ISROದಿಂದ ಶೀಘ್ರದಲ್ಲೇ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ | 2040ಕ್ಕೆ ಚಂದ್ರನ ಮೇಲೆ ಮಾನವನ ಪಾದಾರ್ಪಣೆ ಯೋಜನೆ |

August 19, 2024
7:31 PM

ISRO ಒಂದಲ್ಲ ಒಂದು ಸಾಧನೆಗಳನ್ನು ಮಾಡುತ್ತಾ ದೇಶಕ್ಕೆ ಕೀರ್ತಿ ತರುತ್ತಿದೆ. ಇದೀಗ  2035ರ ವೇಳೆಗೆ ಭಾರತವು(India) ತನ್ನದೇಯಾದ ಸ್ವಂತ ಬಾಹ್ಯಾಕಾಶ ನಿಲ್ದಾಣವನ್ನು(Space station) ಸ್ಥಾಪಿಸುವ ನಿರೀಕ್ಷೆಯಿದೆ ಮತ್ತು ಇದಕ್ಕೆ ಭಾರತೀಯ ಅಂತರಿಕ್ಷ ನಿಲ್ದಾಣ (BAS​) ಎಂದು ಹೆಸರಿಸಲಾಗುವುದು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

2024-25ರ ಕೇಂದ್ರ ಬಜೆಟ್​ನಲ್ಲಿ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಡಿದ ಘೋಷಣೆಗಳು ಭವಿಷ್ಯದ ದೃಷ್ಟಿಕೋನವನ್ನು ಹೊಂದಿವೆ ಎಂದು ಸಚಿವರು ಅಭಿಪ್ರಾಯ ಪಟ್ಟರು. 2025 ರ ದ್ವಿತೀಯಾರ್ಧದ ವೇಳೆಗೆ ಭಾರತೀಯನೋರ್ವನನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು 2040 ರ ವೇಳೆಗೆ ಮೊದಲ ಬಾರಿಗೆ ಭಾರತೀಯನನ್ನು ಚಂದ್ರನ ಮೇಲೆ ಇಳಿಸುವ ಮಹತ್ವಾಕಾಂಕ್ಷೆಯ ಗುರಿಗಳನ್ನು ಹಾಕಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು. “2023 ರಲ್ಲಿ ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ 1,000 ಕೋಟಿ ರೂ. ಹೂಡಿಕೆ ಬಂದಿದೆ. ಮುಂದಿನ 10 ವರ್ಷಗಳಲ್ಲಿ ಬಾಹ್ಯಾಕಾಶ ಆರ್ಥಿಕತೆಯು ಐದು ಪಟ್ಟು ಅಥವಾ ಸುಮಾರು 44 ಬಿಲಿಯನ್ ಡಾಲರ್​ಗೆ ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಇದು ಭಾರತದಿಂದ ಪ್ರತಿಭಾ ಪಲಾಯನವನ್ನು ಅಂತ್ಯಗೊಳಿಸಲಿದೆ” ಎಂದು ಸಚಿವ ಸಿಂಗ್ ತಿಳಿಸಿದರು.

“ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ‘ಗಗನಯಾನ್​’ ಕೋವಿಡ್​ನಿಂದಾಗಿ ವಿಳಂಬವಾಗಿದ್ದು, ಇದು ಮುಂದಿನ ವರ್ಷ ನಡೆಯಲಿದೆ ಹಾಗೂ ಇದಕ್ಕಾಗಿ ಪ್ರಾಯೋಗಿಕ ಹಾರಾಟ ಯಾನಗಳನ್ನು ಈಗಾಗಲೇ ನಡೆಸಲಾಗುತ್ತಿದೆ. ಇದಲ್ಲದೆ, ಭಾರತವು ಬಾಹ್ಯಾಕಾಶಕ್ಕೆ ರೋಬೋಟ್ ವಿಮಾನಗಳನ್ನು ಕಳುಹಿಸುವ ಗುರಿಯನ್ನು ಹೊಂದಿದೆ ಮತ್ತು ಈ ಮಿಷನ್ ಅಡಿಯಲ್ಲಿ ‘ವಾಯುಮಿತ್ರ’ ಹೆಸರಿನ ಮಹಿಳಾ ರೋಬೋಟನ್ನು 2025 ರಲ್ಲಿ ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು. ರೋಬೋಟ್ ಗಗನಯಾತ್ರಿಯೊಬ್ಬ ಮಾಡಬಹುದಾದ ಎಲ್ಲಾ ಕಾರ್ಯಾಚರಣೆಗಳನ್ನು ನಡೆಸಿ ಭೂಮಿಗೆ ಮರಳಲಿದೆ” ಎಂದು ಅವರು ಮಾಹಿತಿ ನೀಡಿದರು.

“2023 ರ ಹೊಸ ಬಾಹ್ಯಾಕಾಶ ನೀತಿಯನ್ನು ಉಲ್ಲೇಖಿಸಿದ ಸಚಿವ ಡಾ. ಜಿತೇಂದ್ರ ಸಿಂಗ್, ಹೊಸ ನೀತಿಯು ಭಾರತದಲ್ಲಿ ಈ ವಲಯವನ್ನು ಮುಕ್ತಗೊಳಿಸಿದೆ ಮತ್ತು ಇದರಿಂದ ದೇಶದಲ್ಲಿ ಡಿಜಿಟಲ್ ಬಾಹ್ಯಾಕಾಶ ಸ್ಟಾರ್ಟ್ಅಪ್​​ಗಳ ಸಂಖ್ಯೆ ಹೆಚ್ಚಾಗುತ್ತಿದೆ. 2021 ರಲ್ಲಿ ಕೇವಲ ಒಂದು ಡಿಜಿಟಲ್ ಬಾಹ್ಯಾಕಾಶ ಸ್ಟಾರ್ಟ್ಅಪ್ ಇತ್ತು. ಈಗ ಈ ಸಂಖ್ಯೆ ಸುಮಾರು 300 ಕ್ಕೆ ಏರಿಕೆಯಾಗಿದೆ” ಎಂದು ಅವರು ತಿಳಿಸಿದರು. ಇತ್ತೀಚೆಗೆ ಸಂಪೂರ್ಣ 3ಡಿ ಮುದ್ರಿತ ಎಂಜಿನ್​ನೊಂದಿಗೆ ಅಗ್ನಿಕುಲ್ ಕಾಸ್ಮೋಸ್ ವಿಶ್ವದ ಮೊದಲ ರಾಕೆಟ್ ಉಡಾವಣೆ ಮಾಡಿರುವುದನ್ನು ಅವರು ಉಲ್ಲೇಖಿಸಿದರು. ಮೂಲಸೌಕರ್ಯವನ್ನು ಬಲಪಡಿಸಲು ಇಸ್ರೋ ಆವರಣದಲ್ಲಿ ಅಗ್ನಿಕುಲ್ ಕಾಸ್ಮೋಸ್ ಖಾಸಗಿ ಲಾಂಚ್ ಪ್ಯಾಡ್ ಅನ್ನು ಸಹ ಸ್ಥಾಪಿಸಿದೆ ಎಂದು ಸಚಿವರು ಹೇಳಿದರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror