ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಒಂದಾದ ಮೇಲೊಂದರಂತೆ ಸಾಧನೆಯನ್ನು ಮಾಡುತ್ತಲೇ ಇದೆ. ಚಂದ್ರಯಾನ-3 ಮತ್ತು ಆದಿತ್ಯ ಎಲ್1#Aditya L1 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. 2024ರಲ್ಲಿ ಮಾನವರನ್ನು ಕೊಂಡೊಯ್ಯಲು ಸಜ್ಜಾಗಿರುವ ಗಗನಯಾನ ಬಾಹ್ಯಾಕಾಶ ನೌಕೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.
ಗಗನಯಾನ ಯೋಜನೆಯು 2024 ರಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಯೋಜನೆಯಲ್ಲಿ ಮೂವರು ಗಗನಯಾತ್ರಿಗಳನ್ನು 400 ಕಿ.ಮೀ ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ಯಲಾಗುವುದು. ನಂತರ ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು, ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸಲಾಗುತ್ತದೆ. ಕ್ರೂ ಎಸ್ಕೇಪ್ ಸಿಸ್ಟಮ್ ಗಗನಯಾನ ಯೋಜನೆಯ ಬಹುದೊಡ್ಡ ಅಂಶವಾಗಿದ್ದು, ಡೈನಮಿಕ್ ಪ್ರಶೆರ್ ಹಾಗೂ ಟ್ರಾನ್ಸಾನಿಕ್ ಕಂಡೀಶನ್ಗಳಲ್ಲಿಯೂ ಈ ವ್ಯವಸ್ಥೆ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ. ಅದರ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಿಕೊಳ್ಳುವ ಉದ್ದೇಶವನ್ನು ಪರೀಕ್ಷಾರ್ಥ ಉಡಾವಣೆ ಹೊಂದಿದೆ. ಒಟ್ಟು 4 ಪರೀಕ್ಷಾರ್ಥ ಉಡಾವಣೆ ನಡೆಯಲಿದ್ದು, ಈ ತಿಂಗಳ ಅಂತ್ಯದಲ್ಲಿ ಟಿವಿ-ಡಿ1 ಎನ್ನುವ ಪರೀಕ್ಷಾರ್ಥ ವಾಹನ ಉಡಾವಣೆಯಾಗಲಿದೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…