ISRO ಒಂದಲ್ಲ ಒಂದು ಸಾಧನೆಗಳನ್ನು ಮಾಡುತ್ತಾ ದೇಶಕ್ಕೆ ಕೀರ್ತಿ ತರುತ್ತಿದೆ. ಇದೀಗ 2035ರ ವೇಳೆಗೆ ಭಾರತವು(India) ತನ್ನದೇಯಾದ ಸ್ವಂತ ಬಾಹ್ಯಾಕಾಶ ನಿಲ್ದಾಣವನ್ನು(Space station) ಸ್ಥಾಪಿಸುವ ನಿರೀಕ್ಷೆಯಿದೆ ಮತ್ತು ಇದಕ್ಕೆ ಭಾರತೀಯ ಅಂತರಿಕ್ಷ ನಿಲ್ದಾಣ (BAS) ಎಂದು ಹೆಸರಿಸಲಾಗುವುದು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
2024-25ರ ಕೇಂದ್ರ ಬಜೆಟ್ನಲ್ಲಿ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಡಿದ ಘೋಷಣೆಗಳು ಭವಿಷ್ಯದ ದೃಷ್ಟಿಕೋನವನ್ನು ಹೊಂದಿವೆ ಎಂದು ಸಚಿವರು ಅಭಿಪ್ರಾಯ ಪಟ್ಟರು. 2025 ರ ದ್ವಿತೀಯಾರ್ಧದ ವೇಳೆಗೆ ಭಾರತೀಯನೋರ್ವನನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು 2040 ರ ವೇಳೆಗೆ ಮೊದಲ ಬಾರಿಗೆ ಭಾರತೀಯನನ್ನು ಚಂದ್ರನ ಮೇಲೆ ಇಳಿಸುವ ಮಹತ್ವಾಕಾಂಕ್ಷೆಯ ಗುರಿಗಳನ್ನು ಹಾಕಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು. “2023 ರಲ್ಲಿ ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ 1,000 ಕೋಟಿ ರೂ. ಹೂಡಿಕೆ ಬಂದಿದೆ. ಮುಂದಿನ 10 ವರ್ಷಗಳಲ್ಲಿ ಬಾಹ್ಯಾಕಾಶ ಆರ್ಥಿಕತೆಯು ಐದು ಪಟ್ಟು ಅಥವಾ ಸುಮಾರು 44 ಬಿಲಿಯನ್ ಡಾಲರ್ಗೆ ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಇದು ಭಾರತದಿಂದ ಪ್ರತಿಭಾ ಪಲಾಯನವನ್ನು ಅಂತ್ಯಗೊಳಿಸಲಿದೆ” ಎಂದು ಸಚಿವ ಸಿಂಗ್ ತಿಳಿಸಿದರು.
“ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ‘ಗಗನಯಾನ್’ ಕೋವಿಡ್ನಿಂದಾಗಿ ವಿಳಂಬವಾಗಿದ್ದು, ಇದು ಮುಂದಿನ ವರ್ಷ ನಡೆಯಲಿದೆ ಹಾಗೂ ಇದಕ್ಕಾಗಿ ಪ್ರಾಯೋಗಿಕ ಹಾರಾಟ ಯಾನಗಳನ್ನು ಈಗಾಗಲೇ ನಡೆಸಲಾಗುತ್ತಿದೆ. ಇದಲ್ಲದೆ, ಭಾರತವು ಬಾಹ್ಯಾಕಾಶಕ್ಕೆ ರೋಬೋಟ್ ವಿಮಾನಗಳನ್ನು ಕಳುಹಿಸುವ ಗುರಿಯನ್ನು ಹೊಂದಿದೆ ಮತ್ತು ಈ ಮಿಷನ್ ಅಡಿಯಲ್ಲಿ ‘ವಾಯುಮಿತ್ರ’ ಹೆಸರಿನ ಮಹಿಳಾ ರೋಬೋಟನ್ನು 2025 ರಲ್ಲಿ ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು. ರೋಬೋಟ್ ಗಗನಯಾತ್ರಿಯೊಬ್ಬ ಮಾಡಬಹುದಾದ ಎಲ್ಲಾ ಕಾರ್ಯಾಚರಣೆಗಳನ್ನು ನಡೆಸಿ ಭೂಮಿಗೆ ಮರಳಲಿದೆ” ಎಂದು ಅವರು ಮಾಹಿತಿ ನೀಡಿದರು.
“2023 ರ ಹೊಸ ಬಾಹ್ಯಾಕಾಶ ನೀತಿಯನ್ನು ಉಲ್ಲೇಖಿಸಿದ ಸಚಿವ ಡಾ. ಜಿತೇಂದ್ರ ಸಿಂಗ್, ಹೊಸ ನೀತಿಯು ಭಾರತದಲ್ಲಿ ಈ ವಲಯವನ್ನು ಮುಕ್ತಗೊಳಿಸಿದೆ ಮತ್ತು ಇದರಿಂದ ದೇಶದಲ್ಲಿ ಡಿಜಿಟಲ್ ಬಾಹ್ಯಾಕಾಶ ಸ್ಟಾರ್ಟ್ಅಪ್ಗಳ ಸಂಖ್ಯೆ ಹೆಚ್ಚಾಗುತ್ತಿದೆ. 2021 ರಲ್ಲಿ ಕೇವಲ ಒಂದು ಡಿಜಿಟಲ್ ಬಾಹ್ಯಾಕಾಶ ಸ್ಟಾರ್ಟ್ಅಪ್ ಇತ್ತು. ಈಗ ಈ ಸಂಖ್ಯೆ ಸುಮಾರು 300 ಕ್ಕೆ ಏರಿಕೆಯಾಗಿದೆ” ಎಂದು ಅವರು ತಿಳಿಸಿದರು. ಇತ್ತೀಚೆಗೆ ಸಂಪೂರ್ಣ 3ಡಿ ಮುದ್ರಿತ ಎಂಜಿನ್ನೊಂದಿಗೆ ಅಗ್ನಿಕುಲ್ ಕಾಸ್ಮೋಸ್ ವಿಶ್ವದ ಮೊದಲ ರಾಕೆಟ್ ಉಡಾವಣೆ ಮಾಡಿರುವುದನ್ನು ಅವರು ಉಲ್ಲೇಖಿಸಿದರು. ಮೂಲಸೌಕರ್ಯವನ್ನು ಬಲಪಡಿಸಲು ಇಸ್ರೋ ಆವರಣದಲ್ಲಿ ಅಗ್ನಿಕುಲ್ ಕಾಸ್ಮೋಸ್ ಖಾಸಗಿ ಲಾಂಚ್ ಪ್ಯಾಡ್ ಅನ್ನು ಸಹ ಸ್ಥಾಪಿಸಿದೆ ಎಂದು ಸಚಿವರು ಹೇಳಿದರು.
– ಅಂತರ್ಜಾಲ ಮಾಹಿತಿ
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…