ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋದ ಸಾಧನೆಗಳನ್ನು ಪರಿಚಯಿಸುವ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನ.7 ರಿಂದ 9 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಲಿದ್ದು, ನ. 9 ರಂದು ಸುಳ್ಯಕ್ಕೆ ಆಗಮಿಸಿ ಸುಳ್ಯದ ಜೂನಿಯರ್ ಕಾಲೇಜಿನ (ಸರಕಾರಿ ಪದವಿ ಪೂರ್ವ ಕಾಲೇಜು) ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವೀಕ್ಷಣೆಗೆ ಲಭ್ಯವಿದೆ.
ದಕ್ಷಿಣ ಕನ್ನಡ ವಿಜ್ಞಾನ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ಬಾಹ್ಯಾಕಾಶ ವಿಷಯಗಳಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇದರಲ್ಲಿ ಚಂದ್ರಯಾನ-1, ಮಂಗಳಯಾನ, ರಾಕೆಟ್ ಉಡ್ಡಯನ ಕೇಂದ್ರ, ಸಂವಹನ ಉಪಗ್ರಹ, ಆರ್ಯಭಟ, ಭಾಸ್ಕರ ಮೊದಲಾದ ಈ ಹಿಂದಿನ ಉಪಗ್ರಹಗಳ ಮಾದರಿಗಳು, ಅದೇ ರೀತಿ ಮುಂದಿನ ಬಾಹ್ಯಾಕಾಶ ಯೋಜನೆ ಗಗನ್ ಯಾನ್ 2024ರ ಮಾದರಿಗಳು ಹಾಗೂ ಇನ್ನಿತರ ಬಾಹ್ಯಾಕಾಶ ಯೋಜನೆಗಳ ಮಾದರಿಗಳು ವೀಕ್ಷಣೆಗೆ ಲಭ್ಯವಿದ್ದು ತಾಲೂಕಿನ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಡಾ. ಅನುರಾಧಾ ಕುರುಂಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…