Advertisement
MIRROR FOCUS

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Share

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹಗ್ಗ ಜಗ್ಗಾಟ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ(Congress govt) ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಹಿನ್ನೆಲೆ ರಾಜ್ಯದ ಬರ ಪರಿಹಾರ (Drought Relief )ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ನೀಡಿದ ಅಂತರ್ ಸಚಿವಾಲಯದ ವರದಿಯನ್ನು (Inter Ministerial Central Team’s Report) ಸಲ್ಲಿಸುವಂತೆ ಸುಪ್ರೀಂಕೋರ್ಟ್ (Supreme Court) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಮುಂದಿನ ವಾರಕ್ಕೆ ವಿಚಾರಣೆ ಮುಂದೂಡಿತು.

Advertisement
Advertisement
ಇಂದಿನ ವಿಚಾರಣೆಯಲ್ಲಿ ಕರ್ನಾಟಕ ಸರ್ಕಾರದ (Karnataka Government) ಪರ ವಾದ ಮಂಡಿಸಿದ ಕಪಿಲ್ ಸಿಬಲ್ (Kapil Sibal), ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ ಅದಕ್ಕಾಗಿ ಧನ್ಯವಾದಗಳು. ಆದರೆ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ ಕಡಿಮೆಯಾಗಿದೆ ಇದು ಅಸಮಂಜಸ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಪರ ವಾದಿಸಿದ ಅರ್ಟಾನಿ ಜನರಲ್ ಆರ್ ವೆಂಕಟರಮಣಿ, ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಪರಿಹಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಇದೇ ಅಂಶವನ್ನು ಪ್ರಸ್ತಾಪಿಸಿದ ಸಿಬಲ್, ರಾಜ್ಯಕ್ಕೆ ಆಗಮಿಸಿದ ತಜ್ಞರ ತಂಡದ ವರದಿ ಏನು ಎಂಬುದು ರಾಜ್ಯಕ್ಕೆ ತಿಳಿದಿಲ್ಲ, ಅದರ ಪ್ರತಿಯನ್ನು ರಾಜ್ಯಕ್ಕೆ ನೀಡಿಲ್ಲ. ಹೀಗಾಗಿ ಆ ಪ್ರತಿಯನ್ನು ಕೋರ್ಟ್ ಮುಂದೆ ಇಡಬೇಕು. ಅದರ ಅನ್ವಯ ಪರಿಹಾರ ನೀಡುವುದಕ್ಕೆ ನಮ್ಮದು ಯಾವುದೇ ತಕರಾರು ಇಲ್ಲ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಲು ಸಮಯ ಬೇಕು ಎಂದು ಅರ್ಟಾನಿ ಜನರಲ್ ಕೇಳಿದರು‌. ಇದಕ್ಕೆ ನಿರಾಕರಿಸಿದ ಪೀಠ ಮುಂದಿನ ಸೋಮವಾರದೊಳಗೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿತು.

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿದ್ದು ಈ ಪರಿಹಾರದ ಮೊತ್ತ ಕಡಿಮೆಯಾಗಿದೆ ಎಂದು ಈಗ ಮತ್ತೆ ತಕರಾರು ಎತ್ತಿದೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

15 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

16 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

24 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago