Advertisement
MIRROR FOCUS

ಉಪಗ್ರಹ ಉಡಾವಣೆ ಜೊತೆಗೆ ಉಪಕರಣಗಳನ್ನು ಹಿಂತಿರುಗಿ ತರುವ ಕಾರ್ಯದಲ್ಲೂ ಇಸ್ರೋ ಯಶಸ್ವಿ | ಚಂದ್ರನ ಕಕ್ಷೆಯಿಂದ ಭೂಮಿ ಕಕ್ಷೆಗೆ ಮತ್ತೆ ಚಂದ್ರಯಾನ-3 ಪ್ರೊಪಲ್ಷನ್‌ ಮಾಡ್ಯೂಲ್‌ |

Share

ನಮ್ಮ ಹೆಮ್ಮೆಯ ಇಸ್ರೋ(ISRO) ಯಾವುದರಲ್ಲೂ ಕಡಿಮೆ ಇಲ್ಲ. ದಿನದಿಂದ ದಿನಕ್ಕೆ ತನ್ನ ಸಾಧನೆಯನ್ನು ಹೆಚ್ಚಿಸುತ್ತಾ ಸಾಗುತ್ತಿದೆ. ಹಾಗೆ ತನ್ನ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದೆ. ಚಂದ್ರಯಾನ-3 (Chandrayaan-3) ಬಾಹ್ಯಾಕಾಶ ನೌಕೆಯ ಪ್ರೊಪಲ್ಷನ್‌ ಮಾಡ್ಯೂಲ್‌ (Propulsion Module) ಅನ್ನು ಚಂದ್ರನ ಕಕ್ಷೆಯಿಂದ(Moon orbit) ಭೂಮಿಯ ಕಕ್ಷೆಗೆ(Earth Orbit) ಇಸ್ರೋ ಯಶಸ್ವಿಯಾಗಿ ಮರಳಿ ತರಲಿದೆ. ಚಂದ್ರನ ಕಾರ್ಯಾಚರಣೆಯ ಉದ್ದೇಶ ಪೂರೈಸಿದ ನಂತರ ಪ್ರೊಪಲ್ಷನ್‌ ಮಾಡ್ಯೂಲ್‌ ಅನ್ನು ಚಂದ್ರನಿಂದ(Moon) ಭೂಮಿಗೆ ಕಕ್ಷೆ ಬದಲಿಸಲಾಗಿದೆ. ಚಂದ್ರನ ಮೇಲೆ ಉಪಗ್ರಹ ಉಡಾವಣೆ(Satellite) ಮಾಡುವುದು ಮಾತ್ರವಲ್ಲ, ಅದರ ಉಪಕರಣಗಳನ್ನು ಹಿಂತಿರುಗಿ ತರುವ ಕಾರ್ಯದಲ್ಲೂ ಇಸ್ರೋ ತನ್ನ ಸಾಮರ್ಥ್ಯ ಪ್ರದರ್ಶಿಸಿದೆ.

Advertisement
Advertisement

ವಿಕ್ರಮ್ ಲ್ಯಾಂಡರ್‌ನಲ್ಲಿನ ಹಾಪ್ ಪ್ರಯೋಗದಂತೆ ಮತ್ತೊಂದು ವಿಶಿಷ್ಟ ಪ್ರಯೋಗದಲ್ಲಿ ಚಂದ್ರಯಾನ-3 ರ ಪ್ರೊಪಲ್ಷನ್ ಮಾಡ್ಯೂಲ್ (PM) ಅನ್ನು ಚಂದ್ರನ ಸುತ್ತಲಿನ ಕಕ್ಷೆಯಿಂದ ಭೂಮಿಯ ಸುತ್ತಲಿನ ಕಕ್ಷೆಗೆ ಸ್ಥಳಾಂತರಿಸಲಾಯಿತು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಜು.14 ರಂದು ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿತ್ತು. ಆ.23 ರಂದು ವಿಕ್ರಮ್‌ ಲ್ಯಾಂಡರ್‌ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿದು ಐತಿಹಾಸಿಕ ಸಾಧನೆ ಮಾಡಿತು. ಪ್ರಗ್ಯಾನ್‌ ರೋವರ್‌ ಯಶಸ್ವಿಯಾಗಿ ಚಂದ್ರನ ಮೇಲ್ಮೈಯನ್ನು ಸಮೀಕ್ಷೆ ನಡೆಯಿತು. ಲ್ಯಾಂಡರ್‌ ಮತ್ತು ರೋವರ್‌ 1 ಚಂದ್ರನ ದಿನ (ಭೂಮಿಯ 14 ದಿನಗಳಿಗೆ ಸಮ) ಚಂದ್ರನ ಮೇಲೆ ಕಾರ್ಯಾಚರಣೆ ನಡೆಸಿವೆ. ಆ ಮೂಲಕ ಚಂದ್ರಯಾನ-3 ಮಿಷನ್‌ ಉದ್ದೇಶಗಳನ್ನು ಸಂಪೂರ್ಣವಾಗಿ ಪೂರೈಸಿವೆ.

Advertisement
ISRO will successfully bring back Chandrayaan-3 spacecraft propulsion module from Moon orbit to Earth orbit. After completing the mission of the lunar mission, the propulsion module was re-orbited from the Moon to the Earth. ISRO has demonstrated its capability not only in launching satellites on the moon but also in bringing its instruments back.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…

5 hours ago

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

5 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

8 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

1 day ago