Advertisement
MIRROR FOCUS

#GaganyaanCraft | ಮತ್ತೊಂದು ಸಾಧನೆಯತ್ತ ಇಸ್ರೋ | 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌ |

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಒಂದಾದ ಮೇಲೊಂದರಂತೆ ಸಾಧನೆಯನ್ನು ಮಾಡುತ್ತಲೇ ಇದೆ. ಚಂದ್ರಯಾನ-3 ಮತ್ತು ಆದಿತ್ಯ ಎಲ್‌1#Aditya L1 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. 2024ರಲ್ಲಿ ಮಾನವರನ್ನು ಕೊಂಡೊಯ್ಯಲು ಸಜ್ಜಾಗಿರುವ ಗಗನಯಾನ ಬಾಹ್ಯಾಕಾಶ ನೌಕೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಗಗನಯಾನ ಕಾರ್ಯಾಚರಣೆಗಾಗಿ ಶೀಘ್ರದಲ್ಲೇ ಮಾನವರಹಿತ ಹಾರಾಟ ಪರೀಕ್ಷೆಯನ್ನು ಪ್ರಾರಂಭಿಸುವುದಾಗಿ ಇಸ್ರೋ ಹೇಳಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಇಸ್ರೋ, ಗಗನಯಾನ ಮಿಷನ್‌ಗಾಗಿ ಮಾನವರಹಿತ ಹಾರಾಟ ಪರೀಕ್ಷೆಗಳನ್ನು ಇಸ್ರೋ ಪ್ರಾರಂಭಿಸಲಿದೆ. ಕ್ರೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದೆ.

 

Advertisement

ಗಗನಯಾನ ಯೋಜನೆಯು 2024 ರಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಯೋಜನೆಯಲ್ಲಿ ಮೂವರು ಗಗನಯಾತ್ರಿಗಳನ್ನು 400 ಕಿ.ಮೀ ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ಯಲಾಗುವುದು. ನಂತರ ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು, ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸಲಾಗುತ್ತದೆ. ಕ್ರೂ ಎಸ್ಕೇಪ್‌ ಸಿಸ್ಟಮ್‌ ಗಗನಯಾನ ಯೋಜನೆಯ ಬಹುದೊಡ್ಡ ಅಂಶವಾಗಿದ್ದು, ಡೈನಮಿಕ್‌ ಪ್ರಶೆರ್‌ ಹಾಗೂ ಟ್ರಾನ್ಸಾನಿಕ್‌ ಕಂಡೀಶನ್‌ಗಳಲ್ಲಿಯೂ ಈ ವ್ಯವಸ್ಥೆ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ. ಅದರ ಕಾರ್ಯನಿರ್ವಹಣೆಯನ್ನು ಖಾತರಿಪಡಿಸಿಕೊಳ್ಳುವ ಉದ್ದೇಶವನ್ನು ಪರೀಕ್ಷಾರ್ಥ ಉಡಾವಣೆ ಹೊಂದಿದೆ. ಒಟ್ಟು 4 ಪರೀಕ್ಷಾರ್ಥ ಉಡಾವಣೆ ನಡೆಯಲಿದ್ದು, ಈ ತಿಂಗಳ ಅಂತ್ಯದಲ್ಲಿ ಟಿವಿ-ಡಿ1 ಎನ್ನುವ ಪರೀಕ್ಷಾರ್ಥ ವಾಹನ ಉಡಾವಣೆಯಾಗಲಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

19 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

22 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

23 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago