ಮಾನವರಹಿತ ಗಗನಯಾನ ಉಡಾವಣೆಯ ಕಾರ್ಯ ಶೇಕಡ 90 ರಷ್ಟು ಪೂರ್ಣಗೊಂಡಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಹಾರಾಟ ಮಿಷನ್ ಜಿ-1 ಡಿಸೆಂಬರ್ ಮೊದಲ ವಾರದಲ್ಲಿ ಉಡಾವಣೆಗೆ ಸಜ್ಜಾಗಿದೆ ಎಂದು ಹೇಳಿದ್ದಾರೆ. ಎಸ್ಕೇಪ್ ಸಿಸ್ಟಮ್, ಪ್ಯಾರಾಚೂಟ್ ಮಾಡ್ಯೂಲ್, ಸಂವಹನ ವ್ಯವಸ್ಥೆಗಳು ಮತ್ತು ಇತರ ವ್ಯವಸ್ಥೆಗಳೊಂದಿಗೆ ಕ್ರ್ಯೂ ಮಾಡಲ್ ಪರೀಕ್ಷೆಗಳು ಯಶಸ್ವಿಯಾಗಿದ್ದು, ವ್ಯೋಮಮಿತ್ರ ಹ್ಯುಮನಾಯ್ಡ್ ಡಿಸೆಂಬರ್ನಲ್ಲಿ ಭೂಮಿಯ ಕೆಳಕಕ್ಷೆಗೆ ಹಾರಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಮಾನವಸಹಿತ ಗಗನಯಾನದಲ್ಲಿ ಮೂವರು ಭಾರತೀಯ ಗಗನಯಾತ್ರಿಗಳು 2027ಕ್ಕೆ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…