ವೀಕ್ಷಿಸಲು ಬಾಹ್ಯಾಕಾಶ ನೌಕೆಯನ್ನು ಕಳುಹಿಸಲಾಗುತ್ತದೆ. ಬಾಹ್ಯಾಕಾಶ ನೌಕೆಯು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್​ ದೂರದಲ್ಲಿರುವ ಎಲ್​1 ಪಾಯಿಂಟ್​ನಲ್ಲಿ ಸೂರ್ಯನ ಮೇಲ್ವಿಚಾರಣೆ ಮಾಡುತ್ತದೆ.

ಆದಿತ್ಯ ಎಲ್​1 ಮಿಷನ್​ ಅನ್ನು PSLV-C57 ರಾಕೆಟ್ ಮೂಲಕ ಉಡಾವಣೆ ಮಾಡಲಾಗುವುದು. ಬಾಹ್ಯಾಕಾಶ ನೌಕೆಯು ತನ್ನೊಂದಿಗೆ 7 ಪೇಲೋಡ್‌ಗಳನ್ನು ಒಯ್ಯುತ್ತದೆ, ಇದು ದ್ಯುತಿಗೋಳ, ವರ್ಣಗೋಳ, ಮತ್ತು ಸೂರ್ಯನ ಹೊರಗಿನ ಪದರದ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ. ಆದಿತ್ಯ-ಎಲ್1 ಮಿಷನ್ ಸಂಪೂರ್ಣವಾಗಿ ಸ್ಥಳೀಯವಾಗಿದೆ. ಅನೇಕ ರಾಷ್ಟ್ರೀಯ ಸಂಸ್ಥೆಗಳು ಇದರ ತಯಾರಿಕೆಯಲ್ಲಿ ಭಾಗವಹಿಸಿವೆ. ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA), ವಿಸಿಬಲ್ ಎಮಿಷನ್ ಲೈನ್ ಕರೋನಾಗ್ರಾಫ್ (VELC) ಪೇಲೋಡ್ ಅನ್ನು ಅಭಿವೃದ್ಧಿಪಡಿಸಿದೆ, ಆದರೆ ಪುಣೆಯ ಖಗೋಳವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರದ ಅಂತರ-ವಿಶ್ವವಿದ್ಯಾಲಯವು ಸೌರ ನೇರಳಾತೀತ ಇಮೇಜಿಂಗ್ ಟೆಲಿಸ್ಕೋಪ್ (SUIT) ಪೇಲೋಡ್ ಅನ್ನು ಅಭಿವೃದ್ಧಿಪಡಿಸಿದೆ.

Source :Twitter – Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror