Advertisement
ವಿಜ್ಞಾನ

#Chandrayaan3| ಚಂದ್ರನೂರಿಗೆ ಸಾಗಿದ್ದ ಚಂದ್ರಯಾನ-3 ಏನು ಮಾಡುತ್ತಿದೆ..? | ಬಾಹ್ಯಾಕಾಶ ನೌಕೆ ಬಗ್ಗೆ ಮಾಹಿತಿ ನೀಡಿದ ಇಸ್ರೋ

Share

ಭಾರತೀಯರ ಮಹತ್ವಾಕಾಂಶೆಯ ಯೋಜನೆ, ವಿಶ್ವದ ಕುತೂಹಲಕ್ಕೆ ಕಾರಣವಾಗಿದ್ದ  ಚಂದ್ರಯಾನ – #Chandrayaan ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಚಂದ್ರಲೋಕವನ್ನು ಸೇರಿದ ಬಾಹಾಕಾಶ್ಯ ನೌಕೆ ಈಗ ಹೇಗಿದೆ..? ಎಲ್ಲಿಗೆವರೆಗೆ ತಲುಪಿದೆ.? ಯಾವ ಸ್ಟೇಟಸ್ನಲ್ಲಿದೆ ಅನ್ನೋದನ್ನು ಈಗ ಇಸ್ರೋ#ISRO ವಿಜ್ಞಾನಿಗಳು ತಿಳಿಸಿದ್ದಾರೆ. ಭೂಮಿಯಿಂದ ಚಂದ್ರನತ್ತ ಹಾರಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಉತ್ತಮವಾಗಿದೆ ಎಂದು ಇಸ್ರೋ ಹೇಳಿದೆ.

ಈ ಸಂಬಂಧ ಶನಿವಾರ ಟ್ವೀಟ್ ಮಾಡಿರುವ ಇಸ್ರೋ, ಶುಕ್ರವಾರ ಚಂದ್ರನೆಡೆ ತೆರಳಿರುವ ಬಾಹ್ಯಾಕಾಶ ನೌಕೆಯು ಸುರಕ್ಷಿತವಾಗಿದೆ. ಬೆಂಗಳೂರಿನಲ್ಲಿರುವ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‍ವರ್ಕ್#ISTRACನಲ್ಲಿ ಚಂದ್ರಯಾನ-3 ಗಗನನೌಕೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ. ಬಾಹ್ಯಾಕಾಶ ನೌಕೆಯು ಈಗ 41,762 ಕಿ.ಮೀ x 173 ಕಿ.ಮೀ ಕಕ್ಷೆಯಲ್ಲಿದೆ ಎಂದು ಮಾಹಿತಿ ನೀಡಿದೆ.
ಶುಕ್ರವಾರ ಆಂಧ್ರಪ್ರದೇಶದ #Andhrapradesh ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಶುಭಶುಕ್ರವಾರದಂದು ಜಿಎಸ್‍ಎಲ್‍ವಿ ಮಾರ್ಕ್ 3 ಹೆವಿ ಲಿಫ್ಟ್ ಉಡಾವಣಾ ವಾಹನದಿಂದ ಉಪಗ್ರಹವು ಮಧ್ಯಾಹ್ನ 2.35ಕ್ಕೆ ನಭಕ್ಕೆ ಚಿಮ್ಮಿತ್ತು.
ಗಗನನೌಕೆಯು ಭೂಮಿಯಿಂದ ಚಂದ್ರನೆಡೆಗೆ ತಲುಪಲು ಸುಮಾರು 40 ದಿನ ತೆಗೆದುಕೊಳ್ಳುತ್ತದೆ. ಆಗಸ್ಟ್ 23 ರಂದು ಚಂದ್ರನಲ್ಲಿ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ. ಲ್ಯಾಂಡಿಂಗ್ ನಂತರ ಇದು ಒಂದು ಚಂದ್ರನ ದಿನಕ್ಕೆ ಕಾರ್ಯನಿರ್ವಹಿಸುತ್ತದೆ. ಅಂದರೆ ಸರಿಸುಮಾರು 14 ಭೂಮಿಯ ದಿನಗಳು. ಚಂದ್ರನ ಮೇಲಿನ ಒಂದು ದಿನವು ಭೂಮಿಯ ಮೇಲಿನ 14 ದಿನಗಳಿಗೆ ಸಮಾನವಾಗಿರುತ್ತದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago