Advertisement
MIRROR FOCUS

#GaganyaanCraft | ಮತ್ತೊಂದು ಸಾಧನೆಯತ್ತ ಇಸ್ರೋ | 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌ |

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಒಂದಾದ ಮೇಲೊಂದರಂತೆ ಸಾಧನೆಯನ್ನು ಮಾಡುತ್ತಲೇ ಇದೆ. ಚಂದ್ರಯಾನ-3 ಮತ್ತು ಆದಿತ್ಯ ಎಲ್‌1#Aditya L1 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. 2024ರಲ್ಲಿ ಮಾನವರನ್ನು ಕೊಂಡೊಯ್ಯಲು ಸಜ್ಜಾಗಿರುವ ಗಗನಯಾನ ಬಾಹ್ಯಾಕಾಶ ನೌಕೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಗಗನಯಾನ ಕಾರ್ಯಾಚರಣೆಗಾಗಿ ಶೀಘ್ರದಲ್ಲೇ ಮಾನವರಹಿತ ಹಾರಾಟ ಪರೀಕ್ಷೆಯನ್ನು ಪ್ರಾರಂಭಿಸುವುದಾಗಿ ಇಸ್ರೋ ಹೇಳಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಇಸ್ರೋ, ಗಗನಯಾನ ಮಿಷನ್‌ಗಾಗಿ ಮಾನವರಹಿತ ಹಾರಾಟ ಪರೀಕ್ಷೆಗಳನ್ನು ಇಸ್ರೋ ಪ್ರಾರಂಭಿಸಲಿದೆ. ಕ್ರೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದೆ.

 

ಗಗನಯಾನ ಯೋಜನೆಯು 2024 ರಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಯೋಜನೆಯಲ್ಲಿ ಮೂವರು ಗಗನಯಾತ್ರಿಗಳನ್ನು 400 ಕಿ.ಮೀ ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ಯಲಾಗುವುದು. ನಂತರ ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು, ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸಲಾಗುತ್ತದೆ. ಕ್ರೂ ಎಸ್ಕೇಪ್‌ ಸಿಸ್ಟಮ್‌ ಗಗನಯಾನ ಯೋಜನೆಯ ಬಹುದೊಡ್ಡ ಅಂಶವಾಗಿದ್ದು, ಡೈನಮಿಕ್‌ ಪ್ರಶೆರ್‌ ಹಾಗೂ ಟ್ರಾನ್ಸಾನಿಕ್‌ ಕಂಡೀಶನ್‌ಗಳಲ್ಲಿಯೂ ಈ ವ್ಯವಸ್ಥೆ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ. ಅದರ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಿಕೊಳ್ಳುವ ಉದ್ದೇಶವನ್ನು ಪರೀಕ್ಷಾರ್ಥ ಉಡಾವಣೆ ಹೊಂದಿದೆ. ಒಟ್ಟು 4 ಪರೀಕ್ಷಾರ್ಥ ಉಡಾವಣೆ ನಡೆಯಲಿದ್ದು, ಈ ತಿಂಗಳ ಅಂತ್ಯದಲ್ಲಿ ಟಿವಿ-ಡಿ1 ಎನ್ನುವ ಪರೀಕ್ಷಾರ್ಥ ವಾಹನ ಉಡಾವಣೆಯಾಗಲಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

4 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

21 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

23 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago