MIRROR FOCUS

#GaganyaanCraft | ಮತ್ತೊಂದು ಸಾಧನೆಯತ್ತ ಇಸ್ರೋ | 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಒಂದಾದ ಮೇಲೊಂದರಂತೆ ಸಾಧನೆಯನ್ನು ಮಾಡುತ್ತಲೇ ಇದೆ. ಚಂದ್ರಯಾನ-3 ಮತ್ತು ಆದಿತ್ಯ ಎಲ್‌1#Aditya L1 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. 2024ರಲ್ಲಿ ಮಾನವರನ್ನು ಕೊಂಡೊಯ್ಯಲು ಸಜ್ಜಾಗಿರುವ ಗಗನಯಾನ ಬಾಹ್ಯಾಕಾಶ ನೌಕೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.

Advertisement
Advertisement
ಗಗನಯಾನ ಕಾರ್ಯಾಚರಣೆಗಾಗಿ ಶೀಘ್ರದಲ್ಲೇ ಮಾನವರಹಿತ ಹಾರಾಟ ಪರೀಕ್ಷೆಯನ್ನು ಪ್ರಾರಂಭಿಸುವುದಾಗಿ ಇಸ್ರೋ ಹೇಳಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಇಸ್ರೋ, ಗಗನಯಾನ ಮಿಷನ್‌ಗಾಗಿ ಮಾನವರಹಿತ ಹಾರಾಟ ಪರೀಕ್ಷೆಗಳನ್ನು ಇಸ್ರೋ ಪ್ರಾರಂಭಿಸಲಿದೆ. ಕ್ರೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದೆ.

 

ಗಗನಯಾನ ಯೋಜನೆಯು 2024 ರಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಯೋಜನೆಯಲ್ಲಿ ಮೂವರು ಗಗನಯಾತ್ರಿಗಳನ್ನು 400 ಕಿ.ಮೀ ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ಯಲಾಗುವುದು. ನಂತರ ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು, ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸಲಾಗುತ್ತದೆ. ಕ್ರೂ ಎಸ್ಕೇಪ್‌ ಸಿಸ್ಟಮ್‌ ಗಗನಯಾನ ಯೋಜನೆಯ ಬಹುದೊಡ್ಡ ಅಂಶವಾಗಿದ್ದು, ಡೈನಮಿಕ್‌ ಪ್ರಶೆರ್‌ ಹಾಗೂ ಟ್ರಾನ್ಸಾನಿಕ್‌ ಕಂಡೀಶನ್‌ಗಳಲ್ಲಿಯೂ ಈ ವ್ಯವಸ್ಥೆ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ. ಅದರ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಿಕೊಳ್ಳುವ ಉದ್ದೇಶವನ್ನು ಪರೀಕ್ಷಾರ್ಥ ಉಡಾವಣೆ ಹೊಂದಿದೆ. ಒಟ್ಟು 4 ಪರೀಕ್ಷಾರ್ಥ ಉಡಾವಣೆ ನಡೆಯಲಿದ್ದು, ಈ ತಿಂಗಳ ಅಂತ್ಯದಲ್ಲಿ ಟಿವಿ-ಡಿ1 ಎನ್ನುವ ಪರೀಕ್ಷಾರ್ಥ ವಾಹನ ಉಡಾವಣೆಯಾಗಲಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

43 minutes ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

55 minutes ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

1 hour ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

1 hour ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

1 hour ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

2 hours ago