ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋದ ಸಾಧನೆಗಳನ್ನು ಪರಿಚಯಿಸುವ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನ.7 ರಿಂದ 9 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಲಿದ್ದು, ನ. 9 ರಂದು ಸುಳ್ಯಕ್ಕೆ ಆಗಮಿಸಿ ಸುಳ್ಯದ ಜೂನಿಯರ್ ಕಾಲೇಜಿನ (ಸರಕಾರಿ ಪದವಿ ಪೂರ್ವ ಕಾಲೇಜು) ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವೀಕ್ಷಣೆಗೆ ಲಭ್ಯವಿದೆ.
ದಕ್ಷಿಣ ಕನ್ನಡ ವಿಜ್ಞಾನ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ಬಾಹ್ಯಾಕಾಶ ವಿಷಯಗಳಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇದರಲ್ಲಿ ಚಂದ್ರಯಾನ-1, ಮಂಗಳಯಾನ, ರಾಕೆಟ್ ಉಡ್ಡಯನ ಕೇಂದ್ರ, ಸಂವಹನ ಉಪಗ್ರಹ, ಆರ್ಯಭಟ, ಭಾಸ್ಕರ ಮೊದಲಾದ ಈ ಹಿಂದಿನ ಉಪಗ್ರಹಗಳ ಮಾದರಿಗಳು, ಅದೇ ರೀತಿ ಮುಂದಿನ ಬಾಹ್ಯಾಕಾಶ ಯೋಜನೆ ಗಗನ್ ಯಾನ್ 2024ರ ಮಾದರಿಗಳು ಹಾಗೂ ಇನ್ನಿತರ ಬಾಹ್ಯಾಕಾಶ ಯೋಜನೆಗಳ ಮಾದರಿಗಳು ವೀಕ್ಷಣೆಗೆ ಲಭ್ಯವಿದ್ದು ತಾಲೂಕಿನ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಡಾ. ಅನುರಾಧಾ ಕುರುಂಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…