Advertisement
MIRROR FOCUS

#AdityaL1 | ಇಸ್ರೋ ಮತ್ತೊಂದು ಸಾಧನೆಗೆ ಸಜ್ಜು | ಭಾರತದ ಮೊದಲ ಸೌರ ಮಿಷನ್ ಆದಿತ್ಯ ಎಲ್1 ಉಡಾವಣೆಗೆ ಕ್ಷಣಗಣನೆ

Share

ಇಸ್ರೋ ಕೆಲ ದಿನಗಳ ಹಿಂದೆಯಷ್ಟೇ ಒಂದು ಮೈಲಿಗಲ್ಲನ್ನು ದಾಟಿತ್ತು. ಇದೀಗ ಚಂದ್ರಯಾನ ಯಶಸ್ಸು ಗಳಿಸಿರುವ ಭಾರತವು  ಮೂನ್ ಮಿಷನ್ ​ ಎನ್ನುವ ಮತ್ತೊಂದು ಯಶಸ್ಸಿನತ್ತ ಹೆಜ್ಜೆ ಹಾಕಿದೆ. ದೇಶದ ಮೊದಲ ಸೌರ ಮಿಷನ್ #SolarMission ಆದಿತ್ಯ ಎಲ್​1 ಅನ್ನು ಸೆಪ್ಟೆಂಬರ್ 2ರಂದು ಉಡಾವಣೆ ಮಾಡಲಾಗುತ್ತದೆ.

Advertisement
Advertisement

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಇತಿಹಾಸ ಸೃಷ್ಟಿಸುವ ಸನಿಹದಲ್ಲಿದೆ. ಆದಿತ್ಯ ಎಲ್​1 ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಲಿದೆ. ಇಸ್ರೋ ಪ್ರಕಾರ ಭಾರತದ ಮೊದಲ ಸೌರ ಮಿಷನ್ ಸೆಪ್ಟೆಂಬರ್ 2 ರಂದು ಬೆಳಗ್ಗೆ 11.50ಕ್ಕೆ ಉಡಾವಣೆಯಾಗಲಿದೆ, ಇಸ್ರೋ ಈ ಉಡಾವಣೆಯನ್ನು ನೇರ ಪ್ರಸಾರ ಮಾಡಲಿದೆ.

ಚಂದ್ರಯಾನ 3 ಮಿಷನ್​ನಂತೆ, ಆದಿತ್ಯ ಎಲ್​1 ಮಿಷನ್​ನ ನೇರ ಪ್ರಸಾರವನ್ನು ಆನ್​ಲೈನ್​ನಲ್ಲಿಯೂ ನೋಡಬಹುದು. ಇದರ ನೇರ ಪ್ರಸಾರವನ್ನು ಇಸ್ರೋದ ಅಧಿಕೃತ ಯೂಟ್ಯೂಬ್ ಚಾನೆಲ್, ವೆಬ್​ಸೈಟ್​ ಮತ್ತು ಫೇಸ್​ಬುಕ್ ಪುಟದಲ್ಲಿ ವೀಕ್ಷಿಸಬಹುದು. ಇದು ಭಾರತದ ಮೊದಲ ಸೌರ ಮಿಷನ್ ಆಗಿದ್ದು, ಈ ಕಾರ್ಯಾಚರಣೆಯಲ್ಲಿ ಸೂರ್ಯನ ಹೊರ ಪದರವನ್ನು ವೀಕ್ಷಿಸಲು ಬಾಹ್ಯಾಕಾಶ ನೌಕೆಯನ್ನು ಕಳುಹಿಸಲಾಗುತ್ತದೆ. ಬಾಹ್ಯಾಕಾಶ ನೌಕೆಯು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್​ ದೂರದಲ್ಲಿರುವ ಎಲ್​1 ಪಾಯಿಂಟ್​ನಲ್ಲಿ ಸೂರ್ಯನ ಮೇಲ್ವಿಚಾರಣೆ ಮಾಡುತ್ತದೆ.

ಆದಿತ್ಯ ಎಲ್​1 ಮಿಷನ್​ ಅನ್ನು PSLV-C57 ರಾಕೆಟ್ ಮೂಲಕ ಉಡಾವಣೆ ಮಾಡಲಾಗುವುದು. ಬಾಹ್ಯಾಕಾಶ ನೌಕೆಯು ತನ್ನೊಂದಿಗೆ 7 ಪೇಲೋಡ್‌ಗಳನ್ನು ಒಯ್ಯುತ್ತದೆ, ಇದು ದ್ಯುತಿಗೋಳ, ವರ್ಣಗೋಳ, ಮತ್ತು ಸೂರ್ಯನ ಹೊರಗಿನ ಪದರದ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ. ಆದಿತ್ಯ-ಎಲ್1 ಮಿಷನ್ ಸಂಪೂರ್ಣವಾಗಿ ಸ್ಥಳೀಯವಾಗಿದೆ. ಅನೇಕ ರಾಷ್ಟ್ರೀಯ ಸಂಸ್ಥೆಗಳು ಇದರ ತಯಾರಿಕೆಯಲ್ಲಿ ಭಾಗವಹಿಸಿವೆ. ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA), ವಿಸಿಬಲ್ ಎಮಿಷನ್ ಲೈನ್ ಕರೋನಾಗ್ರಾಫ್ (VELC) ಪೇಲೋಡ್ ಅನ್ನು ಅಭಿವೃದ್ಧಿಪಡಿಸಿದೆ, ಆದರೆ ಪುಣೆಯ ಖಗೋಳವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರದ ಅಂತರ-ವಿಶ್ವವಿದ್ಯಾಲಯವು ಸೌರ ನೇರಳಾತೀತ ಇಮೇಜಿಂಗ್ ಟೆಲಿಸ್ಕೋಪ್ (SUIT) ಪೇಲೋಡ್ ಅನ್ನು ಅಭಿವೃದ್ಧಿಪಡಿಸಿದೆ.

Source :Twitter – Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

55 minutes ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

1 hour ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

11 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

11 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

11 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

12 hours ago