Advertisement
MIRROR FOCUS

#GaganyaanCraft | ಮತ್ತೊಂದು ಸಾಧನೆಯತ್ತ ಇಸ್ರೋ | 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌ |

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಒಂದಾದ ಮೇಲೊಂದರಂತೆ ಸಾಧನೆಯನ್ನು ಮಾಡುತ್ತಲೇ ಇದೆ. ಚಂದ್ರಯಾನ-3 ಮತ್ತು ಆದಿತ್ಯ ಎಲ್‌1#Aditya L1 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. 2024ರಲ್ಲಿ ಮಾನವರನ್ನು ಕೊಂಡೊಯ್ಯಲು ಸಜ್ಜಾಗಿರುವ ಗಗನಯಾನ ಬಾಹ್ಯಾಕಾಶ ನೌಕೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಗಗನಯಾನ ಕಾರ್ಯಾಚರಣೆಗಾಗಿ ಶೀಘ್ರದಲ್ಲೇ ಮಾನವರಹಿತ ಹಾರಾಟ ಪರೀಕ್ಷೆಯನ್ನು ಪ್ರಾರಂಭಿಸುವುದಾಗಿ ಇಸ್ರೋ ಹೇಳಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಇಸ್ರೋ, ಗಗನಯಾನ ಮಿಷನ್‌ಗಾಗಿ ಮಾನವರಹಿತ ಹಾರಾಟ ಪರೀಕ್ಷೆಗಳನ್ನು ಇಸ್ರೋ ಪ್ರಾರಂಭಿಸಲಿದೆ. ಕ್ರೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದೆ.

 

ಗಗನಯಾನ ಯೋಜನೆಯು 2024 ರಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಯೋಜನೆಯಲ್ಲಿ ಮೂವರು ಗಗನಯಾತ್ರಿಗಳನ್ನು 400 ಕಿ.ಮೀ ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ಯಲಾಗುವುದು. ನಂತರ ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು, ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸಲಾಗುತ್ತದೆ. ಕ್ರೂ ಎಸ್ಕೇಪ್‌ ಸಿಸ್ಟಮ್‌ ಗಗನಯಾನ ಯೋಜನೆಯ ಬಹುದೊಡ್ಡ ಅಂಶವಾಗಿದ್ದು, ಡೈನಮಿಕ್‌ ಪ್ರಶೆರ್‌ ಹಾಗೂ ಟ್ರಾನ್ಸಾನಿಕ್‌ ಕಂಡೀಶನ್‌ಗಳಲ್ಲಿಯೂ ಈ ವ್ಯವಸ್ಥೆ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ. ಅದರ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಿಕೊಳ್ಳುವ ಉದ್ದೇಶವನ್ನು ಪರೀಕ್ಷಾರ್ಥ ಉಡಾವಣೆ ಹೊಂದಿದೆ. ಒಟ್ಟು 4 ಪರೀಕ್ಷಾರ್ಥ ಉಡಾವಣೆ ನಡೆಯಲಿದ್ದು, ಈ ತಿಂಗಳ ಅಂತ್ಯದಲ್ಲಿ ಟಿವಿ-ಡಿ1 ಎನ್ನುವ ಪರೀಕ್ಷಾರ್ಥ ವಾಹನ ಉಡಾವಣೆಯಾಗಲಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

17 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago