Advertisement
MIRROR FOCUS

#GaganyaanCraft | ಮತ್ತೊಂದು ಸಾಧನೆಯತ್ತ ಇಸ್ರೋ | 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌ |

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಒಂದಾದ ಮೇಲೊಂದರಂತೆ ಸಾಧನೆಯನ್ನು ಮಾಡುತ್ತಲೇ ಇದೆ. ಚಂದ್ರಯಾನ-3 ಮತ್ತು ಆದಿತ್ಯ ಎಲ್‌1#Aditya L1 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. 2024ರಲ್ಲಿ ಮಾನವರನ್ನು ಕೊಂಡೊಯ್ಯಲು ಸಜ್ಜಾಗಿರುವ ಗಗನಯಾನ ಬಾಹ್ಯಾಕಾಶ ನೌಕೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಗಗನಯಾನ ಕಾರ್ಯಾಚರಣೆಗಾಗಿ ಶೀಘ್ರದಲ್ಲೇ ಮಾನವರಹಿತ ಹಾರಾಟ ಪರೀಕ್ಷೆಯನ್ನು ಪ್ರಾರಂಭಿಸುವುದಾಗಿ ಇಸ್ರೋ ಹೇಳಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಇಸ್ರೋ, ಗಗನಯಾನ ಮಿಷನ್‌ಗಾಗಿ ಮಾನವರಹಿತ ಹಾರಾಟ ಪರೀಕ್ಷೆಗಳನ್ನು ಇಸ್ರೋ ಪ್ರಾರಂಭಿಸಲಿದೆ. ಕ್ರೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದೆ.

 

ಗಗನಯಾನ ಯೋಜನೆಯು 2024 ರಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಯೋಜನೆಯಲ್ಲಿ ಮೂವರು ಗಗನಯಾತ್ರಿಗಳನ್ನು 400 ಕಿ.ಮೀ ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ಯಲಾಗುವುದು. ನಂತರ ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು, ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸಲಾಗುತ್ತದೆ. ಕ್ರೂ ಎಸ್ಕೇಪ್‌ ಸಿಸ್ಟಮ್‌ ಗಗನಯಾನ ಯೋಜನೆಯ ಬಹುದೊಡ್ಡ ಅಂಶವಾಗಿದ್ದು, ಡೈನಮಿಕ್‌ ಪ್ರಶೆರ್‌ ಹಾಗೂ ಟ್ರಾನ್ಸಾನಿಕ್‌ ಕಂಡೀಶನ್‌ಗಳಲ್ಲಿಯೂ ಈ ವ್ಯವಸ್ಥೆ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ. ಅದರ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಿಕೊಳ್ಳುವ ಉದ್ದೇಶವನ್ನು ಪರೀಕ್ಷಾರ್ಥ ಉಡಾವಣೆ ಹೊಂದಿದೆ. ಒಟ್ಟು 4 ಪರೀಕ್ಷಾರ್ಥ ಉಡಾವಣೆ ನಡೆಯಲಿದ್ದು, ಈ ತಿಂಗಳ ಅಂತ್ಯದಲ್ಲಿ ಟಿವಿ-ಡಿ1 ಎನ್ನುವ ಪರೀಕ್ಷಾರ್ಥ ವಾಹನ ಉಡಾವಣೆಯಾಗಲಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

8 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

9 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago